<p><strong>ಚಿಂತಾಮಣಿ</strong>: ತಾಲ್ಲೂಕಿನ ಕಸಬಾ ಹೋಬಳಿಯ ಸೀಕಲ್ ಗ್ರಾಮದಲ್ಲಿ ಶುಕ್ರವಾರ ಹಾಡು ಹಗಲಲ್ಲೇ ಮನೆಯ ಬೀಗ ಮುರಿದು ₹3 ಲಕ್ಷ ನಗದು ಹಾಗೂ ₹3.4 ಲಕ್ಷ ಮೌಲ್ಯದ ಬೆಲೆ ಬಾಳುವ ಆಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.</p>.<p>ಗ್ರಾಮದ ನಿವಾಸಿ ನಾರಾಯಣಸ್ವಾಮಿ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಎಂದಿನಂತೆ ಕುರಿ ಮೇಯಿಸಲು ಹೋಗಿದ್ದರು. ಪತ್ನಿ ಪಾರ್ವತಮ್ಮ ಮನೆಗೆ ಬೀಗ ಹಾಕಿಕೊಂಡು ಸಮೀಪವೇ ಇರುವ ಚೌಡೇಶ್ವರಿ ದೇವಾಲಯಕ್ಕೆ ಹೋಗಿದ್ದರು. </p>.<p>ಮನೆಯವರು ಹೊರ ಹೋಗುವುದನ್ನು ಕಾದಿದ್ದ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯ ಹಾಲ್ನಲ್ಲಿದ್ದ ಬೀರುವಿನ ಬೀಗ ಒಡೆದು ಅದರಲ್ಲಿದ್ದ ₹3 ಲಕ್ಷ ನಗದು, ಆಭರಣ ಹಾಗೂ ಒಂದು ಮೊಬೈಲ್ ಫೋನ್ ಕಳ್ಳತನ ಮಾಡಿದ್ದಾರೆ.</p>.<p>ಪಾರ್ವತಮ್ಮ ಅವರು ಬೆಳ್ಳಿಗೆ 10.30ಕ್ಕೆ ಮನೆಗೆ ವಾಪಸ್ ಆದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ.</p>.<p>ತಮ್ಮ ಬಳಿ 100 ಕುರಿಗಳಿದ್ದವು. ಮನೆ ಕಟ್ಟುವ ಸಲುವಾಗಿ ಈಚೆಗೆ 75 ಕುರಿ ಮಾರಾಟ ಮಾಡಿ, ₹2.70 ಲಕ್ಷ ಹಾಗೂ ಮಾವಿನ ತೋಪು ಮಾರಾಟದಿಂದ ₹1.80 ಲಕ್ಷ ಹಣ ಬಂದಿತ್ತು. ಇವೆರಡನ್ನು ಸೇರಿಸಿ ಮನೆಕಟ್ಟುವ ಉದ್ದೇಶದಿಂದ ಮನೆಯ ಬೀರುವಿನಲ್ಲಿ ಇಟ್ಟಿದ್ದೇವು ಎಂದು ನಾರಾಯಣಸ್ವಾಮಿ ತಿಳಿಸಿದ್ದಾರೆ.</p>.<p>ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಕಸಬಾ ಹೋಬಳಿಯ ಸೀಕಲ್ ಗ್ರಾಮದಲ್ಲಿ ಶುಕ್ರವಾರ ಹಾಡು ಹಗಲಲ್ಲೇ ಮನೆಯ ಬೀಗ ಮುರಿದು ₹3 ಲಕ್ಷ ನಗದು ಹಾಗೂ ₹3.4 ಲಕ್ಷ ಮೌಲ್ಯದ ಬೆಲೆ ಬಾಳುವ ಆಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.</p>.<p>ಗ್ರಾಮದ ನಿವಾಸಿ ನಾರಾಯಣಸ್ವಾಮಿ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಎಂದಿನಂತೆ ಕುರಿ ಮೇಯಿಸಲು ಹೋಗಿದ್ದರು. ಪತ್ನಿ ಪಾರ್ವತಮ್ಮ ಮನೆಗೆ ಬೀಗ ಹಾಕಿಕೊಂಡು ಸಮೀಪವೇ ಇರುವ ಚೌಡೇಶ್ವರಿ ದೇವಾಲಯಕ್ಕೆ ಹೋಗಿದ್ದರು. </p>.<p>ಮನೆಯವರು ಹೊರ ಹೋಗುವುದನ್ನು ಕಾದಿದ್ದ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯ ಹಾಲ್ನಲ್ಲಿದ್ದ ಬೀರುವಿನ ಬೀಗ ಒಡೆದು ಅದರಲ್ಲಿದ್ದ ₹3 ಲಕ್ಷ ನಗದು, ಆಭರಣ ಹಾಗೂ ಒಂದು ಮೊಬೈಲ್ ಫೋನ್ ಕಳ್ಳತನ ಮಾಡಿದ್ದಾರೆ.</p>.<p>ಪಾರ್ವತಮ್ಮ ಅವರು ಬೆಳ್ಳಿಗೆ 10.30ಕ್ಕೆ ಮನೆಗೆ ವಾಪಸ್ ಆದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ.</p>.<p>ತಮ್ಮ ಬಳಿ 100 ಕುರಿಗಳಿದ್ದವು. ಮನೆ ಕಟ್ಟುವ ಸಲುವಾಗಿ ಈಚೆಗೆ 75 ಕುರಿ ಮಾರಾಟ ಮಾಡಿ, ₹2.70 ಲಕ್ಷ ಹಾಗೂ ಮಾವಿನ ತೋಪು ಮಾರಾಟದಿಂದ ₹1.80 ಲಕ್ಷ ಹಣ ಬಂದಿತ್ತು. ಇವೆರಡನ್ನು ಸೇರಿಸಿ ಮನೆಕಟ್ಟುವ ಉದ್ದೇಶದಿಂದ ಮನೆಯ ಬೀರುವಿನಲ್ಲಿ ಇಟ್ಟಿದ್ದೇವು ಎಂದು ನಾರಾಯಣಸ್ವಾಮಿ ತಿಳಿಸಿದ್ದಾರೆ.</p>.<p>ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>