<p>ಚಿಕ್ಕಬಳ್ಳಾಪುರ: ತಂತ್ರಜ್ಞಾನದ ಹೊಡೆತಕ್ಕೆ ಸಿಲುಕಿ ಕುಲ ಕಸಬುಗಳು ಮೂಲೆಗುಂಪಾಗಿವೆ. ಹೀಗೆ ನಿರ್ಲಕ್ಷ್ಯಕ್ಕೆ ಒಳಗಾದ ವೃತ್ತಿಗಳಲ್ಲಿ ಕುಲುಮೆ ಕೆಲಸವೂ ಒಂದು. ಈ ಪಾರಂಪರಿಕ ವೃತ್ತಿ ಕಣ್ಮರೆ ಆಗುತ್ತಿರುವ ಹೊತ್ತಿನಲ್ಲಿ ಮಂಜುನಾಥ ಆಚಾರಿ ಅದನ್ನು ಮುಂದುವರಿಸಿದ್ದಾರೆ.</p>.<p>ನಗರದ ಚಾಮರಾಜಪೇಟೆಯ ರೈಲ್ವೆ ನಿಲ್ದಾಣ ಬಳಿ ಕುಲಮೆ ಕೆಲಸ ಮಾಡುವ ಮಂಜುನಾಥ ಪೂರ್ವಿಕರ ಬಳುವಳಿಯಾದ ಕುಲುಮೆ ಕಾಯಕದಲ್ಲಿ ತೊಡಗಿದ್ದಾರೆ. ಐದು ದಶಕಗಳಿಂದ ಕೃಷಿ ಉಪಕರಣಗಳನ್ನು ದೇಸಿ ಪದ್ಧತಿಯಲ್ಲಿ ತಯಾರಿಸುತ್ತಿದ್ದಾರೆ. ಆ ಮೂಲಕ ರೈತರಿಗೂ ನೆರವಾಗುತ್ತಿದ್ದಾರೆ.</p>.<p>‘ನಮ್ದು ವಿಶ್ವಕರ್ಮ ಸಮುದಾಯ. ಹಾಗಾಗಿ ಈ ಕುಲುಮೆ ಕೆಲಸ ಹಿರಿಯರಿಂದ ನನ್ನ ಕೈಗೆ ಬಂದಿದೆ. ಈ ಕಸುಬು ಬಿಟ್ಟರೆ ನನಗೆ ಬೇರೆ ಗೊತ್ತಿಲ್ಲ. ಇದನ್ನೇ ದೇವರು ಅಂತ ನಂಬಿಕೊಂಡಿರುವ ನಾವು ಬೆಳಿಗ್ಗೆ 8 ಗಂಟೆಗೆ ಬಂದು ಪೂಜೆ ಮಾಡಿ, ಕುಲುಮೆ ಕೆಲಸ ಆರಂಭಿಸಿದರೆ ಸಂಜೆ ಐದಾರು ಗಂಟೆಗೆ ಮನೆಗೆ ಹೋಗುತ್ತೇನೆ’ ಎನ್ನುತ್ತಾರೆ ಮಂಜುನಾಥ ಆಚಾರಿ ಅವರು.</p>.<p>ವ್ಯವಸಾಯಕ್ಕೆ ಬೇಕಾದ ಕುಡುಗೋಲು, ಮಚ್ಚು, ಕೊಡಲಿ, ಅಗೆಯೊ ಗುದ್ದಲಿ, ಪಿಕಾಸಿ, ಗಡಾರಿ, ಸಲಿಕೆ, ಬಾಚಿ, ಉಳಿಗಳು, ನೇಗಿಲು ಚಿಪ್ಪುಗಳು, ಕಳೆ ತೆಗೆಯೊ ಬರವಾರೆಗಳನ್ನು ಮಾಡಿ ಕೊಡ್ತೇನೆ ಎಂದರು.</p>.<p>ಮೊದಲು ರೈತರು ವ್ಯವಸಾಯಕ್ಕೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಮಾಡಿಸಿಕೊಳ್ಳುತ್ತಿದ್ದರು. ಅದಕ್ಕೆ ಪ್ರತಿಯಾಗಿ ಧಾನ್ಯ ಕೊಡುತ್ತಿದ್ದರು. ರೈತರ ಮನೆಗಳಿಗೆ ಹೋದರೆ ಪ್ರೀತಿಯಿಂದ ಬರಮಾಡಿಕೊಂಡು ಊಟ ಬಡಿಸಿ ಅಕ್ಕರೆ ತೋರುತ್ತಿದ್ದರು. ಉಳುಮೆ ಯಂತ್ರಗಳು ಬಂದ ಮೇಲೆ ಕೃಷಿ ಪದ್ಧತಿ ಬದಲಾಗಿದೆ ಎಂದು ವಿವರಿಸಿದರು.</p>.<p>ಮೂರು ವರ್ಷಗಳ ಹಿಂದೆ ಒಂದು ದಿನಕ್ಕೆ ₹ 3 ಸಾವಿರದ ಆಸುಪಾಸು ಸಂಪಾದನೆ ಆಗುತ್ತಿತ್ತು. ಬೆಳಗಿನ ಜಾವವೇ ಕೃಷಿಕರು ನಮ್ಮ ಕುಲುಮೆ ಬಳಿ ಸಲಕರಣೆಗಳನ್ನು ಹದ ಮಾಡಿಸಿಕೊಳ್ಳಲು ಕಾಯುತ್ತಿದ್ದರು. ಈಗ ದಿನವೀಡಿ ಕುಲುಮೆ ಬಳಿ ಕೂತರೂ ₹ 300 ಹಣ ಸಂಪಾದನೆ ಆಗುತ್ತಿಲ್ಲ. ಇದನ್ನು ನಂಬಿಯೇ ಐದು ದಶಕಗಳಿಂದ ಜೀವನ ಸಾಗಿಸಿದ್ದೇನೆ ಎಂದು ತಿಳಿಸಿದರು.</p>.<p>ಇದೀಗ ಕೂಲಿ ಕಾರ್ಮಿಕರ ಕೊರತೆಯಿಂದ ಟ್ರಾಕ್ಟರ್, ಟಿಲ್ಲರ್, ಜೆಸಿಬಿಗಳ ಮೂಲಕ ಜಮೀನು ಹದ ಮಾಡಿ ಬೆಳೆ ತೆಗೆಯುತ್ತಿದ್ದಾರೆ. ಹಾಗಾಗಿ ಹಳೇ ಕೃಷಿ ಪರಿಕರಗಳನ್ನು ಬಳಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಕುಲುಮೆ ಕೆಲಸ ಕಡಿಮೆಯಾಗಿದೆ ಎಂದು ಅಳಲು ತೋಡಿಕೊಂಡರು.</p>.<p><strong>ಮೂಟೆ ಇದ್ದಿಲಿಗೆ ಸಾವಿರ!</strong></p>.<p>ಕುಲುಮೆದಾರರು ಕಬ್ಬಿಣ ಕಾಯಿಸಲು ಇದ್ದಿಲು ಅವಶ್ಯ. ಕೆಲವೊಮ್ಮೆ ಬೇಡಿಕೆಗೆ ತಕ್ಕಂತೆ ಮೂಟೆಗೆ ಸಾವಿರ ಕೊಟ್ಟರೂ ಇದ್ದಿಲು ಸಿಗುತ್ತಿಲ್ಲ. ಹಳ್ಳಿ, ನಗರಗಳಲ್ಲಿ ಅಡುಗೆ ತಯಾರಿಸಲು ಸಿಲಿಂಡರ್ ಗ್ಯಾಸ್ ಬಳಕೆ ಮಾಡುತ್ತಿರುವುದರಿಂದ ಇದ್ದಿಲು ಸಿಗುವುದು ಅಪರೂಪವಾಗಿದೆ. ಕಸಬು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಮಂಜುನಾಥ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ತಂತ್ರಜ್ಞಾನದ ಹೊಡೆತಕ್ಕೆ ಸಿಲುಕಿ ಕುಲ ಕಸಬುಗಳು ಮೂಲೆಗುಂಪಾಗಿವೆ. ಹೀಗೆ ನಿರ್ಲಕ್ಷ್ಯಕ್ಕೆ ಒಳಗಾದ ವೃತ್ತಿಗಳಲ್ಲಿ ಕುಲುಮೆ ಕೆಲಸವೂ ಒಂದು. ಈ ಪಾರಂಪರಿಕ ವೃತ್ತಿ ಕಣ್ಮರೆ ಆಗುತ್ತಿರುವ ಹೊತ್ತಿನಲ್ಲಿ ಮಂಜುನಾಥ ಆಚಾರಿ ಅದನ್ನು ಮುಂದುವರಿಸಿದ್ದಾರೆ.</p>.<p>ನಗರದ ಚಾಮರಾಜಪೇಟೆಯ ರೈಲ್ವೆ ನಿಲ್ದಾಣ ಬಳಿ ಕುಲಮೆ ಕೆಲಸ ಮಾಡುವ ಮಂಜುನಾಥ ಪೂರ್ವಿಕರ ಬಳುವಳಿಯಾದ ಕುಲುಮೆ ಕಾಯಕದಲ್ಲಿ ತೊಡಗಿದ್ದಾರೆ. ಐದು ದಶಕಗಳಿಂದ ಕೃಷಿ ಉಪಕರಣಗಳನ್ನು ದೇಸಿ ಪದ್ಧತಿಯಲ್ಲಿ ತಯಾರಿಸುತ್ತಿದ್ದಾರೆ. ಆ ಮೂಲಕ ರೈತರಿಗೂ ನೆರವಾಗುತ್ತಿದ್ದಾರೆ.</p>.<p>‘ನಮ್ದು ವಿಶ್ವಕರ್ಮ ಸಮುದಾಯ. ಹಾಗಾಗಿ ಈ ಕುಲುಮೆ ಕೆಲಸ ಹಿರಿಯರಿಂದ ನನ್ನ ಕೈಗೆ ಬಂದಿದೆ. ಈ ಕಸುಬು ಬಿಟ್ಟರೆ ನನಗೆ ಬೇರೆ ಗೊತ್ತಿಲ್ಲ. ಇದನ್ನೇ ದೇವರು ಅಂತ ನಂಬಿಕೊಂಡಿರುವ ನಾವು ಬೆಳಿಗ್ಗೆ 8 ಗಂಟೆಗೆ ಬಂದು ಪೂಜೆ ಮಾಡಿ, ಕುಲುಮೆ ಕೆಲಸ ಆರಂಭಿಸಿದರೆ ಸಂಜೆ ಐದಾರು ಗಂಟೆಗೆ ಮನೆಗೆ ಹೋಗುತ್ತೇನೆ’ ಎನ್ನುತ್ತಾರೆ ಮಂಜುನಾಥ ಆಚಾರಿ ಅವರು.</p>.<p>ವ್ಯವಸಾಯಕ್ಕೆ ಬೇಕಾದ ಕುಡುಗೋಲು, ಮಚ್ಚು, ಕೊಡಲಿ, ಅಗೆಯೊ ಗುದ್ದಲಿ, ಪಿಕಾಸಿ, ಗಡಾರಿ, ಸಲಿಕೆ, ಬಾಚಿ, ಉಳಿಗಳು, ನೇಗಿಲು ಚಿಪ್ಪುಗಳು, ಕಳೆ ತೆಗೆಯೊ ಬರವಾರೆಗಳನ್ನು ಮಾಡಿ ಕೊಡ್ತೇನೆ ಎಂದರು.</p>.<p>ಮೊದಲು ರೈತರು ವ್ಯವಸಾಯಕ್ಕೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಮಾಡಿಸಿಕೊಳ್ಳುತ್ತಿದ್ದರು. ಅದಕ್ಕೆ ಪ್ರತಿಯಾಗಿ ಧಾನ್ಯ ಕೊಡುತ್ತಿದ್ದರು. ರೈತರ ಮನೆಗಳಿಗೆ ಹೋದರೆ ಪ್ರೀತಿಯಿಂದ ಬರಮಾಡಿಕೊಂಡು ಊಟ ಬಡಿಸಿ ಅಕ್ಕರೆ ತೋರುತ್ತಿದ್ದರು. ಉಳುಮೆ ಯಂತ್ರಗಳು ಬಂದ ಮೇಲೆ ಕೃಷಿ ಪದ್ಧತಿ ಬದಲಾಗಿದೆ ಎಂದು ವಿವರಿಸಿದರು.</p>.<p>ಮೂರು ವರ್ಷಗಳ ಹಿಂದೆ ಒಂದು ದಿನಕ್ಕೆ ₹ 3 ಸಾವಿರದ ಆಸುಪಾಸು ಸಂಪಾದನೆ ಆಗುತ್ತಿತ್ತು. ಬೆಳಗಿನ ಜಾವವೇ ಕೃಷಿಕರು ನಮ್ಮ ಕುಲುಮೆ ಬಳಿ ಸಲಕರಣೆಗಳನ್ನು ಹದ ಮಾಡಿಸಿಕೊಳ್ಳಲು ಕಾಯುತ್ತಿದ್ದರು. ಈಗ ದಿನವೀಡಿ ಕುಲುಮೆ ಬಳಿ ಕೂತರೂ ₹ 300 ಹಣ ಸಂಪಾದನೆ ಆಗುತ್ತಿಲ್ಲ. ಇದನ್ನು ನಂಬಿಯೇ ಐದು ದಶಕಗಳಿಂದ ಜೀವನ ಸಾಗಿಸಿದ್ದೇನೆ ಎಂದು ತಿಳಿಸಿದರು.</p>.<p>ಇದೀಗ ಕೂಲಿ ಕಾರ್ಮಿಕರ ಕೊರತೆಯಿಂದ ಟ್ರಾಕ್ಟರ್, ಟಿಲ್ಲರ್, ಜೆಸಿಬಿಗಳ ಮೂಲಕ ಜಮೀನು ಹದ ಮಾಡಿ ಬೆಳೆ ತೆಗೆಯುತ್ತಿದ್ದಾರೆ. ಹಾಗಾಗಿ ಹಳೇ ಕೃಷಿ ಪರಿಕರಗಳನ್ನು ಬಳಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಕುಲುಮೆ ಕೆಲಸ ಕಡಿಮೆಯಾಗಿದೆ ಎಂದು ಅಳಲು ತೋಡಿಕೊಂಡರು.</p>.<p><strong>ಮೂಟೆ ಇದ್ದಿಲಿಗೆ ಸಾವಿರ!</strong></p>.<p>ಕುಲುಮೆದಾರರು ಕಬ್ಬಿಣ ಕಾಯಿಸಲು ಇದ್ದಿಲು ಅವಶ್ಯ. ಕೆಲವೊಮ್ಮೆ ಬೇಡಿಕೆಗೆ ತಕ್ಕಂತೆ ಮೂಟೆಗೆ ಸಾವಿರ ಕೊಟ್ಟರೂ ಇದ್ದಿಲು ಸಿಗುತ್ತಿಲ್ಲ. ಹಳ್ಳಿ, ನಗರಗಳಲ್ಲಿ ಅಡುಗೆ ತಯಾರಿಸಲು ಸಿಲಿಂಡರ್ ಗ್ಯಾಸ್ ಬಳಕೆ ಮಾಡುತ್ತಿರುವುದರಿಂದ ಇದ್ದಿಲು ಸಿಗುವುದು ಅಪರೂಪವಾಗಿದೆ. ಕಸಬು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಮಂಜುನಾಥ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>