ಖಚಿತ ಮಾಹಿತಿಯ ಮೇರೆಗೆ ಸಬ್ ಇನ್ಸ್ಪೆಕ್ಟರ್ ನಾಗೇಂದ್ರ ಪ್ರಸಾದ್ ಮತ್ತು ಸಿಬ್ಬಂದಿ ಶರಣಬಸವ, ನರೇಶ್, ವೆಂಕಟರಮಣ ತಂಡ ದಾಳಿ ನಡೆಸಿದರು. ಪೊಲೀಸರನ್ನು ಕಂಡಕೂಡಲೇ ಜೂಜುಕೋರರು ಪರಾರಿಯಾಗಲು ಯತ್ನಿಸಿದರು. ಆದರೆ, ಪೊಲೀಸರು ಬೆನ್ನಟ್ಟಿ ಮೂವರನ್ನು ಹಿಡಿದಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.