<p><strong>ಶಿಡ್ಲಘಟ್ಟ:</strong> ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೊಳಿಸಲು ಶಿಡ್ಲಘಟ್ಟದಲ್ಲಿ ಉಚಿತ ತರಬೇತಿ ಕೇಂದ್ರ ತೆರೆಯಲು ಎಬಿಡಿ ಟ್ರಸ್ಟ್ ಹಾಗೂ ಸಾಧನಾ ಐಎಎಸ್ ಕೋಚಿಂಗ್ ಸೆಂಟರ್ ಮುಂದಾಗಿದೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಎಬಿಡಿ ಟ್ರಸ್ಟ್ ಅಧ್ಯಕ್ಷ ಬಿ.ವಿ.ರಾಜೀವ್ ಗೌಡ ತಿಳಿಸಿದರು.</p>.<p>ನಗರದ ಕಾಂಗ್ರೆಸ್ ಭವನದಲ್ಲಿ ಬೆಂಗಳೂರಿನ ಸಾಧನಾ ಅಕಾಡೆಮಿ ನಿರ್ದೇಶಕಿ ಡಾ.ಜ್ಯೋತಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಫೆ.20ರಿಂದ ಉಚಿತ ತರಬೇತಿ ಕೇಂದ್ರ ಆರಂಭಿಸುವುದಾಗಿ ತಿಳಿಸಿದರು.</p>.<p>ಜನವರಿ 10ರಿಂದ ಅರ್ಜಿ ಸ್ವೀಕರಿಸಲಾಗುವುದು. ಜ.30ರವರೆಗೂ ಅರ್ಜಿ ಸಲ್ಲಿಸಬಹುದು. ನಂತರದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಫೆ.20ರಂದು ತರಬೇತಿ ಕೇಂದ್ರ ಉದ್ಘಾಟಿಸಿ ಅಂದಿನಿಂದಲೇ ಉಚಿತ ತರಬೇತಿ ಆರಂಭಿಸಲಾಗುವುದು ಎಂದು ವಿವರಿಸಿದರು.</p>.<p>ಸಾಧನಾ ಅಕಾಡೆಮಿ ನಿರ್ದೇಶಕಿ ಡಾ.ಜ್ಯೋತಿ ಮಾತನಾಡಿ, ಅಂತಿಮ ವರ್ಷದ ಪದವಿ ಓದುತ್ತಿರುವ, ಪದವಿ ಮುಗಿಸಿದ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದರು.</p>.<p>ಸಾಧನಾ ಅಕಾಡೆಮಿ ಮಹದೇವ್ ಹಾಜರಿದ್ದರು. ಮಾಹಿತಿ: 9900100616, 9008207843</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೊಳಿಸಲು ಶಿಡ್ಲಘಟ್ಟದಲ್ಲಿ ಉಚಿತ ತರಬೇತಿ ಕೇಂದ್ರ ತೆರೆಯಲು ಎಬಿಡಿ ಟ್ರಸ್ಟ್ ಹಾಗೂ ಸಾಧನಾ ಐಎಎಸ್ ಕೋಚಿಂಗ್ ಸೆಂಟರ್ ಮುಂದಾಗಿದೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಎಬಿಡಿ ಟ್ರಸ್ಟ್ ಅಧ್ಯಕ್ಷ ಬಿ.ವಿ.ರಾಜೀವ್ ಗೌಡ ತಿಳಿಸಿದರು.</p>.<p>ನಗರದ ಕಾಂಗ್ರೆಸ್ ಭವನದಲ್ಲಿ ಬೆಂಗಳೂರಿನ ಸಾಧನಾ ಅಕಾಡೆಮಿ ನಿರ್ದೇಶಕಿ ಡಾ.ಜ್ಯೋತಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಫೆ.20ರಿಂದ ಉಚಿತ ತರಬೇತಿ ಕೇಂದ್ರ ಆರಂಭಿಸುವುದಾಗಿ ತಿಳಿಸಿದರು.</p>.<p>ಜನವರಿ 10ರಿಂದ ಅರ್ಜಿ ಸ್ವೀಕರಿಸಲಾಗುವುದು. ಜ.30ರವರೆಗೂ ಅರ್ಜಿ ಸಲ್ಲಿಸಬಹುದು. ನಂತರದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಫೆ.20ರಂದು ತರಬೇತಿ ಕೇಂದ್ರ ಉದ್ಘಾಟಿಸಿ ಅಂದಿನಿಂದಲೇ ಉಚಿತ ತರಬೇತಿ ಆರಂಭಿಸಲಾಗುವುದು ಎಂದು ವಿವರಿಸಿದರು.</p>.<p>ಸಾಧನಾ ಅಕಾಡೆಮಿ ನಿರ್ದೇಶಕಿ ಡಾ.ಜ್ಯೋತಿ ಮಾತನಾಡಿ, ಅಂತಿಮ ವರ್ಷದ ಪದವಿ ಓದುತ್ತಿರುವ, ಪದವಿ ಮುಗಿಸಿದ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದರು.</p>.<p>ಸಾಧನಾ ಅಕಾಡೆಮಿ ಮಹದೇವ್ ಹಾಜರಿದ್ದರು. ಮಾಹಿತಿ: 9900100616, 9008207843</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>