<p><strong>ಚಿಕ್ಕಬಳ್ಳಾಪುರ:</strong> ನಗರದ 17ನೇ ವಾರ್ಡ್ ನ 54 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.</p>.<p>ನಗರದಲ್ಲಿ ಕೋವಿಡ್ ಗೆ ತುತ್ತಾಗಿದ್ದ 17ನೇ ವಾರ್ಡ್ ವ್ಯಾಪ್ತಿಯ ಅಂಜುಮನ್ ರಸ್ತೆಯ ನಿವಾಸಿ, 69 ವರ್ಷದ ವ್ಯಕ್ತಿಯೊಬ್ಬರು ಏಪ್ರಿಲ್ 15ರಂದು ಮೃತಪಟ್ಟಿದ್ದರು. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಶನಿವಾರದವರೆಗೆ 17ನೇ ವಾರ್ಡ್ ನ ಆರು ಜನರಿಗೆ ಸೋಂಕು ತಗುಲಿದ್ದು ಜಿಲ್ಲಾ ಕೇಂದ್ರದಲ್ಲಿ ತಲ್ಲಣ ಮೂಡಿಸಿದೆ.</p>.<p>ಈ ನಡುವೆಯೇ ಏಪ್ರಿಲ್ 25 ರಂದು ನಗರದ 20 ನೇ ವಾರ್ಡ್ ನಿವಾಸಿ, 18 ವರ್ಷದ ಯುವಕನೊಬ್ಬನಿಗೆ ಕೋವಿಡ್ ತಗಲಿರುವುದು ಪತ್ತೆಯಾಗಿತ್ತು.</p>.<p>ಜಿಲ್ಲೆಯಲ್ಲಿ ಈವರೆಗೆ ಗೌರಿಬಿದನೂರಿನ 12, ಚಿಕ್ಕಬಳ್ಳಾಪುರದ 8 ಜನರು ಸೇರಿದಂತೆ 20 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ.</p>.<p>ಈ ಪೈಕಿ ಇಬ್ಬರು (ಗೌರಿಬಿದನೂರು, ಚಿಕ್ಕಬಳ್ಳಾಪುರದ ತಲಾ ಒಬ್ಬರು) ಮೃತಪಟ್ಟಿದ್ದಾರೆ. ಉಳಿದಂತೆ ಗೌರಿಬಿದನೂರಿನ 11 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.</p>.<p>ಸದ್ಯ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಏಳು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಗುಣಮುಖರಾಗಿರುವ ಮೂರು ಜನರನ್ನು ಶನಿವಾರ ಬಿಡುಗಡೆಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರದ 17ನೇ ವಾರ್ಡ್ ನ 54 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.</p>.<p>ನಗರದಲ್ಲಿ ಕೋವಿಡ್ ಗೆ ತುತ್ತಾಗಿದ್ದ 17ನೇ ವಾರ್ಡ್ ವ್ಯಾಪ್ತಿಯ ಅಂಜುಮನ್ ರಸ್ತೆಯ ನಿವಾಸಿ, 69 ವರ್ಷದ ವ್ಯಕ್ತಿಯೊಬ್ಬರು ಏಪ್ರಿಲ್ 15ರಂದು ಮೃತಪಟ್ಟಿದ್ದರು. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಶನಿವಾರದವರೆಗೆ 17ನೇ ವಾರ್ಡ್ ನ ಆರು ಜನರಿಗೆ ಸೋಂಕು ತಗುಲಿದ್ದು ಜಿಲ್ಲಾ ಕೇಂದ್ರದಲ್ಲಿ ತಲ್ಲಣ ಮೂಡಿಸಿದೆ.</p>.<p>ಈ ನಡುವೆಯೇ ಏಪ್ರಿಲ್ 25 ರಂದು ನಗರದ 20 ನೇ ವಾರ್ಡ್ ನಿವಾಸಿ, 18 ವರ್ಷದ ಯುವಕನೊಬ್ಬನಿಗೆ ಕೋವಿಡ್ ತಗಲಿರುವುದು ಪತ್ತೆಯಾಗಿತ್ತು.</p>.<p>ಜಿಲ್ಲೆಯಲ್ಲಿ ಈವರೆಗೆ ಗೌರಿಬಿದನೂರಿನ 12, ಚಿಕ್ಕಬಳ್ಳಾಪುರದ 8 ಜನರು ಸೇರಿದಂತೆ 20 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ.</p>.<p>ಈ ಪೈಕಿ ಇಬ್ಬರು (ಗೌರಿಬಿದನೂರು, ಚಿಕ್ಕಬಳ್ಳಾಪುರದ ತಲಾ ಒಬ್ಬರು) ಮೃತಪಟ್ಟಿದ್ದಾರೆ. ಉಳಿದಂತೆ ಗೌರಿಬಿದನೂರಿನ 11 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.</p>.<p>ಸದ್ಯ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಏಳು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಗುಣಮುಖರಾಗಿರುವ ಮೂರು ಜನರನ್ನು ಶನಿವಾರ ಬಿಡುಗಡೆಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>