<p><strong>ಚಿಕ್ಕಬಳ್ಳಾಪುರ: </strong>ಜಿಲ್ಲೆಯಲ್ಲಿ ಶನಿವಾರ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಸೇರಿದಂತೆ 12 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 245ಕ್ಕೆ ಏರಿಕೆಯಾಗಿದೆ.</p>.<p>ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ 37 ವರ್ಷದ ವೈದ್ಯರೊಬ್ಬರಿಗೆ ಕೋವಿಡ್ ತಗುಲಿರುವುದು ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಬೆಚ್ಚಿ ಬೀಳಿಸಿದೆ.</p>.<p>ವೈದ್ಯರಿಗೆ ಕೋವಿಡ್ ಸೋಂಕಿರುವುದು ಪತ್ತೆಯಾಗುತ್ತಿದ್ದಂತೆ ವೈರಸ್ ನಾಶಕ ದ್ರಾವಣ ಸಿಂಪಡಿಸಿ ಸರ್ಕಾರಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಯಿತು. ಸಾರ್ವಜನಿಕರ ಸೇವೆಗಾಗಿ ಆರೋಗ್ಯ ಇಲಾಖೆ ಚಿಂತಾಮಣಿಯ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ.</p>.<p>ಇತ್ತೀಚೆಗಷ್ಟೇ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ವೊಬ್ಬರಲ್ಲಿ ಕೋವಿಡ್ ಪತ್ತೆಯಾದಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ ಬೆಚ್ಚಿದ್ದರು, ಇದೀಗ ವೈದ್ಯರು ಕೋವಿಡ್ಗೆ ತುತ್ತಾಗಿರುವುದು ಮತ್ತಷ್ಟು ಭೀತಿ ಹೆಚ್ಚಲು ಕಾರಣವಾಗಿದೆ.</p>.<p>ಶನಿವಾರ ಶಿಡ್ಲಘಟ್ಟ ತಾಲ್ಲೂಕಿನ ನಾಲ್ಕು, ಗೌರಿಬಿದನೂರು ಮತ್ತು ಚಿಂತಾಮಣಿ ತಾಲ್ಲೂಕುಗಳಲ್ಲಿ ತಲಾ ಮೂರು, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕುಗಳಲ್ಲಿ ತಲಾ ಒಂದು ಕೋವಿಡ್ ಪ್ರಕರಣಗಳು ವರದಿಯಾಗಿವೆ.</p>.<p>ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 54, ಬಾಗೇಪಲ್ಲಿ 4, ಚಿಂತಾಮಣಿ 21, ಗೌರಿಬಿದನೂರು 100, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 16 ಜನರಿಗೆ ಕೋವಿಡ್ ಸೋಂಕು ತಗುಲಿದೆ.</p>.<p>ಸೋಂಕಿತರ ಪೈಕಿ ನಾಲ್ಕು ಮಂದಿ ಕೋವಿಡ್ನಿಂದ, ಇಬ್ಬರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 177 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ನಲ್ಲಿ 61 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಜಿಲ್ಲೆಯಲ್ಲಿ ಶನಿವಾರ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಸೇರಿದಂತೆ 12 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 245ಕ್ಕೆ ಏರಿಕೆಯಾಗಿದೆ.</p>.<p>ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ 37 ವರ್ಷದ ವೈದ್ಯರೊಬ್ಬರಿಗೆ ಕೋವಿಡ್ ತಗುಲಿರುವುದು ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಬೆಚ್ಚಿ ಬೀಳಿಸಿದೆ.</p>.<p>ವೈದ್ಯರಿಗೆ ಕೋವಿಡ್ ಸೋಂಕಿರುವುದು ಪತ್ತೆಯಾಗುತ್ತಿದ್ದಂತೆ ವೈರಸ್ ನಾಶಕ ದ್ರಾವಣ ಸಿಂಪಡಿಸಿ ಸರ್ಕಾರಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಯಿತು. ಸಾರ್ವಜನಿಕರ ಸೇವೆಗಾಗಿ ಆರೋಗ್ಯ ಇಲಾಖೆ ಚಿಂತಾಮಣಿಯ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ.</p>.<p>ಇತ್ತೀಚೆಗಷ್ಟೇ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ವೊಬ್ಬರಲ್ಲಿ ಕೋವಿಡ್ ಪತ್ತೆಯಾದಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ ಬೆಚ್ಚಿದ್ದರು, ಇದೀಗ ವೈದ್ಯರು ಕೋವಿಡ್ಗೆ ತುತ್ತಾಗಿರುವುದು ಮತ್ತಷ್ಟು ಭೀತಿ ಹೆಚ್ಚಲು ಕಾರಣವಾಗಿದೆ.</p>.<p>ಶನಿವಾರ ಶಿಡ್ಲಘಟ್ಟ ತಾಲ್ಲೂಕಿನ ನಾಲ್ಕು, ಗೌರಿಬಿದನೂರು ಮತ್ತು ಚಿಂತಾಮಣಿ ತಾಲ್ಲೂಕುಗಳಲ್ಲಿ ತಲಾ ಮೂರು, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕುಗಳಲ್ಲಿ ತಲಾ ಒಂದು ಕೋವಿಡ್ ಪ್ರಕರಣಗಳು ವರದಿಯಾಗಿವೆ.</p>.<p>ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 54, ಬಾಗೇಪಲ್ಲಿ 4, ಚಿಂತಾಮಣಿ 21, ಗೌರಿಬಿದನೂರು 100, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 16 ಜನರಿಗೆ ಕೋವಿಡ್ ಸೋಂಕು ತಗುಲಿದೆ.</p>.<p>ಸೋಂಕಿತರ ಪೈಕಿ ನಾಲ್ಕು ಮಂದಿ ಕೋವಿಡ್ನಿಂದ, ಇಬ್ಬರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 177 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ನಲ್ಲಿ 61 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>