<p><strong>ಶಿಡ್ಲಘಟ್ಟ</strong>: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಜನರ ಹಿತ ಮುಖ್ಯವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಬ್ಬರಿಗೂ ಅವರವರ ಕುರ್ಚಿ ಉಳಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಟೀಕಿಸಿದರು.</p>.<p>ಸೋಮವಾರ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ಬಾಬು ಪರ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಸರಿಯಾದ ಸಮಯಕ್ಕೆ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮೊರೆ ಇಡುತ್ತಿದ್ದರು. ಇಲ್ಲವೇ ತಮ್ಮ ಬೊಕ್ಕಸದಿಂದ ರೈತರಿಗೆ ಬರ ಪರಿಹಾರದ ಹಣ ನೀಡುತ್ತಿದ್ದರು. ಅದು ಬಿಟ್ಟು ಕೇಂದ್ರದತ್ತ ಬೊಟ್ಟು ಮಾಡಿ ರೈತರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಧಿಕಾರದ ಕುರ್ಚಿ ಉಳಿಸಿಕೊಳ್ಳುವುದು ಬಿಟ್ಟು ಬೇರೆ ಯಾವುದೇ ಅಜೆಂಡಾ ಇಲ್ಲವೇ ಇಲ್ಲ. ದೇಶವನ್ನು ಜಗತ್ತೀನ ಮುಂಚೂಣಿ ರಾಷ್ಟ್ರವನ್ನಾಗಿಸಬೇಕಿದೆ. ಇದಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.</p>.<p>ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ಜಗತ್ತಿನಲ್ಲಿ ದೇಶ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಂಡು ಮುಂಚೂಣಿ ಸ್ಥಾನಕ್ಕೇರಲು ನರೇಂದ್ರ ಮೋದಿ ಅವರಂತ ಧೀಮಂತ ನಾಯಕರಿಂದ ಮಾತ್ರ ಸಾಧ್ಯ. ಅವರು ಮೂರನೇ ಬಾರಿಗೆ ಪ್ರಧಾನಿ ಆಗಬೇಕೆಂದು ಹೇಳಿದರು.</p>.<p>ಮಲ್ಲೇಶ್ ಬಾಬು ಅವರು ರಾಜಕೀಯ ಹಿನ್ನಲೆಯುಳ್ಳವರು. ಈ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಜನರ ನಾಡಿಮಿಡಿತ ಬಲ್ಲ ಸರಳ ಸಜ್ಜನಿಕೆಯ ವ್ಯಕ್ತಿ. ಅವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.</p>.<p>ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಈ ಕ್ಷೇತ್ರದ ಮತದಾರರು ಕಾಂಗ್ರೆಸ್ ಗ್ಯಾರಂಟಿಗಳಿಗೆ ಒಮ್ಮೆ ಯಾಮಾರಿದ್ದು ಸಾಕಾಗಿದೆ. ಮತ್ತೆ ಮರುಳಾಗಬಾರದು. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೂ ಭೇಟಿ ಮಾಡಿ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.</p>.<p>ಸಂಸದ ಎಸ್.ಮುನಿಸ್ವಾಮಿ, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಜಿ ಶಾಸಕ ಎಂ.ರಾಜಣ್ಣ, ಅಭ್ಯರ್ಥಿ ಮಲ್ಲೇಶ್ಬಾಬು ಅವರ ತಾಯಿ ಮಂಗಮ್ಮ ಮುನಿಸ್ವಾಮಿ ಮಾತನಾಡಿದರು.</p>.<p>ಜೆಡಿಎಸ್ ಅಧ್ಯಕ್ಷ ಡಿ.ಬಿ.ವೆಂಕಟೇಶ್, ಬಿಜೆಪಿ ಅಧ್ಯಕ್ಷ ಸೀಕಲ್ ಆನಂದಗೌಡ, ಮುಖಂಡರಾದ ಬಂಕ್ ಮುನಿಯಪ್ಪ, ಅಪ್ಪೇಗೌಡನಹಳ್ಳಿ ಲಕ್ಷ್ಮಿನಾರಾಯಣರೆಡ್ಡಿ, ಕಂಬದಹಳ್ಳಿ ಸುರೇಂದ್ರಗೌಡ, ಬಿ.ನಾರಾಯಣಸ್ವಾಮಿ, ತಾದೂರು ರಘು, ಪಾಪಿರೆಡ್ಡಿ, ಹುಜಗೂರು ರಾಮಯ್ಯ, ಸದಾಶಿವ, ನಂಜಪ್ಪ, ನರೇಶ್, ಡಿ.ಎಂ.ಜಗದೀಶ್ವರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಜನರ ಹಿತ ಮುಖ್ಯವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಬ್ಬರಿಗೂ ಅವರವರ ಕುರ್ಚಿ ಉಳಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಟೀಕಿಸಿದರು.</p>.<p>ಸೋಮವಾರ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ಬಾಬು ಪರ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಸರಿಯಾದ ಸಮಯಕ್ಕೆ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮೊರೆ ಇಡುತ್ತಿದ್ದರು. ಇಲ್ಲವೇ ತಮ್ಮ ಬೊಕ್ಕಸದಿಂದ ರೈತರಿಗೆ ಬರ ಪರಿಹಾರದ ಹಣ ನೀಡುತ್ತಿದ್ದರು. ಅದು ಬಿಟ್ಟು ಕೇಂದ್ರದತ್ತ ಬೊಟ್ಟು ಮಾಡಿ ರೈತರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಧಿಕಾರದ ಕುರ್ಚಿ ಉಳಿಸಿಕೊಳ್ಳುವುದು ಬಿಟ್ಟು ಬೇರೆ ಯಾವುದೇ ಅಜೆಂಡಾ ಇಲ್ಲವೇ ಇಲ್ಲ. ದೇಶವನ್ನು ಜಗತ್ತೀನ ಮುಂಚೂಣಿ ರಾಷ್ಟ್ರವನ್ನಾಗಿಸಬೇಕಿದೆ. ಇದಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.</p>.<p>ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ಜಗತ್ತಿನಲ್ಲಿ ದೇಶ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಂಡು ಮುಂಚೂಣಿ ಸ್ಥಾನಕ್ಕೇರಲು ನರೇಂದ್ರ ಮೋದಿ ಅವರಂತ ಧೀಮಂತ ನಾಯಕರಿಂದ ಮಾತ್ರ ಸಾಧ್ಯ. ಅವರು ಮೂರನೇ ಬಾರಿಗೆ ಪ್ರಧಾನಿ ಆಗಬೇಕೆಂದು ಹೇಳಿದರು.</p>.<p>ಮಲ್ಲೇಶ್ ಬಾಬು ಅವರು ರಾಜಕೀಯ ಹಿನ್ನಲೆಯುಳ್ಳವರು. ಈ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಜನರ ನಾಡಿಮಿಡಿತ ಬಲ್ಲ ಸರಳ ಸಜ್ಜನಿಕೆಯ ವ್ಯಕ್ತಿ. ಅವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.</p>.<p>ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಈ ಕ್ಷೇತ್ರದ ಮತದಾರರು ಕಾಂಗ್ರೆಸ್ ಗ್ಯಾರಂಟಿಗಳಿಗೆ ಒಮ್ಮೆ ಯಾಮಾರಿದ್ದು ಸಾಕಾಗಿದೆ. ಮತ್ತೆ ಮರುಳಾಗಬಾರದು. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೂ ಭೇಟಿ ಮಾಡಿ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.</p>.<p>ಸಂಸದ ಎಸ್.ಮುನಿಸ್ವಾಮಿ, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಜಿ ಶಾಸಕ ಎಂ.ರಾಜಣ್ಣ, ಅಭ್ಯರ್ಥಿ ಮಲ್ಲೇಶ್ಬಾಬು ಅವರ ತಾಯಿ ಮಂಗಮ್ಮ ಮುನಿಸ್ವಾಮಿ ಮಾತನಾಡಿದರು.</p>.<p>ಜೆಡಿಎಸ್ ಅಧ್ಯಕ್ಷ ಡಿ.ಬಿ.ವೆಂಕಟೇಶ್, ಬಿಜೆಪಿ ಅಧ್ಯಕ್ಷ ಸೀಕಲ್ ಆನಂದಗೌಡ, ಮುಖಂಡರಾದ ಬಂಕ್ ಮುನಿಯಪ್ಪ, ಅಪ್ಪೇಗೌಡನಹಳ್ಳಿ ಲಕ್ಷ್ಮಿನಾರಾಯಣರೆಡ್ಡಿ, ಕಂಬದಹಳ್ಳಿ ಸುರೇಂದ್ರಗೌಡ, ಬಿ.ನಾರಾಯಣಸ್ವಾಮಿ, ತಾದೂರು ರಘು, ಪಾಪಿರೆಡ್ಡಿ, ಹುಜಗೂರು ರಾಮಯ್ಯ, ಸದಾಶಿವ, ನಂಜಪ್ಪ, ನರೇಶ್, ಡಿ.ಎಂ.ಜಗದೀಶ್ವರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>