ನಗರದಿಂದ ಶಿವಮೊಗ್ಗ, ಮೈಸೂರು, ಹಟ್ಟಿ, ಹೊಸಪೇಟೆ, ಗಂಗಾವತಿಗೂ ಬಸ್ ಸಂಚರಿಸುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಸದ್ಯಕ್ಕೆ ಚೇಳೂರು ಮತ್ತು ಪೆದ್ದೂರು ಕಡೆಗೆ ಮಾತ್ರ ಬಸ್ ಬಿಡಲಾಗುತ್ತಿದೆ. ದಿನೇ ದಿನೇ ಸ್ವಲ್ಪ ಪ್ರಗತಿ ಕಾಣುತ್ತಿದ್ದರೂ ಮೊದಲಿನ ಸ್ಥಿತಿಗೆ ಬರಲು ಸಾಕಷ್ಟು ಸಮಯವೇ ಬೇಕು ಎಂದು ಅವರು ಅಭಿಪ್ರಾಯಪಟ್ಟರು.