<p>ಪ್ರಜಾವಾಣಿ ವಾರ್ತೆ</p>.<p>ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ 2025ನೇ ಸಾಲಿನಲ್ಲಿ ಘಟಿಸಿದ ಪ್ರಮುಖ ವಿದ್ಯಮಾನಗಳು, ಪ್ರಕರಣಗಳು, ಪತ್ತೆ, ಸೇವೆಗಳು ಹೀಗೆ ಸಮಗ್ರ ವಿವರಗಳನ್ನು ಇಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಂಚಿಕೊಂಡರು.</p>.<p>ಈ ವೇಳೆ ವಶಕ್ಕೆ ಪಡೆದ ನಗದು, ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ಟ್ರ್ಯಾಕ್ಟರ್ಗಳು, ಆಟೊ, ಬೈಕ್ ಅನ್ನು ಪ್ರದರ್ಶಿಸಲಾಯಿತು. ನಂತರ ಮಾಲೀಕರಿಗೆ ಒಪ್ಪಿಸಲಾಯಿತು. ಜಿಲ್ಲೆಯಲ್ಲಿ ಈ ಸಾಲಿನಲ್ಲಿ ನಡೆದ ಪ್ರಮುಖ ಅಪರಾಧ ಕೃತ್ಯಗಳ ಪತ್ತೆಯ ಬಗ್ಗೆಯೂ ಎಸ್ಪಿ ವಿವರಿಸಿದರು.</p>.<p>ಜಿಲ್ಲೆಯಲ್ಲಿ 2025ರಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ 462 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 244 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಶೇ 55ರಷ್ಟು ಪ್ರಕರಣಗಳು ಪತ್ತೆಯಾಗಿವೆ ಎಂದು ಕುಶಾಲ್ ಚೌಕ್ಸೆ ವಿವರಿಸಿದರು.</p>.<p>ಬೇರೆ ಬೇರೆ ಪ್ರಕರಣಗಳಲ್ಲಿ ಒಟ್ಟು ₹6 ಕೋಟಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ₹2.50 ಕೋಟಿ ವಶಕ್ಕೆ ಪಡೆದು ₹1.70 ಕೋಟಿಯನ್ನು ಮಾಲೀಕರಿಗೆ ಮರಳಿಸಲಾಗಿದೆ. ಉಳಿದ ಹಣದ ವಿಚಾರವು ನ್ಯಾಯಾಲದಲ್ಲಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾಲೀಕರಿಗೆ ಆ ಹಣವನ್ನೂ ಮರಳಿಸಲಾಗುವುದು ಎಂದು ಹೇಳಿದರು.</p>.<p>ಮೊಬೈಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಸಿಐಆರ್ ಪೋರ್ಟಲ್ನಲ್ಲಿ 1,986 ಪ್ರಕರಣಗಳು ದಾಖಲಾಗಿದ್ದು 1,025 ಮೊಬೈಲ್ ಪತ್ತೆ ಮಾಡಿ ಮಾಲೀಕರಿಗೆ ನೀಡಿದ್ದೇವೆ ಎಂದು ಹೇಳಿದರು.</p>.<p>ಮಟ್ಕಾ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಪ್ರಕರಣಗಳನ್ನು ದಾಖಲಿಸಿ 55 ಆರೋಪಿಗಳನ್ನು ಮತ್ತು ₹60 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಜೂಜಾಟಕ್ಕೆ ಸಂಬಂಧಿಸಿದಂತೆ 345 ಪ್ರಕರಣ ದಾಖಲಿಸಿ, 1,011 ಮಂದಿ ಬಂಧಿಸಿ ₹22 ಲಕ್ಷ ವಶಕ್ಕೆ ಪಡೆದಿದ್ದೇವೆ. ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ 11 ಪ್ರಕರಣ ದಾಖಲಿಸಿಕೊಂಡು 19 ಜನರು ಹಾಗೂ ₹10 ಲಕ್ಷ ವಶಕ್ಕೆ ಪಡೆದಿದ್ದೇವೆ ಎಂದು ವಿವರಿಸಿದರು.</p>.<p>ಅಬಕಾರಿ ಪ್ರಕರಣಗಳು ಸಹ ಹೆಚ್ಚಿವೆ. ಜೂಜಾಟ, ಅಬಕಾರಿ ಅಕ್ರಮಗಳು, ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು. </p>.<p>738 ರೌಡಿ ಶೀಟರ್ಗಳಿದ್ದು 691 ಮಂದಿಯಿಂದ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಚ್ಚಳಿಕೆ ಪಡೆದಿದ್ದೇವೆ. 6 ಮಂದಿ ರೌಡಿ ಶೀಟರ್ಗಳನ್ನು ಗಡಿಪಾರು ಸಹ ಮಾಡಿದ್ದೇವೆ ಎಂದರು. </p>.<p>ಚಿಂತಾಮಣಿ, ಗೌರಿಬಿದನೂರು, ಬಾಗೇಪಲ್ಲಿ ಠಾಣೆಗಳಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಲಾ, ಕಾಲೇಜುಗಳಲ್ಲಿ ಜಾಗೃತಿ ಸಹ ಮೂಡಿಸುತ್ತಿದ್ದೇವೆ ಎಂದರು. </p>.<p>ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯು ಆಗಸ್ಟ್ನಲ್ಲಿ ಚಾಟ್ ಬಾಟ್ ಸೇವೆಗೆ ಚಾಲನೆ ನೀಡಿದ್ದೇವೆ. ಬೀಟ್ ಸಿಬ್ಬಂದಿ ನಂಬರ್, ಯಾವ ಠಾಣೆಯ ವ್ಯಾಪ್ತಿಯ ಯಾವ ಗ್ರಾಮ ಬರುತ್ತದೆ ಸೇರಿದಂತೆ ಹಲವು ಮಾಹಿತಿಯನ್ನು ಸಾರ್ವಜನಿಕರು ಕೇಳಿದ್ದಾರೆ. ಈ ಸೇವೆಯನ್ನು ಸದ್ಭಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.</p>.<p>ಚಿಂತಾಮಣಿ ಸಂಚಾರ ಠಾಣೆ ಮತ್ತು ಬಾಗೇಪಲ್ಲಿ ಉಪವಿಭಾಗ ರಚನೆಗೆ ಇಲಾಖೆಗೆ ಪ್ರಸ್ತಾವ ಸಹ ಸಲ್ಲಿಸಲಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೈ, ಡಿವೈಎಸ್ಪಿಗಳಾದ ಶಿವಕುಮಾರ್, ರವಿಕುಮಾರ್, ಮುರಳೀಧರ್ ಮಾಧ್ಯಮಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ 2025ನೇ ಸಾಲಿನಲ್ಲಿ ಘಟಿಸಿದ ಪ್ರಮುಖ ವಿದ್ಯಮಾನಗಳು, ಪ್ರಕರಣಗಳು, ಪತ್ತೆ, ಸೇವೆಗಳು ಹೀಗೆ ಸಮಗ್ರ ವಿವರಗಳನ್ನು ಇಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಂಚಿಕೊಂಡರು.</p>.<p>ಈ ವೇಳೆ ವಶಕ್ಕೆ ಪಡೆದ ನಗದು, ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ಟ್ರ್ಯಾಕ್ಟರ್ಗಳು, ಆಟೊ, ಬೈಕ್ ಅನ್ನು ಪ್ರದರ್ಶಿಸಲಾಯಿತು. ನಂತರ ಮಾಲೀಕರಿಗೆ ಒಪ್ಪಿಸಲಾಯಿತು. ಜಿಲ್ಲೆಯಲ್ಲಿ ಈ ಸಾಲಿನಲ್ಲಿ ನಡೆದ ಪ್ರಮುಖ ಅಪರಾಧ ಕೃತ್ಯಗಳ ಪತ್ತೆಯ ಬಗ್ಗೆಯೂ ಎಸ್ಪಿ ವಿವರಿಸಿದರು.</p>.<p>ಜಿಲ್ಲೆಯಲ್ಲಿ 2025ರಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ 462 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 244 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಶೇ 55ರಷ್ಟು ಪ್ರಕರಣಗಳು ಪತ್ತೆಯಾಗಿವೆ ಎಂದು ಕುಶಾಲ್ ಚೌಕ್ಸೆ ವಿವರಿಸಿದರು.</p>.<p>ಬೇರೆ ಬೇರೆ ಪ್ರಕರಣಗಳಲ್ಲಿ ಒಟ್ಟು ₹6 ಕೋಟಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ₹2.50 ಕೋಟಿ ವಶಕ್ಕೆ ಪಡೆದು ₹1.70 ಕೋಟಿಯನ್ನು ಮಾಲೀಕರಿಗೆ ಮರಳಿಸಲಾಗಿದೆ. ಉಳಿದ ಹಣದ ವಿಚಾರವು ನ್ಯಾಯಾಲದಲ್ಲಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾಲೀಕರಿಗೆ ಆ ಹಣವನ್ನೂ ಮರಳಿಸಲಾಗುವುದು ಎಂದು ಹೇಳಿದರು.</p>.<p>ಮೊಬೈಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಸಿಐಆರ್ ಪೋರ್ಟಲ್ನಲ್ಲಿ 1,986 ಪ್ರಕರಣಗಳು ದಾಖಲಾಗಿದ್ದು 1,025 ಮೊಬೈಲ್ ಪತ್ತೆ ಮಾಡಿ ಮಾಲೀಕರಿಗೆ ನೀಡಿದ್ದೇವೆ ಎಂದು ಹೇಳಿದರು.</p>.<p>ಮಟ್ಕಾ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಪ್ರಕರಣಗಳನ್ನು ದಾಖಲಿಸಿ 55 ಆರೋಪಿಗಳನ್ನು ಮತ್ತು ₹60 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಜೂಜಾಟಕ್ಕೆ ಸಂಬಂಧಿಸಿದಂತೆ 345 ಪ್ರಕರಣ ದಾಖಲಿಸಿ, 1,011 ಮಂದಿ ಬಂಧಿಸಿ ₹22 ಲಕ್ಷ ವಶಕ್ಕೆ ಪಡೆದಿದ್ದೇವೆ. ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ 11 ಪ್ರಕರಣ ದಾಖಲಿಸಿಕೊಂಡು 19 ಜನರು ಹಾಗೂ ₹10 ಲಕ್ಷ ವಶಕ್ಕೆ ಪಡೆದಿದ್ದೇವೆ ಎಂದು ವಿವರಿಸಿದರು.</p>.<p>ಅಬಕಾರಿ ಪ್ರಕರಣಗಳು ಸಹ ಹೆಚ್ಚಿವೆ. ಜೂಜಾಟ, ಅಬಕಾರಿ ಅಕ್ರಮಗಳು, ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು. </p>.<p>738 ರೌಡಿ ಶೀಟರ್ಗಳಿದ್ದು 691 ಮಂದಿಯಿಂದ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಚ್ಚಳಿಕೆ ಪಡೆದಿದ್ದೇವೆ. 6 ಮಂದಿ ರೌಡಿ ಶೀಟರ್ಗಳನ್ನು ಗಡಿಪಾರು ಸಹ ಮಾಡಿದ್ದೇವೆ ಎಂದರು. </p>.<p>ಚಿಂತಾಮಣಿ, ಗೌರಿಬಿದನೂರು, ಬಾಗೇಪಲ್ಲಿ ಠಾಣೆಗಳಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಲಾ, ಕಾಲೇಜುಗಳಲ್ಲಿ ಜಾಗೃತಿ ಸಹ ಮೂಡಿಸುತ್ತಿದ್ದೇವೆ ಎಂದರು. </p>.<p>ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯು ಆಗಸ್ಟ್ನಲ್ಲಿ ಚಾಟ್ ಬಾಟ್ ಸೇವೆಗೆ ಚಾಲನೆ ನೀಡಿದ್ದೇವೆ. ಬೀಟ್ ಸಿಬ್ಬಂದಿ ನಂಬರ್, ಯಾವ ಠಾಣೆಯ ವ್ಯಾಪ್ತಿಯ ಯಾವ ಗ್ರಾಮ ಬರುತ್ತದೆ ಸೇರಿದಂತೆ ಹಲವು ಮಾಹಿತಿಯನ್ನು ಸಾರ್ವಜನಿಕರು ಕೇಳಿದ್ದಾರೆ. ಈ ಸೇವೆಯನ್ನು ಸದ್ಭಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.</p>.<p>ಚಿಂತಾಮಣಿ ಸಂಚಾರ ಠಾಣೆ ಮತ್ತು ಬಾಗೇಪಲ್ಲಿ ಉಪವಿಭಾಗ ರಚನೆಗೆ ಇಲಾಖೆಗೆ ಪ್ರಸ್ತಾವ ಸಹ ಸಲ್ಲಿಸಲಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೈ, ಡಿವೈಎಸ್ಪಿಗಳಾದ ಶಿವಕುಮಾರ್, ರವಿಕುಮಾರ್, ಮುರಳೀಧರ್ ಮಾಧ್ಯಮಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>