<p><strong>ಚಿಕ್ಕಬಳ್ಳಾಪುರ</strong>: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಬಂಧಿಗಳು ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಸೋಮವಾರ ಹಲ್ಲೆ ನಡೆಸಿದ್ದಾರೆ.</p>.<p>‘ನ್ಯಾಯಾಲಯಕ್ಕೆ ಹೋಗುವ ವಿಚಾರವನ್ನು ಮೊದಲೇ ನಮಗೆ ಏಕೆ ತಿಳಿಸಿಲ್ಲ. ಉಪಾಹಾರ ನೀಡದೆಯೇ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ’ ಎಂದು ಕಾರಾಗೃಹದ ಸಿಬ್ಬಂದಿ ಜೊತೆ ಈ ವಿಚಾರಣಾಧೀನ ಕೈದಿಗಳು ಜಗಳ ತೆಗೆದಿದ್ದಾರೆ. ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿದ್ದಾರೆ.</p>.<p>ಜೈಲರ್ ಸುನೀಲ್ ಡಿ.ಗಲ್ಲೆ, ಮುಖ್ಯ ವೀಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ. ದ್ವಾರಕಪಾಲಕ ಶಶಿಕುಮಾರ್ ಆರ್. ಧರಿಸಿದ್ದ ಬಾಡಿ ಕ್ಯಾಮೆರಾ ನಾಶಪಡಿಸಿದ್ದಾರೆ. ಸಹಾಯಕ ಜೈಲರ್ ಮಲ್ಲಿಕಾರ್ಜುನಪ್ಪ ಅವರಿಂದ ದಾಸ್ತಾನು ಕೊಠಡಿಯ ಬೀಗದ ಕೀಲಿಯನ್ನು ಬಲವಂತವಾಗಿ ಕಿತ್ತುಕೊಂಡು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. </p>.<p>ಅಡುಗೆಕೋಣೆಗೆ ತೆರಳಿ ಅಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಎಸೆದಾಡಿದ್ದಾರೆ. ಅಲ್ಲಿದ್ದ ಮಹಿಳಾ ಸಿಬ್ಬಂದಿಯನ್ನೂ ಅವಾಚ್ಯವಾಗಿ ನಿಂದಿಸಿದ್ದಾರೆ.</p>.<p>ತಕ್ಷಣ ಕಾರಾಗೃಹದ ಅಧೀಕ್ಷಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹೆಚ್ಚಿನ ಸಿಬ್ಬಂದಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಬಂಧಿಗಳು ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಸೋಮವಾರ ಹಲ್ಲೆ ನಡೆಸಿದ್ದಾರೆ.</p>.<p>‘ನ್ಯಾಯಾಲಯಕ್ಕೆ ಹೋಗುವ ವಿಚಾರವನ್ನು ಮೊದಲೇ ನಮಗೆ ಏಕೆ ತಿಳಿಸಿಲ್ಲ. ಉಪಾಹಾರ ನೀಡದೆಯೇ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ’ ಎಂದು ಕಾರಾಗೃಹದ ಸಿಬ್ಬಂದಿ ಜೊತೆ ಈ ವಿಚಾರಣಾಧೀನ ಕೈದಿಗಳು ಜಗಳ ತೆಗೆದಿದ್ದಾರೆ. ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿದ್ದಾರೆ.</p>.<p>ಜೈಲರ್ ಸುನೀಲ್ ಡಿ.ಗಲ್ಲೆ, ಮುಖ್ಯ ವೀಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ. ದ್ವಾರಕಪಾಲಕ ಶಶಿಕುಮಾರ್ ಆರ್. ಧರಿಸಿದ್ದ ಬಾಡಿ ಕ್ಯಾಮೆರಾ ನಾಶಪಡಿಸಿದ್ದಾರೆ. ಸಹಾಯಕ ಜೈಲರ್ ಮಲ್ಲಿಕಾರ್ಜುನಪ್ಪ ಅವರಿಂದ ದಾಸ್ತಾನು ಕೊಠಡಿಯ ಬೀಗದ ಕೀಲಿಯನ್ನು ಬಲವಂತವಾಗಿ ಕಿತ್ತುಕೊಂಡು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. </p>.<p>ಅಡುಗೆಕೋಣೆಗೆ ತೆರಳಿ ಅಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಎಸೆದಾಡಿದ್ದಾರೆ. ಅಲ್ಲಿದ್ದ ಮಹಿಳಾ ಸಿಬ್ಬಂದಿಯನ್ನೂ ಅವಾಚ್ಯವಾಗಿ ನಿಂದಿಸಿದ್ದಾರೆ.</p>.<p>ತಕ್ಷಣ ಕಾರಾಗೃಹದ ಅಧೀಕ್ಷಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹೆಚ್ಚಿನ ಸಿಬ್ಬಂದಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>