<p><strong>ಗೌರಿಬಿದನೂರು</strong>: ಶಿಕ್ಷಕರ ಸೇವಾ ಮನೋಭಾವ, ಗ್ರಾಮಸ್ಥರ ಸಹಕಾರ, ಮಕ್ಕಳಲ್ಲಿ ಕಲಿಯುವ ಹುಮ್ಮಸ್ಸು ಇಷ್ಟಿದ್ದರೆ ಸಾಕು ಯಾವುದೇ ಸರ್ಕಾರಿ ಶಾಲೆ ಮಹತ್ವ ಪೂರ್ಣವಾಗಿ ಅಭಿವೃದ್ಧಿ ಹೊಂದುತ್ತದೆ. ಇದಕ್ಕೆ ನಿದರ್ಶನ ತೊಂಡೇಬಾವಿ ಹೋಬಳಿಯ ಕಲ್ಲಿನಾಯಕನಹಳ್ಳಿ ಸರ್ಕಾರಿ ಶಾಲೆ. ಇಲ್ಲಿ ಒಂದರಿಂದ 10ರ ವರೆಗೆ ತರಗತಿಗಳು ನಡೆಯುತ್ತಿವೆ.</p>.<p>ಇಲ್ಲಿನ ಶಿಕ್ಷಕರ ಪರಿಶ್ರಮ ಅಪಾರ. ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಮುತುವರ್ಜಿ ವಹಿಸಿ ಬೋಧಿಸುವ ರೀತಿ ಎಲ್ಲಾ ಶಾಲೆಗಳಿಗೂ ಮಾದರಿಯಾಗಿದೆ. ಕಲಿಕೆಯ ಜೊತೆಗೆ ಶಾಲೆಯ ವಾತಾವರಣವನ್ನು ನೋಡಿದರೆ ಉತ್ತಮ ಎನ್ನುವ ಮಾತು ಬರುತ್ತದೆ. </p>.<p>ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು, ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ, ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ಕಲಿಸಲಾಗುತ್ತಿದೆ. </p>.<p>ದೇವರಹಳ್ಳಿ, ಕ್ರಿಶ್ಚಿಯನ್ ಕಾಲೊನಿ, ಬಂದಾರ್ಲಹಳ್ಳಿ, ಬಸವಾಪುರ ಇನ್ನು ಹಲವು ಗ್ರಾಮಗಳಿಂದ ಈ ಶಾಲೆಗೆ ವಿದ್ಯಾರ್ಥಿಗಳು ಬರುವರು. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. </p>.<p>ಶಾಲೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಶಿಕ್ಷಣ ಇಲಾಖೆ ಮತ್ತು ಪಂಚಾಯಿತಿ ಒದಗಿಸಿದೆ. ಹೆಣ್ಣುಮಕ್ಕಳಿಗೆ ಮತ್ತು ಗಂಡುಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿದೆ. ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಹ ಇದೆ.</p>.<p> Corteva ಅಗ್ರಿ ಸೈನ್ಸ್ ಸಂಸ್ಥೆಯು ಶಾಲೆಗೆ ಕಂಪ್ಯೂಟರ್, ಪ್ರೋಜೆಕ್ಟರ್, ಎಲ್ಲಾ ಕೊಠಡಿಗಳಿಗೂ ಗ್ರೀನ್ ಬೋರ್ಡ್, ಫ್ಯಾನ್ಗಳನ್ನು ಕೊಡುಗೆಯಾಗಿ ನೀಡಿದೆ. ಎ.ಸಿ.ಸಿ. ಕಾರ್ಖಾನೆಯವರು ಡೆಸ್ಕ್ ನೀಡಿದ್ದಾರೆ.<br>ಗ್ರಾಮದ ಮುಖಂಡರು, ಸ್ಮಾರ್ಟ್ ಟಿವಿ ಮತ್ತು ಪ್ರಿಂಟರ್ ನೀಡಿದ್ದಾರೆ. ಸ್ವಾಮಿ ವಿವೇಕಾನಂದ ಟ್ರಸ್ಟ್ ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ಲ್ಯಾಬ್ ನೀಡಿದೆ. ಹೀಗೆ ವಿವಿಧ ಸಂಘ ಸಂಸ್ಥೆಗಳು, ದಾನಿಗಳು ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. </p>.<p>ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಇಲ್ಲಿನ ಶಾಲಾಭಿವೃದ್ಧಿ ಸಮಿತಿ ಸಹ ಮಹತ್ವದ ಪಾತ್ರವಹಿಸುತ್ತಿದೆ. ಎಸ್ಡಿಎಂಸಿಯು ಕಾಲಕಾಲಕ್ಕೆ ಪೋಷಕರ ಸಭೆಗಳನ್ನು ಕರೆದು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿ ನೀಡುತ್ತಿದೆ. ಈ ಸಭೆಯಿಂದ ಶಿಕ್ಷಕರು ಮತ್ತು ಪೋಷಕರ ನಡುವೆ ಬಂಧ ಮತ್ತಷ್ಟು ಗಟ್ಟಿಯಾಗಿದೆ.</p>.<p>ಪಠ್ಯದ ಜೊತೆಗೆ ಕಲ್ಲಿನಾಯಕನಹಳ್ಳಿ ಶಾಲೆಯು ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದೆ. ಶಾಲೆಯಲ್ಲಿ ನಿರಂತರವಾಗಿ ಪ್ರತಿಭಾ ಕಾರಂಜಿ, ರಸಪ್ರಶ್ನೆ, ವಾಲಿಬಾಲ್, ಥ್ರೋ ಬಾಲ್ ಕ್ರೀಡೆಗಳು ಸೇರಿದಂತೆ ಇನ್ನೂ ಹಲವು ಬಗೆಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದರಿಂದ ಮಕ್ಕಳ ಸಾಂಸ್ಕೃತಿಕ ಮತ್ತು ಕ್ರೀಡಾ ಆಸಕ್ತಿಯು ಹೆಚ್ಚುತ್ತಿದೆ. </p>.<p>ಶಾಲೆಯಲ್ಲಿ ಸುಸಜ್ಜಿತ ಗ್ರಂಥಾಲಯವಿದ್ದು ಮಕ್ಕಳ ಜ್ಞಾನ ಬೆಳವಣಿಗೆಗೆ ಪ್ರಮುಖ ಪಾತ್ರವಹಿಸುತ್ತಿದೆ. ಗ್ರಂಥಾಲಯದಲ್ಲಿ ದೊಡ್ಡ ಮಟ್ಟದಲ್ಲಿ ಪುಸ್ತಕಗಳು ಇವೆ. ಮಕ್ಕಳ ಜ್ಞಾನರ್ಜನೆಗಾಗೆ ಗ್ರಂಥಾಲಯ ಮತ್ತು ವಿಜ್ಞಾನ ಗ್ರಂಥಾಲಯದ ನಿರ್ಮಾಣವಾಗಿದೆ. ವಿಜ್ಞಾನ ಗ್ರಂಥಾಲಯವು ಮಕ್ಕಳಿಗೆ ವೈಜ್ಞಾನಿಕ ವಿಷಯಗಳ ಬಗ್ಗೆ ತಿಳಿಯಲು ನೆರವಾಗಿದೆ.</p>.<p>ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಗಿಡಗಳ ಪೋಷಣೆ ಮತ್ತು ಕೈ ತೋಟ ನಿರ್ವಹಣೆಯು ಶಾಲೆಯಲ್ಲಿ ನಡೆಯುತ್ತಿದೆ. ಕೈ ತೋಟದ ತರಕಾರಿಗಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಲಾಗುತ್ತಿದೆ. </p>.<p>ಎಸ್. ಸುರೇಶ್ ಕುಮಾರ್ ಶಿಕ್ಷಣ ಸಚಿವರಾಗಿದ್ದ ವೇಳೆ ಶಾಲೆಗೆ ಭೇಟಿ ನೀಡಿದ್ದರು. ಇಲ್ಲಿನ ಪರಿಸರ ಮತ್ತು ಮಕ್ಕಳ ಕಲಿಕೆಯ ಬಗ್ಗೆ ಮನಸಾರೆ ಪ್ರಶಂಸೆ ವ್ಯಕ್ತಪಡಿಸಿದ್ದರು.</p>.<p>ಶಿಕ್ಷಕರ ಮುತುವರ್ಜಿ, ಪೋಷಕರ ಸಹಕಾರ ಮತ್ತು ಸಂಘ ಸಂಸ್ಥೆಗಳ ನೆರವಿನಿಂದ ಶಾಲೆ ತಾಲ್ಲೂಕಿನಲ್ಲಿ ಮಾದರಿ ಎನಿಸಿದೆ. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿಯು ಸಹ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. </p>.<p>ಹೀಗೆ ತಾಲ್ಲೂಕಿನ ಗ್ರಾಮೀಣ ಶಾಲೆಯೊಂದು ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಗಮನ ಸೆಳೆಯುತ್ತಿದೆ.</p>.<p>200ಕ್ಕೂ ಹೆಚ್ಚು ವಿದ್ಯಾರ್ಥಿಗಳ ವ್ಯಾಸಂಗ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಕೈ ತೋಟ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ದಾಖಲಾತಿ </p>.<p><strong>ಖಾಸಗಿ ಶಾಲೆಗಳ ತೀವ್ರ ಸ್ಪರ್ಧೆಯ ನಡುವೆಯೂ ನಮ್ಮ ಶಾಲಾ ಶಿಕ್ಷಕರ ಶ್ರಮ ಗ್ರಾಮಸ್ಥರ ಸಹಕಾರದಿಂದ ಶಾಲೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. </strong></p><p><strong>-ನರಸಮ್ಮ ಮುಖ್ಯಶಿಕ್ಷಕಿ ಕಲ್ಲಿನಾಯಕನಹಳ್ಳಿ ಶಾಲೆ ಗೌರಿಬಿದನೂರು</strong></p>.<p> ಶಿಕ್ಷಕರ ಸಂಕಲ್ಪ ಗ್ರಾಮಸ್ಥರ ಸಹಕಾರದಿಂದ ಮತ್ತು ಮಕ್ಕಳ ಜ್ಞಾನದ ಹಸಿವು ಕಲ್ಲಿನಾಯಕನಹಳ್ಳಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಿದೆ.</p><p>- ಶ್ರೀನಿವಾಸ ಮೂರ್ತಿ. ಕ್ಷೇತ್ರ ಶಿಕ್ಷಣಾಧಿಕಾರಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಶಿಕ್ಷಕರ ಸೇವಾ ಮನೋಭಾವ, ಗ್ರಾಮಸ್ಥರ ಸಹಕಾರ, ಮಕ್ಕಳಲ್ಲಿ ಕಲಿಯುವ ಹುಮ್ಮಸ್ಸು ಇಷ್ಟಿದ್ದರೆ ಸಾಕು ಯಾವುದೇ ಸರ್ಕಾರಿ ಶಾಲೆ ಮಹತ್ವ ಪೂರ್ಣವಾಗಿ ಅಭಿವೃದ್ಧಿ ಹೊಂದುತ್ತದೆ. ಇದಕ್ಕೆ ನಿದರ್ಶನ ತೊಂಡೇಬಾವಿ ಹೋಬಳಿಯ ಕಲ್ಲಿನಾಯಕನಹಳ್ಳಿ ಸರ್ಕಾರಿ ಶಾಲೆ. ಇಲ್ಲಿ ಒಂದರಿಂದ 10ರ ವರೆಗೆ ತರಗತಿಗಳು ನಡೆಯುತ್ತಿವೆ.</p>.<p>ಇಲ್ಲಿನ ಶಿಕ್ಷಕರ ಪರಿಶ್ರಮ ಅಪಾರ. ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಮುತುವರ್ಜಿ ವಹಿಸಿ ಬೋಧಿಸುವ ರೀತಿ ಎಲ್ಲಾ ಶಾಲೆಗಳಿಗೂ ಮಾದರಿಯಾಗಿದೆ. ಕಲಿಕೆಯ ಜೊತೆಗೆ ಶಾಲೆಯ ವಾತಾವರಣವನ್ನು ನೋಡಿದರೆ ಉತ್ತಮ ಎನ್ನುವ ಮಾತು ಬರುತ್ತದೆ. </p>.<p>ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು, ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ, ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ಕಲಿಸಲಾಗುತ್ತಿದೆ. </p>.<p>ದೇವರಹಳ್ಳಿ, ಕ್ರಿಶ್ಚಿಯನ್ ಕಾಲೊನಿ, ಬಂದಾರ್ಲಹಳ್ಳಿ, ಬಸವಾಪುರ ಇನ್ನು ಹಲವು ಗ್ರಾಮಗಳಿಂದ ಈ ಶಾಲೆಗೆ ವಿದ್ಯಾರ್ಥಿಗಳು ಬರುವರು. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. </p>.<p>ಶಾಲೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಶಿಕ್ಷಣ ಇಲಾಖೆ ಮತ್ತು ಪಂಚಾಯಿತಿ ಒದಗಿಸಿದೆ. ಹೆಣ್ಣುಮಕ್ಕಳಿಗೆ ಮತ್ತು ಗಂಡುಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿದೆ. ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಹ ಇದೆ.</p>.<p> Corteva ಅಗ್ರಿ ಸೈನ್ಸ್ ಸಂಸ್ಥೆಯು ಶಾಲೆಗೆ ಕಂಪ್ಯೂಟರ್, ಪ್ರೋಜೆಕ್ಟರ್, ಎಲ್ಲಾ ಕೊಠಡಿಗಳಿಗೂ ಗ್ರೀನ್ ಬೋರ್ಡ್, ಫ್ಯಾನ್ಗಳನ್ನು ಕೊಡುಗೆಯಾಗಿ ನೀಡಿದೆ. ಎ.ಸಿ.ಸಿ. ಕಾರ್ಖಾನೆಯವರು ಡೆಸ್ಕ್ ನೀಡಿದ್ದಾರೆ.<br>ಗ್ರಾಮದ ಮುಖಂಡರು, ಸ್ಮಾರ್ಟ್ ಟಿವಿ ಮತ್ತು ಪ್ರಿಂಟರ್ ನೀಡಿದ್ದಾರೆ. ಸ್ವಾಮಿ ವಿವೇಕಾನಂದ ಟ್ರಸ್ಟ್ ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ಲ್ಯಾಬ್ ನೀಡಿದೆ. ಹೀಗೆ ವಿವಿಧ ಸಂಘ ಸಂಸ್ಥೆಗಳು, ದಾನಿಗಳು ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. </p>.<p>ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಇಲ್ಲಿನ ಶಾಲಾಭಿವೃದ್ಧಿ ಸಮಿತಿ ಸಹ ಮಹತ್ವದ ಪಾತ್ರವಹಿಸುತ್ತಿದೆ. ಎಸ್ಡಿಎಂಸಿಯು ಕಾಲಕಾಲಕ್ಕೆ ಪೋಷಕರ ಸಭೆಗಳನ್ನು ಕರೆದು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿ ನೀಡುತ್ತಿದೆ. ಈ ಸಭೆಯಿಂದ ಶಿಕ್ಷಕರು ಮತ್ತು ಪೋಷಕರ ನಡುವೆ ಬಂಧ ಮತ್ತಷ್ಟು ಗಟ್ಟಿಯಾಗಿದೆ.</p>.<p>ಪಠ್ಯದ ಜೊತೆಗೆ ಕಲ್ಲಿನಾಯಕನಹಳ್ಳಿ ಶಾಲೆಯು ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದೆ. ಶಾಲೆಯಲ್ಲಿ ನಿರಂತರವಾಗಿ ಪ್ರತಿಭಾ ಕಾರಂಜಿ, ರಸಪ್ರಶ್ನೆ, ವಾಲಿಬಾಲ್, ಥ್ರೋ ಬಾಲ್ ಕ್ರೀಡೆಗಳು ಸೇರಿದಂತೆ ಇನ್ನೂ ಹಲವು ಬಗೆಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದರಿಂದ ಮಕ್ಕಳ ಸಾಂಸ್ಕೃತಿಕ ಮತ್ತು ಕ್ರೀಡಾ ಆಸಕ್ತಿಯು ಹೆಚ್ಚುತ್ತಿದೆ. </p>.<p>ಶಾಲೆಯಲ್ಲಿ ಸುಸಜ್ಜಿತ ಗ್ರಂಥಾಲಯವಿದ್ದು ಮಕ್ಕಳ ಜ್ಞಾನ ಬೆಳವಣಿಗೆಗೆ ಪ್ರಮುಖ ಪಾತ್ರವಹಿಸುತ್ತಿದೆ. ಗ್ರಂಥಾಲಯದಲ್ಲಿ ದೊಡ್ಡ ಮಟ್ಟದಲ್ಲಿ ಪುಸ್ತಕಗಳು ಇವೆ. ಮಕ್ಕಳ ಜ್ಞಾನರ್ಜನೆಗಾಗೆ ಗ್ರಂಥಾಲಯ ಮತ್ತು ವಿಜ್ಞಾನ ಗ್ರಂಥಾಲಯದ ನಿರ್ಮಾಣವಾಗಿದೆ. ವಿಜ್ಞಾನ ಗ್ರಂಥಾಲಯವು ಮಕ್ಕಳಿಗೆ ವೈಜ್ಞಾನಿಕ ವಿಷಯಗಳ ಬಗ್ಗೆ ತಿಳಿಯಲು ನೆರವಾಗಿದೆ.</p>.<p>ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಗಿಡಗಳ ಪೋಷಣೆ ಮತ್ತು ಕೈ ತೋಟ ನಿರ್ವಹಣೆಯು ಶಾಲೆಯಲ್ಲಿ ನಡೆಯುತ್ತಿದೆ. ಕೈ ತೋಟದ ತರಕಾರಿಗಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಲಾಗುತ್ತಿದೆ. </p>.<p>ಎಸ್. ಸುರೇಶ್ ಕುಮಾರ್ ಶಿಕ್ಷಣ ಸಚಿವರಾಗಿದ್ದ ವೇಳೆ ಶಾಲೆಗೆ ಭೇಟಿ ನೀಡಿದ್ದರು. ಇಲ್ಲಿನ ಪರಿಸರ ಮತ್ತು ಮಕ್ಕಳ ಕಲಿಕೆಯ ಬಗ್ಗೆ ಮನಸಾರೆ ಪ್ರಶಂಸೆ ವ್ಯಕ್ತಪಡಿಸಿದ್ದರು.</p>.<p>ಶಿಕ್ಷಕರ ಮುತುವರ್ಜಿ, ಪೋಷಕರ ಸಹಕಾರ ಮತ್ತು ಸಂಘ ಸಂಸ್ಥೆಗಳ ನೆರವಿನಿಂದ ಶಾಲೆ ತಾಲ್ಲೂಕಿನಲ್ಲಿ ಮಾದರಿ ಎನಿಸಿದೆ. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿಯು ಸಹ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. </p>.<p>ಹೀಗೆ ತಾಲ್ಲೂಕಿನ ಗ್ರಾಮೀಣ ಶಾಲೆಯೊಂದು ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಗಮನ ಸೆಳೆಯುತ್ತಿದೆ.</p>.<p>200ಕ್ಕೂ ಹೆಚ್ಚು ವಿದ್ಯಾರ್ಥಿಗಳ ವ್ಯಾಸಂಗ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಕೈ ತೋಟ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ದಾಖಲಾತಿ </p>.<p><strong>ಖಾಸಗಿ ಶಾಲೆಗಳ ತೀವ್ರ ಸ್ಪರ್ಧೆಯ ನಡುವೆಯೂ ನಮ್ಮ ಶಾಲಾ ಶಿಕ್ಷಕರ ಶ್ರಮ ಗ್ರಾಮಸ್ಥರ ಸಹಕಾರದಿಂದ ಶಾಲೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. </strong></p><p><strong>-ನರಸಮ್ಮ ಮುಖ್ಯಶಿಕ್ಷಕಿ ಕಲ್ಲಿನಾಯಕನಹಳ್ಳಿ ಶಾಲೆ ಗೌರಿಬಿದನೂರು</strong></p>.<p> ಶಿಕ್ಷಕರ ಸಂಕಲ್ಪ ಗ್ರಾಮಸ್ಥರ ಸಹಕಾರದಿಂದ ಮತ್ತು ಮಕ್ಕಳ ಜ್ಞಾನದ ಹಸಿವು ಕಲ್ಲಿನಾಯಕನಹಳ್ಳಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಿದೆ.</p><p>- ಶ್ರೀನಿವಾಸ ಮೂರ್ತಿ. ಕ್ಷೇತ್ರ ಶಿಕ್ಷಣಾಧಿಕಾರಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>