<p><strong>ಚಿಕ್ಕಬಳ್ಳಾಪುರ:</strong> ಕೊರೊನಾ ವೈರಸ್ ಸೋಂಕಿನ ಭೀತಿ ಮತ್ತು ಲಾಕ್ಡೌನ್ ಕಾರಣಕ್ಕೆ ಜಿಲ್ಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಮುಚ್ಚಿದ್ದ ದೇವಸ್ಥಾನಗಳು ಸೋಮವಾರ ಎಂದಿನಂತೆ ಬಾಗಿಲು ತೆರೆದು, ಭಕ್ತರಿಗೆ ಷರತ್ತು ಬದ್ಧ ದರ್ಶನ ಅವಕಾಶ ಕಲ್ಪಿಸಿದವು.</p>.<p>ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಸೋಮವಾರದಿಂದ ‘ಅನ್ಲಾಕ್ 1.0’ ಆರಂಭವಾಗಿದೆ. ಪರಿಷ್ಕೃತ ಮಾಗಸೂಚಿಯ ಅನ್ವಯ ರಾಜ್ಯ ಸರ್ಕಾರ ದೇವಾಲಯ ತೆರೆಯಲು ಅನುಮತಿ ನೀಡಿತ್ತು, ಹೀಗಾಗಿ, ಭಾನುವಾರವೇ ದೇಗುಲಗಳನ್ನು ಶುಚಿಗೊಳಿಸಿ, ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡ ದರ್ಶನಕ್ಕೆ ಅಣಿಗೊಳಿಸಲಾಗಿತ್ತು.</p>.<p>ಪ್ರತಿ ದೇವಾಲಯಗಳಲ್ಲಿ ಕೂಡ ಭಕ್ತರ ದರ್ಶನ ಸಾಲಿನಲ್ಲಿ ವ್ಯಕ್ತಿಗತ ಅಂತರ (6 ಅಡಿ) ಕಾಪಾಡಿಕೊಳ್ಳಲು ಅನುಕೂಲವಾಗುವಂತೆ ಬಿಳಿ ವೃತ್ತಗಳನ್ನು ರಚಿಸಲಾಗಿತ್ತು. ಅನೇಕ ಕಡೆಗಳಲ್ಲಿ ಕಟ್ಟಿಗೆಯ ತಡೆಬೇಲಿ ನಿರ್ಮಿಸಲಾಗಿತ್ತು. ಪ್ರವೇಶದ್ವಾರಗಳಲ್ಲಿ ಸ್ಯಾನಿಟೈಸರ್ ಸ್ಟ್ಯಾಂಡ್ ಅಳವಡಿಸಿದ್ದು ಗೋಚರಿಸಿತು.</p>.<p>ಸೋಮವಾರ ಬೆಳಿಗ್ಗೆಯಿಂದಲೇ ಭಕ್ತರು ದೇವಾಲಯಗಳತ್ತ ಮುಖ ಮಾಡಿದ್ದರು. ಕೆಲ ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದ ದೃಶ್ಯಗಳು ಕಂಡುಬಂದವು. ಸುರಕ್ಷತೆಯ ದೃಷ್ಟಿಯಿಂದ ದೇವಾಲಯಗಳಲ್ಲಿ ಭಕ್ತರಿಗೆ ತೀರ್ಥ, ಪ್ರಸಾದ ವಿತರಿಸದಂತೆ ಷರತ್ತು ವಿಧಿಸಿದ ಕಾರಣಕ್ಕೆ ಭಕ್ತರು ದರ್ಶನ ಮಾತ್ರದಿಂದಲೇ ಧನ್ಯತಾಭಾವ ಅನುಭವಿಸಿದರು.</p>.<p>ಜಿಲ್ಲೆಯಲ್ಲಿ ಸೋಮವಾರ ಪ್ರಮುಖವಾಗಿ ನಂದಿ ಗ್ರಾಮದ ಭೋಗನಂದೀಶ್ವರ, ರಂಗಸ್ಥಳದ ರಂಗನಾಥ ಸ್ವಾಮಿ, ಎಲ್ಲೋಡು ಆದಿನಾರಾಯಣಸ್ವಾಮಿ, ವಿಧುರಾಶ್ವತ್ಥದ ಅಶ್ವತ್ಥ ನಾರಾಯಣ ಸ್ವಾಮಿ, ಗಡಿದಂ ಲಕ್ಷ್ಮೀ ವೆಂಕಟರಮಣಸ್ವಾಮಿ, ಕೈವಾರ ಅಮರನಾರಾಯಣಸ್ವಾಮಿ ದೇಗುಲಗಳಲ್ಲಿ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ದರ್ಶನಕ್ಕೆ ಬಂದಿದ್ದು ಗೋಚರಿಸಿತು.</p>.<p>ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಎ, ಬಿ ಮತ್ತು ಸಿ ದರ್ಜೆಯ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಪ್ರತಿ ದೇವಾಲಯದ ಪ್ರವೇಶದ್ವಾರಗಳಲ್ಲಿ ಕೈ ಶುಚಿಗೊಳಿಸಿಕೊಳ್ಳಲು ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಾಸ್ಕ್ ಧರಿಸಿ ಬಂದವರಿಗೆ ಮಾತ್ರ ಥರ್ಮಲ್ ಸ್ಕ್ಯಾನಿಂಗ್ ಸಾಧನದಿಂದ ಪರಿಶೀಲಿಸಿ ದೇಗುಲಗಳ ಒಳಗೆ ಬಿಡಲಾಯಿತು. 65 ವಯಸ್ಸಿನ ವೃದ್ಧರು, 10 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿತ್ತು.</p>.<p>ದೇವಾಲಯಗಳಲ್ಲಿ ಇರುವವರು ಮತ್ತು ದರ್ಶನಕ್ಕೆ ಬಂದ ಭಕ್ತರ ಮೊಬೈಲ್ನಲ್ಲಿ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಆದರೆ, ಆ ವಿಚಾರ ಅಷ್ಟಾಗಿ ಗಂಭೀರವಾಗಿ ಭಕ್ತರು ಪರಿಗಣಿಸಿದ್ದು ಕಂಡು ಬರಲಿಲ್ಲ.</p>.<p>ಪ್ರಸ್ತುತ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿರುವಜಿಲ್ಲಾಡಳಿತ ಜನಸಂದಣಿ ಸೇರುವ ಉತ್ಸವಗಳಾದ ಬ್ರಹ್ಮ ರಥೋತ್ಸವ, ಜಾತ್ರೆ ಮುಂತಾದ ವಿಶೇಷ ಧಾರ್ಮಿಕ ಕೈಂಕರ್ಯಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕೊರೊನಾ ವೈರಸ್ ಸೋಂಕಿನ ಭೀತಿ ಮತ್ತು ಲಾಕ್ಡೌನ್ ಕಾರಣಕ್ಕೆ ಜಿಲ್ಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಮುಚ್ಚಿದ್ದ ದೇವಸ್ಥಾನಗಳು ಸೋಮವಾರ ಎಂದಿನಂತೆ ಬಾಗಿಲು ತೆರೆದು, ಭಕ್ತರಿಗೆ ಷರತ್ತು ಬದ್ಧ ದರ್ಶನ ಅವಕಾಶ ಕಲ್ಪಿಸಿದವು.</p>.<p>ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಸೋಮವಾರದಿಂದ ‘ಅನ್ಲಾಕ್ 1.0’ ಆರಂಭವಾಗಿದೆ. ಪರಿಷ್ಕೃತ ಮಾಗಸೂಚಿಯ ಅನ್ವಯ ರಾಜ್ಯ ಸರ್ಕಾರ ದೇವಾಲಯ ತೆರೆಯಲು ಅನುಮತಿ ನೀಡಿತ್ತು, ಹೀಗಾಗಿ, ಭಾನುವಾರವೇ ದೇಗುಲಗಳನ್ನು ಶುಚಿಗೊಳಿಸಿ, ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡ ದರ್ಶನಕ್ಕೆ ಅಣಿಗೊಳಿಸಲಾಗಿತ್ತು.</p>.<p>ಪ್ರತಿ ದೇವಾಲಯಗಳಲ್ಲಿ ಕೂಡ ಭಕ್ತರ ದರ್ಶನ ಸಾಲಿನಲ್ಲಿ ವ್ಯಕ್ತಿಗತ ಅಂತರ (6 ಅಡಿ) ಕಾಪಾಡಿಕೊಳ್ಳಲು ಅನುಕೂಲವಾಗುವಂತೆ ಬಿಳಿ ವೃತ್ತಗಳನ್ನು ರಚಿಸಲಾಗಿತ್ತು. ಅನೇಕ ಕಡೆಗಳಲ್ಲಿ ಕಟ್ಟಿಗೆಯ ತಡೆಬೇಲಿ ನಿರ್ಮಿಸಲಾಗಿತ್ತು. ಪ್ರವೇಶದ್ವಾರಗಳಲ್ಲಿ ಸ್ಯಾನಿಟೈಸರ್ ಸ್ಟ್ಯಾಂಡ್ ಅಳವಡಿಸಿದ್ದು ಗೋಚರಿಸಿತು.</p>.<p>ಸೋಮವಾರ ಬೆಳಿಗ್ಗೆಯಿಂದಲೇ ಭಕ್ತರು ದೇವಾಲಯಗಳತ್ತ ಮುಖ ಮಾಡಿದ್ದರು. ಕೆಲ ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದ ದೃಶ್ಯಗಳು ಕಂಡುಬಂದವು. ಸುರಕ್ಷತೆಯ ದೃಷ್ಟಿಯಿಂದ ದೇವಾಲಯಗಳಲ್ಲಿ ಭಕ್ತರಿಗೆ ತೀರ್ಥ, ಪ್ರಸಾದ ವಿತರಿಸದಂತೆ ಷರತ್ತು ವಿಧಿಸಿದ ಕಾರಣಕ್ಕೆ ಭಕ್ತರು ದರ್ಶನ ಮಾತ್ರದಿಂದಲೇ ಧನ್ಯತಾಭಾವ ಅನುಭವಿಸಿದರು.</p>.<p>ಜಿಲ್ಲೆಯಲ್ಲಿ ಸೋಮವಾರ ಪ್ರಮುಖವಾಗಿ ನಂದಿ ಗ್ರಾಮದ ಭೋಗನಂದೀಶ್ವರ, ರಂಗಸ್ಥಳದ ರಂಗನಾಥ ಸ್ವಾಮಿ, ಎಲ್ಲೋಡು ಆದಿನಾರಾಯಣಸ್ವಾಮಿ, ವಿಧುರಾಶ್ವತ್ಥದ ಅಶ್ವತ್ಥ ನಾರಾಯಣ ಸ್ವಾಮಿ, ಗಡಿದಂ ಲಕ್ಷ್ಮೀ ವೆಂಕಟರಮಣಸ್ವಾಮಿ, ಕೈವಾರ ಅಮರನಾರಾಯಣಸ್ವಾಮಿ ದೇಗುಲಗಳಲ್ಲಿ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ದರ್ಶನಕ್ಕೆ ಬಂದಿದ್ದು ಗೋಚರಿಸಿತು.</p>.<p>ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಎ, ಬಿ ಮತ್ತು ಸಿ ದರ್ಜೆಯ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಪ್ರತಿ ದೇವಾಲಯದ ಪ್ರವೇಶದ್ವಾರಗಳಲ್ಲಿ ಕೈ ಶುಚಿಗೊಳಿಸಿಕೊಳ್ಳಲು ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಾಸ್ಕ್ ಧರಿಸಿ ಬಂದವರಿಗೆ ಮಾತ್ರ ಥರ್ಮಲ್ ಸ್ಕ್ಯಾನಿಂಗ್ ಸಾಧನದಿಂದ ಪರಿಶೀಲಿಸಿ ದೇಗುಲಗಳ ಒಳಗೆ ಬಿಡಲಾಯಿತು. 65 ವಯಸ್ಸಿನ ವೃದ್ಧರು, 10 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿತ್ತು.</p>.<p>ದೇವಾಲಯಗಳಲ್ಲಿ ಇರುವವರು ಮತ್ತು ದರ್ಶನಕ್ಕೆ ಬಂದ ಭಕ್ತರ ಮೊಬೈಲ್ನಲ್ಲಿ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಆದರೆ, ಆ ವಿಚಾರ ಅಷ್ಟಾಗಿ ಗಂಭೀರವಾಗಿ ಭಕ್ತರು ಪರಿಗಣಿಸಿದ್ದು ಕಂಡು ಬರಲಿಲ್ಲ.</p>.<p>ಪ್ರಸ್ತುತ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿರುವಜಿಲ್ಲಾಡಳಿತ ಜನಸಂದಣಿ ಸೇರುವ ಉತ್ಸವಗಳಾದ ಬ್ರಹ್ಮ ರಥೋತ್ಸವ, ಜಾತ್ರೆ ಮುಂತಾದ ವಿಶೇಷ ಧಾರ್ಮಿಕ ಕೈಂಕರ್ಯಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>