<p><strong>ಚಿಕ್ಕಬಳ್ಳಾಪುರ:</strong> ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ಬಿಜೆಪಿ ಚಿಕ್ಕಬಳ್ಳಾಪುರ ಮರಳುಗಾಡು ಎನ್ನುವ ಸ್ಥಿತಿ ಇತ್ತು. ಅಂತಹ ಕಡೆಯಲ್ಲಿ ಪಕ್ಷವನ್ನು ಕಟ್ಟಿದ್ದೇನೆ ಎಂದರು.</p><p>ಪಕ್ಷ ಎಂದರೆ ನಾಲ್ಕಾರು ಜನರು ಸೇರಿ ಕಟ್ಟಬೇಕು. ವಿಜಯೇಂದ್ರ ಅವರಿಗೆ ‘ಎಸ್ ಬಾಸ್’ ಎನ್ನುವವರಿಗೆ ಪಕ್ಷದಲ್ಲಿ ಹುದ್ದೆಗಳನ್ನು ನೀಡಲಾಗುತ್ತಿದೆ. ಈ ವಿಚಾರವನ್ನು ಆರ್ಎಸ್ಎಸ್ ಮುಖ್ಯಸ್ಥರಿಗೆ ತಿಳಿಸಿದ್ದೇನೆ ಎಂದರು.</p><p>ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ನನ್ನ ರಾಜಕೀಯವನ್ನೇ ಪಣಕ್ಕೊಡ್ಡಿ ಬಿಜೆಪಿಗೆ ಬಂದೆ. ಆದರೆ ವಿಜಯೇಂದ್ರ ನನ್ನ ರಾಜಕೀಯ ಸಮಾಧಿ ಮಾಡಲು ಮುಂದಾಗಿದ್ದಾರೆ. ಇವರ ಧೋರಣೆ ಬಹಳಷ್ಟು ಮುಖಂಡರಿಗೆ ನೋವು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p><p>ಯಾರನ್ನೂ ವಿಶ್ವಾಸಕ್ಕೆ ಪಡೆಯುವ ಗುಣ ಇವರಿಗೆ ಇಲ್ಲ. ವಿಜಯೇಂದ್ರ ಅವರು ಈಗಾಗಲೇ ಮುಖ್ಯಮಂತ್ರಿ ಆಗಿದ್ದೇನೆ ಎನ್ನುವ ಭಾವನೆ ಅವರಲ್ಲಿ ಇದೆ. ದರ್ಪ, ಅಹಂಕಾರ ಹೆಚ್ಚಿದೆ. ನನ್ನ ಸೋಲಿಸಬೇಕು ಎಂದು ವಿಜಯೇಂದ್ರ ಹಿಂಬಾಲಕರು ಪ್ರಯತ್ನಿಸಿದರು ಎಂದರು. </p><p>ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ‘ನಿಮ್ಮನ್ನು ಭೇಟಿ ಆಗಬೇಕು’ ಎಂದು ಒಂದು ಸಂದೇಶ ಕಳುಹಿಸಿದರೆ ಅವರು ಪ್ರತಿಕ್ರಿಯಿಸುವರು. ಆದರೆ ಇವರು ಕರೆ ಸ್ವೀಕರಿಸುವುದಿಲ್ಲ. ಸಂದೇಶಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಕಿಡಿಕಾರಿದರು.</p><p>ಚುನಾವಣೆಯಲ್ಲಿ ಯಾರು ನನ್ನ ವಿರುದ್ಧ ಕೆಲಸ ಮಾಡಿದರೊ ಅಂತಹವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಮಾಡುತ್ತಿರಿ. ಯಾವ ಹಿರಿಯ ನಾಯಕರೂ ನಿಮಗೆ ಬೇಕಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>ಯಾವುದೇ ಭಿನ್ನಾಭಿಪ್ರಾಯ ಇದ್ದರೂ ನಾನು ಮಾಧ್ಯಮಗಳ ಎದುರು ಹೋಗಿರಲಿಲ್ಲ. ಆದರೆ ಈಗ ಆ ಅನಿವಾರ್ಯ ಎದುರಾಗಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಾಕತ್ತಿದ್ದರೆ ಬಂದು ಪಕ್ಷ ಕಟ್ಟಲಿ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ಬಿಜೆಪಿ ಚಿಕ್ಕಬಳ್ಳಾಪುರ ಮರಳುಗಾಡು ಎನ್ನುವ ಸ್ಥಿತಿ ಇತ್ತು. ಅಂತಹ ಕಡೆಯಲ್ಲಿ ಪಕ್ಷವನ್ನು ಕಟ್ಟಿದ್ದೇನೆ ಎಂದರು.</p><p>ಪಕ್ಷ ಎಂದರೆ ನಾಲ್ಕಾರು ಜನರು ಸೇರಿ ಕಟ್ಟಬೇಕು. ವಿಜಯೇಂದ್ರ ಅವರಿಗೆ ‘ಎಸ್ ಬಾಸ್’ ಎನ್ನುವವರಿಗೆ ಪಕ್ಷದಲ್ಲಿ ಹುದ್ದೆಗಳನ್ನು ನೀಡಲಾಗುತ್ತಿದೆ. ಈ ವಿಚಾರವನ್ನು ಆರ್ಎಸ್ಎಸ್ ಮುಖ್ಯಸ್ಥರಿಗೆ ತಿಳಿಸಿದ್ದೇನೆ ಎಂದರು.</p><p>ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ನನ್ನ ರಾಜಕೀಯವನ್ನೇ ಪಣಕ್ಕೊಡ್ಡಿ ಬಿಜೆಪಿಗೆ ಬಂದೆ. ಆದರೆ ವಿಜಯೇಂದ್ರ ನನ್ನ ರಾಜಕೀಯ ಸಮಾಧಿ ಮಾಡಲು ಮುಂದಾಗಿದ್ದಾರೆ. ಇವರ ಧೋರಣೆ ಬಹಳಷ್ಟು ಮುಖಂಡರಿಗೆ ನೋವು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p><p>ಯಾರನ್ನೂ ವಿಶ್ವಾಸಕ್ಕೆ ಪಡೆಯುವ ಗುಣ ಇವರಿಗೆ ಇಲ್ಲ. ವಿಜಯೇಂದ್ರ ಅವರು ಈಗಾಗಲೇ ಮುಖ್ಯಮಂತ್ರಿ ಆಗಿದ್ದೇನೆ ಎನ್ನುವ ಭಾವನೆ ಅವರಲ್ಲಿ ಇದೆ. ದರ್ಪ, ಅಹಂಕಾರ ಹೆಚ್ಚಿದೆ. ನನ್ನ ಸೋಲಿಸಬೇಕು ಎಂದು ವಿಜಯೇಂದ್ರ ಹಿಂಬಾಲಕರು ಪ್ರಯತ್ನಿಸಿದರು ಎಂದರು. </p><p>ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ‘ನಿಮ್ಮನ್ನು ಭೇಟಿ ಆಗಬೇಕು’ ಎಂದು ಒಂದು ಸಂದೇಶ ಕಳುಹಿಸಿದರೆ ಅವರು ಪ್ರತಿಕ್ರಿಯಿಸುವರು. ಆದರೆ ಇವರು ಕರೆ ಸ್ವೀಕರಿಸುವುದಿಲ್ಲ. ಸಂದೇಶಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಕಿಡಿಕಾರಿದರು.</p><p>ಚುನಾವಣೆಯಲ್ಲಿ ಯಾರು ನನ್ನ ವಿರುದ್ಧ ಕೆಲಸ ಮಾಡಿದರೊ ಅಂತಹವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಮಾಡುತ್ತಿರಿ. ಯಾವ ಹಿರಿಯ ನಾಯಕರೂ ನಿಮಗೆ ಬೇಕಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>ಯಾವುದೇ ಭಿನ್ನಾಭಿಪ್ರಾಯ ಇದ್ದರೂ ನಾನು ಮಾಧ್ಯಮಗಳ ಎದುರು ಹೋಗಿರಲಿಲ್ಲ. ಆದರೆ ಈಗ ಆ ಅನಿವಾರ್ಯ ಎದುರಾಗಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಾಕತ್ತಿದ್ದರೆ ಬಂದು ಪಕ್ಷ ಕಟ್ಟಲಿ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>