<p><strong>ಚಿಕ್ಕಮಗಳೂರು: </strong>ಕಾಫಿನಾಡಿನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರಿಗೆ ಸ್ಥಾನ ಉಳಿಸಿಕೊಳ್ಳುವ ಅನಿವಾರ್ಯತೆ ಇದ್ದರೆ, ಕಾಂಗ್ರೆಸ್ನ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಕೈಬಿಟ್ಟಿದ್ದ ಕ್ಷೇತ್ರವನ್ನು ಮರಳಿ ಪಡೆಯಲು ಕಸರತ್ತು ನಡೆಸಿದ್ದಾರೆ.</p>.<p>ಆಮ್ ಆದ್ಮಿ ಪಕ್ಷದಿಂದ ಡಾ.ಕೆ. ಸುಂದರಗೌಡ, ಪಕ್ಷೇತರವಾಗಿ ಬಿ.ಟಿ. ಚಂದ್ರಶೇಖರ ಹಾಗೂ ಜಿ.ಐ. ರೇಣುಕುಮಾರ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ತೀವ್ರ ಹಣಾಹಣಿಯಿದ್ದು ಶಕ್ತಿ ಪ್ರದರ್ಶನದ ಕಾವು ಏರಿದೆ.</p>.<p>ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬುದು ಆ ಪಕ್ಷದ ಲೆಕ್ಕಾಚಾರ. ಜೆಡಿಎಸ್ ಕಣದಿಂದ ದೂರ ಉಳಿದಿರುವುದು ತನಗೆ ಅನುಕೂಲವಾಗಲಿದೆ ಎಂಬುದು ಕಾಂಗ್ರೆಸ್ ವಿಶ್ಲೇಷಣೆ.</p>.<p>ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ.ಕೆ. ಪ್ರಾಣೇಶ್ ಅವರಿಗೆ ಉಪ ಸಭಾಪತಿ ಸ್ಥಾನ ಒಲಿದಿತ್ತು. ಚುನಾವಣೆಯಲ್ಲಿ ಈಗ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ನಾಯಕರೊಂದಿಗೆ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆ. ಮತದಾರರ ನಾಡಿಮಿಡಿತ ಹಿಡಿಯುವ ಸಾಹಸದಲ್ಲಿ ತೊಡಗಿದ್ದಾರೆ.</p>.<p>ಕಡೂರು ಭಾಗದಲ್ಲಿ ಜೆಡಿಎಸ್, ಕಾಂಗ್ರೆಸ್ಅನ್ನು ಬೆಂಬಲಿಸಲಿದೆ ಎಂದು ವೈ.ಎಸ್.ವಿ. ದತ್ತ ಹೇಳಿದ್ದಾರೆ. ಜೆಡಿಎಸ್ನ ಇತರ ಮುಖಂಡರಾದ ಎಸ್.ಎಲ್.ಭೋಜೇಗೌಡ, ಸುಧಾಕರ ಎಸ್. ಶೆಟ್ಟಿ ಅವರು ಬೆಂಬಲ ಯಾರಿಗೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಕಾಂಗ್ರೆಸ್ ಬೆಂಬಲಿಸುವುದಾಗಿ ಸಿಪಿಐ ಹೇಳಿದೆ.</p>.<p>ಗಾಯತ್ರಿ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಒಮ್ಮೆ ಗೆದ್ದು, ಒಮ್ಮೆ ಸೋತಿದ್ದಾರೆ. ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕರ ಒತ್ತಾಸೆಯಂತೆ ಕಣಕ್ಕೆ ಇಳಿದಿದ್ದಾರೆ. ಪಕ್ಷದ ಮುಖಂಡರು ಕ್ಷೇತ್ರಗಳನ್ನು ಹಂಚಿಕೊಂಡು ಪ್ರಚಾರದಲ್ಲಿ ತೊಡಗಿದ್ದಾರೆ.</p>.<p>ಮಲೆನಾಡು, ಬಯಲುಸೀಮೆ ಪ್ರದೇಶಗಳ ವೈಶಿಷ್ಟ್ಯದ ಕ್ಷೇತ್ರ ಇದು. ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಒಳಏಟಿನ ಭೀತಿಯೂ ಇದೆ. ಗೆಲುವಿನ ಹಾದಿ ಸುಗಮ ಇಲ್ಲ.</p>.<p>* ಗ್ರಾಮ ಪಂಚಾಯಿತಿಗಳಿಗೆ ಜನರೇಟರ್ ಒದಗಿಸಿದ್ದೇನೆ. ಬಿಜೆಪಿ ಸರ್ಕಾರದ ಯೋಜನೆಗಳು ಶ್ರೀರಕ್ಷೆಯಾಗಿವೆ. ಮತದಾರರು ಕೆಲಸ ಗುರುತಿಸಿ ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ.</p>.<p><em>-ಎಂ.ಕೆ. ಪ್ರಾಣೇಶ್, ಬಿಜೆಪಿ ಅಭ್ಯರ್ಥಿ</em></p>.<p>* ಪಕ್ಷದ ನಾಯಕರು ಬೆನ್ನಿಗೆ ನಿಂತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇನೆ. ಕಾಂಗ್ರೆಸ್ ಸಾಧನೆಗಳು, ವಿಧಾನ ಪರಿಷತ್ ಸದಸ್ಯೆಯಾಗಿದ್ದಾಗ ಮಾಡಿದ್ದ ಕೆಲಸಗಳು ಕೈಹಿಡಿಯಲಿವೆ.</p>.<p><em>-ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಅಭ್ಯರ್ಥಿ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಕಾಫಿನಾಡಿನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರಿಗೆ ಸ್ಥಾನ ಉಳಿಸಿಕೊಳ್ಳುವ ಅನಿವಾರ್ಯತೆ ಇದ್ದರೆ, ಕಾಂಗ್ರೆಸ್ನ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಕೈಬಿಟ್ಟಿದ್ದ ಕ್ಷೇತ್ರವನ್ನು ಮರಳಿ ಪಡೆಯಲು ಕಸರತ್ತು ನಡೆಸಿದ್ದಾರೆ.</p>.<p>ಆಮ್ ಆದ್ಮಿ ಪಕ್ಷದಿಂದ ಡಾ.ಕೆ. ಸುಂದರಗೌಡ, ಪಕ್ಷೇತರವಾಗಿ ಬಿ.ಟಿ. ಚಂದ್ರಶೇಖರ ಹಾಗೂ ಜಿ.ಐ. ರೇಣುಕುಮಾರ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ತೀವ್ರ ಹಣಾಹಣಿಯಿದ್ದು ಶಕ್ತಿ ಪ್ರದರ್ಶನದ ಕಾವು ಏರಿದೆ.</p>.<p>ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬುದು ಆ ಪಕ್ಷದ ಲೆಕ್ಕಾಚಾರ. ಜೆಡಿಎಸ್ ಕಣದಿಂದ ದೂರ ಉಳಿದಿರುವುದು ತನಗೆ ಅನುಕೂಲವಾಗಲಿದೆ ಎಂಬುದು ಕಾಂಗ್ರೆಸ್ ವಿಶ್ಲೇಷಣೆ.</p>.<p>ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ.ಕೆ. ಪ್ರಾಣೇಶ್ ಅವರಿಗೆ ಉಪ ಸಭಾಪತಿ ಸ್ಥಾನ ಒಲಿದಿತ್ತು. ಚುನಾವಣೆಯಲ್ಲಿ ಈಗ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ನಾಯಕರೊಂದಿಗೆ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆ. ಮತದಾರರ ನಾಡಿಮಿಡಿತ ಹಿಡಿಯುವ ಸಾಹಸದಲ್ಲಿ ತೊಡಗಿದ್ದಾರೆ.</p>.<p>ಕಡೂರು ಭಾಗದಲ್ಲಿ ಜೆಡಿಎಸ್, ಕಾಂಗ್ರೆಸ್ಅನ್ನು ಬೆಂಬಲಿಸಲಿದೆ ಎಂದು ವೈ.ಎಸ್.ವಿ. ದತ್ತ ಹೇಳಿದ್ದಾರೆ. ಜೆಡಿಎಸ್ನ ಇತರ ಮುಖಂಡರಾದ ಎಸ್.ಎಲ್.ಭೋಜೇಗೌಡ, ಸುಧಾಕರ ಎಸ್. ಶೆಟ್ಟಿ ಅವರು ಬೆಂಬಲ ಯಾರಿಗೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಕಾಂಗ್ರೆಸ್ ಬೆಂಬಲಿಸುವುದಾಗಿ ಸಿಪಿಐ ಹೇಳಿದೆ.</p>.<p>ಗಾಯತ್ರಿ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಒಮ್ಮೆ ಗೆದ್ದು, ಒಮ್ಮೆ ಸೋತಿದ್ದಾರೆ. ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕರ ಒತ್ತಾಸೆಯಂತೆ ಕಣಕ್ಕೆ ಇಳಿದಿದ್ದಾರೆ. ಪಕ್ಷದ ಮುಖಂಡರು ಕ್ಷೇತ್ರಗಳನ್ನು ಹಂಚಿಕೊಂಡು ಪ್ರಚಾರದಲ್ಲಿ ತೊಡಗಿದ್ದಾರೆ.</p>.<p>ಮಲೆನಾಡು, ಬಯಲುಸೀಮೆ ಪ್ರದೇಶಗಳ ವೈಶಿಷ್ಟ್ಯದ ಕ್ಷೇತ್ರ ಇದು. ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಒಳಏಟಿನ ಭೀತಿಯೂ ಇದೆ. ಗೆಲುವಿನ ಹಾದಿ ಸುಗಮ ಇಲ್ಲ.</p>.<p>* ಗ್ರಾಮ ಪಂಚಾಯಿತಿಗಳಿಗೆ ಜನರೇಟರ್ ಒದಗಿಸಿದ್ದೇನೆ. ಬಿಜೆಪಿ ಸರ್ಕಾರದ ಯೋಜನೆಗಳು ಶ್ರೀರಕ್ಷೆಯಾಗಿವೆ. ಮತದಾರರು ಕೆಲಸ ಗುರುತಿಸಿ ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ.</p>.<p><em>-ಎಂ.ಕೆ. ಪ್ರಾಣೇಶ್, ಬಿಜೆಪಿ ಅಭ್ಯರ್ಥಿ</em></p>.<p>* ಪಕ್ಷದ ನಾಯಕರು ಬೆನ್ನಿಗೆ ನಿಂತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇನೆ. ಕಾಂಗ್ರೆಸ್ ಸಾಧನೆಗಳು, ವಿಧಾನ ಪರಿಷತ್ ಸದಸ್ಯೆಯಾಗಿದ್ದಾಗ ಮಾಡಿದ್ದ ಕೆಲಸಗಳು ಕೈಹಿಡಿಯಲಿವೆ.</p>.<p><em>-ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಅಭ್ಯರ್ಥಿ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>