<p><strong>ಚಿಂತಾಮಣಿ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಸೋಮವಾರ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.</p>.<p>ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ನಂತರ ತಾಲ್ಲೂಕು ಆಡಳಿತ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಈ ಘಟನೆ ಹಿಂದೆ ‘ಸನಾತನ ಧರ್ಮದ ಹೆಸರಿನಲ್ಲಿ ವಿಚಿತ್ರ ಶಕ್ತಿಗಳು’ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು. ಕೇಂದ್ರದ ಬಿಜೆಪಿ ಸರ್ಕಾರ ಕಂಡೂ ಕಾಣದ ಕುರುಡು ನೀತಿ ಇಂತಹ ಘಟನೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು. ಈ ಘಟನೆ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ್ದು ಎಂದು ಆಗ್ರಹಿಸಿದರು.</p>.<p>ಆರೋಪಿ ಮೇಲೆ ಕಟ್ಟುನಿಟ್ಟಾದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಘಟನೆ ಹಿಂದಿರುವ ಕೋಮುವಾದಿ ಶಕ್ತಿಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಆನಂದ್, ಕಾರ್ಯದರ್ಶಿ ಲಕ್ಷ್ಮಿನಾರಾಯಣರೆಡ್ಡಿ, ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಗಡ್ಡಂ ವೆಂಕಟೇಶ್, ಜಿಲ್ಲಾ ಸಂಚಾಲಕ ವಿ.ನರಸಿಂಹಪ್ಪ, ತಾಲ್ಲೂಕು ಸಂಚಾಲಕ ಶ್ರೀರಂಗಪ್ಪ ಸೇರಿದಂತೆ ಹಲವು ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಸೋಮವಾರ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.</p>.<p>ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ನಂತರ ತಾಲ್ಲೂಕು ಆಡಳಿತ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಈ ಘಟನೆ ಹಿಂದೆ ‘ಸನಾತನ ಧರ್ಮದ ಹೆಸರಿನಲ್ಲಿ ವಿಚಿತ್ರ ಶಕ್ತಿಗಳು’ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು. ಕೇಂದ್ರದ ಬಿಜೆಪಿ ಸರ್ಕಾರ ಕಂಡೂ ಕಾಣದ ಕುರುಡು ನೀತಿ ಇಂತಹ ಘಟನೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು. ಈ ಘಟನೆ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ್ದು ಎಂದು ಆಗ್ರಹಿಸಿದರು.</p>.<p>ಆರೋಪಿ ಮೇಲೆ ಕಟ್ಟುನಿಟ್ಟಾದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಘಟನೆ ಹಿಂದಿರುವ ಕೋಮುವಾದಿ ಶಕ್ತಿಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಆನಂದ್, ಕಾರ್ಯದರ್ಶಿ ಲಕ್ಷ್ಮಿನಾರಾಯಣರೆಡ್ಡಿ, ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಗಡ್ಡಂ ವೆಂಕಟೇಶ್, ಜಿಲ್ಲಾ ಸಂಚಾಲಕ ವಿ.ನರಸಿಂಹಪ್ಪ, ತಾಲ್ಲೂಕು ಸಂಚಾಲಕ ಶ್ರೀರಂಗಪ್ಪ ಸೇರಿದಂತೆ ಹಲವು ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>