<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ–ಜೆಡಿಎಸ್ ಮೈತ್ರಿಯ ಬೆಂಬಲಿತ ಮುಖಂಡರು ಮತ್ತು ಕಾರ್ಯದರ್ಶಿ ಮಧ್ಯೆ ಸೋಮವಾರ ವಾಗ್ವಾದ ನಡೆಯಿತು. </p>.<p>ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎನ್ಡಿಎ ಒಕ್ಕೂಟದ ಬೆಂಬಲಿತ ಮುಖಂಡರು, ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರುಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ್ದರು.</p>.<p>ಚುನಾವಣಾ ಅಧಿಕಾರಿ ಶುಭಾ ಅವರು ಸೋಮವಾರ ಸಂಘದ ಕಚೇರಿಗೆ ಆಗಮಿಸುತ್ತಿದ್ದಂತೆ, ಬಿಜೆಪಿ–ಜೆಡಿಎಸ್ ಬೆಂಬಲಿತ ಮುಖಂಡರು, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಮೊದಲ ಇದನ್ನು ಪರಿಶೀಲಿಸಬೇಕು. ಆ ನಂತರಷ್ಟೇ ಚುನಾವಣಾ ಪ್ರಕ್ರಿಯೆ ನಡೆಸಬೇಕು ಎಂದು ಪಟ್ಟು ಹಿಡಿದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಶುಭಾ, ‘ನನ್ನನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದ್ದರೆ, ಕಾರ್ಯದರ್ಶಿ ಬಳಿ ಬಗೆಹರಿಸಿಕೊಳ್ಳಿ’ ಎಂದು ಹೇಳಿದರು. </p>.<p>ಅಕ್ರಮ ಸರಿಪಡಿಸಬೇಕು ಎಂದು ಸೊಸೈಟಿ ಕಾರ್ಯದರ್ಶಿ ರಾಜಕುಮಾರ್ ಅವರ ಬಳಿಯೂ ಒತ್ತಾಯಿಸಲಾಯಿತು. ಈ ಕುರಿತು ಲಿಖಿತವಾಗಿ ಮಾಹಿತಿ ಕೋರಿದಲ್ಲಿ, ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಮೇಲಧಿಕಾರಿಗಳ ಗಮನಕ್ಕೆ ತಂದು ಉತ್ತರ ನೀಡುತ್ತೇನೆ ಎಂದು ಕಾರ್ಯದರ್ಶಿ ತಿಳಿಸಿದರು. ಈ ವೇಳೆ ಕಾರ್ಯದರ್ಶಿ ಮತ್ತು ಷೇರುದಾರರ ಮಧ್ಯೆ ಮಾತಿಗೆ ಮಾತು ಬೆಳೆದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು. </p>.<p>ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು, ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಲು ಅನುವು ಮಾಡಿಕೊಟ್ಟರು. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಯಿತು. ಚುನಾವಣಾಧಿಕಾರಿ ನಾಮಪತ್ರ ಸ್ವೀಕರಿಸಿದರು. </p>.<p>ದಾಖಲೆಗಳ ಪ್ರಕಾರ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂದು ಕಾರ್ಯದರ್ಶಿ ಸ್ಪಷ್ಟಪಡಿಸಿದರು. </p>.<p>ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಕೆಲವರ ಹೆಸರು ಸೇರಿಸಿರುವುದು ಎಷ್ಟು ಸರಿ ಎಂದು ಎನ್ಡಿಎ ಬೆಂಬಲಿತರಾದ ದೊಡ್ಡಹಳ್ಳಿ ಗೋಪಾಲಕೃಷ್ಣ, ಗ್ರಾ.ಪಂ.ಮಾಜಿ ಸದಸ್ಯ ರಾಮಚಂದ್ರಪ್ಪ ಮತ್ತಿತರರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ–ಜೆಡಿಎಸ್ ಮೈತ್ರಿಯ ಬೆಂಬಲಿತ ಮುಖಂಡರು ಮತ್ತು ಕಾರ್ಯದರ್ಶಿ ಮಧ್ಯೆ ಸೋಮವಾರ ವಾಗ್ವಾದ ನಡೆಯಿತು. </p>.<p>ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎನ್ಡಿಎ ಒಕ್ಕೂಟದ ಬೆಂಬಲಿತ ಮುಖಂಡರು, ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರುಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ್ದರು.</p>.<p>ಚುನಾವಣಾ ಅಧಿಕಾರಿ ಶುಭಾ ಅವರು ಸೋಮವಾರ ಸಂಘದ ಕಚೇರಿಗೆ ಆಗಮಿಸುತ್ತಿದ್ದಂತೆ, ಬಿಜೆಪಿ–ಜೆಡಿಎಸ್ ಬೆಂಬಲಿತ ಮುಖಂಡರು, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಮೊದಲ ಇದನ್ನು ಪರಿಶೀಲಿಸಬೇಕು. ಆ ನಂತರಷ್ಟೇ ಚುನಾವಣಾ ಪ್ರಕ್ರಿಯೆ ನಡೆಸಬೇಕು ಎಂದು ಪಟ್ಟು ಹಿಡಿದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಶುಭಾ, ‘ನನ್ನನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದ್ದರೆ, ಕಾರ್ಯದರ್ಶಿ ಬಳಿ ಬಗೆಹರಿಸಿಕೊಳ್ಳಿ’ ಎಂದು ಹೇಳಿದರು. </p>.<p>ಅಕ್ರಮ ಸರಿಪಡಿಸಬೇಕು ಎಂದು ಸೊಸೈಟಿ ಕಾರ್ಯದರ್ಶಿ ರಾಜಕುಮಾರ್ ಅವರ ಬಳಿಯೂ ಒತ್ತಾಯಿಸಲಾಯಿತು. ಈ ಕುರಿತು ಲಿಖಿತವಾಗಿ ಮಾಹಿತಿ ಕೋರಿದಲ್ಲಿ, ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಮೇಲಧಿಕಾರಿಗಳ ಗಮನಕ್ಕೆ ತಂದು ಉತ್ತರ ನೀಡುತ್ತೇನೆ ಎಂದು ಕಾರ್ಯದರ್ಶಿ ತಿಳಿಸಿದರು. ಈ ವೇಳೆ ಕಾರ್ಯದರ್ಶಿ ಮತ್ತು ಷೇರುದಾರರ ಮಧ್ಯೆ ಮಾತಿಗೆ ಮಾತು ಬೆಳೆದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು. </p>.<p>ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು, ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಲು ಅನುವು ಮಾಡಿಕೊಟ್ಟರು. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಯಿತು. ಚುನಾವಣಾಧಿಕಾರಿ ನಾಮಪತ್ರ ಸ್ವೀಕರಿಸಿದರು. </p>.<p>ದಾಖಲೆಗಳ ಪ್ರಕಾರ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂದು ಕಾರ್ಯದರ್ಶಿ ಸ್ಪಷ್ಟಪಡಿಸಿದರು. </p>.<p>ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಕೆಲವರ ಹೆಸರು ಸೇರಿಸಿರುವುದು ಎಷ್ಟು ಸರಿ ಎಂದು ಎನ್ಡಿಎ ಬೆಂಬಲಿತರಾದ ದೊಡ್ಡಹಳ್ಳಿ ಗೋಪಾಲಕೃಷ್ಣ, ಗ್ರಾ.ಪಂ.ಮಾಜಿ ಸದಸ್ಯ ರಾಮಚಂದ್ರಪ್ಪ ಮತ್ತಿತರರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>