<p><strong>ಚಿಂತಾಮಣಿ:</strong> ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದೆ ಪೋಷಕರು ಮತ್ತು ಶಿಕ್ಷಕರ ಸಭೆಯನ್ನು ಶುಕ್ರವಾರ ಆಯೋಜಿಸಲಾಯಿತು. </p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರವಚನಕಾರ ತಳಗವಾರ ಟಿ.ಎಲ್. ಆನಂದ್, ‘ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಉತ್ತಮವಾಗಿರುತ್ತದೆ’ ಎಂದು ಪ್ರತಿಪಾದಿಸಿದರು. </p>.<p>ವಿದ್ಯಾರ್ಥಿಗಳಿಗೆ ಪೋಷಕರು ಮೊದಲನೇ ಮಾರ್ಗದರ್ಶಕರಾದರೆ, ಶಿಕ್ಷಕರು ಎರಡನೇ ಮಾರ್ಗದರ್ಶಕರಾಗಿರುತ್ತಾರೆ. ಈ ಇಬ್ಬರ ಸಹಕಾರದಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ. ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿ ಅರ್ಥಮಾಡಿಕೊಂಡು ಕೆಲಸ ಮಾಡಿದರೆ ವಿದ್ಯಾರ್ಥಿಗಳಲ್ಲಿ ಸಕರಾತ್ಮಕ ಬದಲಾವಣೆ ಕಂಡುಬರುತ್ತದೆ ಎಂದರು. </p>.<p>ನೋಡಲ್ ಶಿಕ್ಷಕ ಫಯಾಜ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾಗುವ ಬಗ್ಗೆ ಪೋಷಕರು ಗಮನಹರಿಸಬೇಕು. ಶಾಲೆಗೆ ನಿಯಮಿತವಾಗಿ ಗೈರು ಹಾಜರಾದರೆ ಪಾಠ-ಪ್ರವಚನಗಳಿಂದ ವಂಚಿತರಾಗುತ್ತಾರೆ. ಇದರಿಂದ ಅವರ ಮುಂದಿನ ವಿದ್ಯಾಭ್ಯಾಸವು ಕುಂಠಿತವಾಗುತ್ತದೆ ಎಂದರು.</p>.<p>ಶಿಕ್ಷಕ ನಂಜುಂಡೇಶ್ವರ ಪಾಠ ಆಧಾರಿತ ಮೌಲ್ಯಾಂಕನದ ಬಗ್ಗೆ, ಶಿಕ್ಷಕ ಭಾಸ್ಕರ್ ಗೌಡ ಎಸ್ಎಸ್ಎಲ್ಸಿ ಕಾರ್ಯಚಟುವಟಿಕೆ ಬಗ್ಗೆ ಶಿಕ್ಷಕಿ ಸೌಭಾಗ್ಯಮ್ಮ ಸಮನ್ವಯ ಶಿಕ್ಷಣದ ಬಗ್ಗೆ, ಶಿಕ್ಷಕಿ ಸುಗುಣ ಪೋಕ್ಸೊ ಕಾಯಿದೆ ಬಗ್ಗೆ ವಿಷಯಗಳನ್ನು ಮಂಡಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಮುಖ್ಯಶಿಕ್ಷಕ ಸುಭಾಷ್ ಚಂದ್ರಬೋಸ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಮುನಿರಾಜು ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದೆ ಪೋಷಕರು ಮತ್ತು ಶಿಕ್ಷಕರ ಸಭೆಯನ್ನು ಶುಕ್ರವಾರ ಆಯೋಜಿಸಲಾಯಿತು. </p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರವಚನಕಾರ ತಳಗವಾರ ಟಿ.ಎಲ್. ಆನಂದ್, ‘ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಉತ್ತಮವಾಗಿರುತ್ತದೆ’ ಎಂದು ಪ್ರತಿಪಾದಿಸಿದರು. </p>.<p>ವಿದ್ಯಾರ್ಥಿಗಳಿಗೆ ಪೋಷಕರು ಮೊದಲನೇ ಮಾರ್ಗದರ್ಶಕರಾದರೆ, ಶಿಕ್ಷಕರು ಎರಡನೇ ಮಾರ್ಗದರ್ಶಕರಾಗಿರುತ್ತಾರೆ. ಈ ಇಬ್ಬರ ಸಹಕಾರದಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ. ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿ ಅರ್ಥಮಾಡಿಕೊಂಡು ಕೆಲಸ ಮಾಡಿದರೆ ವಿದ್ಯಾರ್ಥಿಗಳಲ್ಲಿ ಸಕರಾತ್ಮಕ ಬದಲಾವಣೆ ಕಂಡುಬರುತ್ತದೆ ಎಂದರು. </p>.<p>ನೋಡಲ್ ಶಿಕ್ಷಕ ಫಯಾಜ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾಗುವ ಬಗ್ಗೆ ಪೋಷಕರು ಗಮನಹರಿಸಬೇಕು. ಶಾಲೆಗೆ ನಿಯಮಿತವಾಗಿ ಗೈರು ಹಾಜರಾದರೆ ಪಾಠ-ಪ್ರವಚನಗಳಿಂದ ವಂಚಿತರಾಗುತ್ತಾರೆ. ಇದರಿಂದ ಅವರ ಮುಂದಿನ ವಿದ್ಯಾಭ್ಯಾಸವು ಕುಂಠಿತವಾಗುತ್ತದೆ ಎಂದರು.</p>.<p>ಶಿಕ್ಷಕ ನಂಜುಂಡೇಶ್ವರ ಪಾಠ ಆಧಾರಿತ ಮೌಲ್ಯಾಂಕನದ ಬಗ್ಗೆ, ಶಿಕ್ಷಕ ಭಾಸ್ಕರ್ ಗೌಡ ಎಸ್ಎಸ್ಎಲ್ಸಿ ಕಾರ್ಯಚಟುವಟಿಕೆ ಬಗ್ಗೆ ಶಿಕ್ಷಕಿ ಸೌಭಾಗ್ಯಮ್ಮ ಸಮನ್ವಯ ಶಿಕ್ಷಣದ ಬಗ್ಗೆ, ಶಿಕ್ಷಕಿ ಸುಗುಣ ಪೋಕ್ಸೊ ಕಾಯಿದೆ ಬಗ್ಗೆ ವಿಷಯಗಳನ್ನು ಮಂಡಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಮುಖ್ಯಶಿಕ್ಷಕ ಸುಭಾಷ್ ಚಂದ್ರಬೋಸ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಮುನಿರಾಜು ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>