<p><strong>ಚಿಂತಾಮಣಿ:</strong> ತಾಲ್ಲೂಕಿನ ಸಂತೇಕಲ್ಲಹಳ್ಳಿ ಗ್ರಾಮದ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಸಮುದಾಯ ಭವನದಲ್ಲಿ 2009–10ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ವತಿಯಿಂದ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು. </p>.<p>ಶಿಕ್ಷಕ ಮಂಜುನಾಥ್ ಮಾತನಾಡಿ, ‘ಕಷ್ಟ ಬಂದಾಗ ಕೈ ಹಿಡಿಯುವ, ದುಃಖದಲ್ಲಿದ್ದಾಗ ಧೈರ್ಯ ತುಂಬುವ ವ್ಯಕ್ತಿಯನ್ನು ಸಂಪಾದನೆ ಮಾಡಿದರೆ ಅದುವೇ ಹಣಕ್ಕಿಂತ ದೊಡ್ಡ ಸಂಪಾದನೆ’ ಎಂದು ಹೇಳಿದರು. </p>.<p>ವಿದ್ಯಾರ್ಥಿಗಳು ತಮ್ಮನ್ನು ರೂಪಿಸಿದ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿ ಗೌರವಿಸುತ್ತಾರೆ. ಇದು ಶಿಕ್ಷಕರ ತ್ಯಾಗ ಮತ್ತು ಮಾರ್ಗದರ್ಶನ ಸ್ಮರಿಸುವ ಒಂದು ಪವಿತ್ರ ಕಾರ್ಯ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳು ಕೇವಲ ವಿದ್ಯಾರ್ಥಿ ಜೀವನಕ್ಕಷ್ಟೆ ಸೀಮಿತರಲ್ಲ. ನಾವು ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಿದ್ದರೂ ವಿದ್ಯಾರ್ಥಿಗಳು ನಮ್ಮನ್ನು ಶಿಕ್ಷಕರೆಂದೇ ಸಂಭೋದಿಸುತ್ತಾರೆ. ಇದಕ್ಕಿಂತ ಮಿಗಿಲು ನಮಗೆ ಮತ್ತೇನಿದೆ ಎಂದರು. </p>.<p>ಅಂದಿನ ಶಿಕ್ಷಕರಾಗಿದ್ದ ಮಂಜುನಾಥ್, ಮಲ್ಲೇಗೌಡ, ಶಿವಾರೆಡ್ಡಿ, ಕೃಷ್ಣಮೂರ್ತಿ, ರಮೇಶ್, ಗಂಗಾಧರ, ಲೀಲಾವತಿ, ಉಷಾರಾಣಿ, ಶ್ರೀಧರ್, ತ್ಯಾಗರಾಜ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಸಂತೇಕಲ್ಲಹಳ್ಳಿ ಗ್ರಾಮದ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಸಮುದಾಯ ಭವನದಲ್ಲಿ 2009–10ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ವತಿಯಿಂದ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು. </p>.<p>ಶಿಕ್ಷಕ ಮಂಜುನಾಥ್ ಮಾತನಾಡಿ, ‘ಕಷ್ಟ ಬಂದಾಗ ಕೈ ಹಿಡಿಯುವ, ದುಃಖದಲ್ಲಿದ್ದಾಗ ಧೈರ್ಯ ತುಂಬುವ ವ್ಯಕ್ತಿಯನ್ನು ಸಂಪಾದನೆ ಮಾಡಿದರೆ ಅದುವೇ ಹಣಕ್ಕಿಂತ ದೊಡ್ಡ ಸಂಪಾದನೆ’ ಎಂದು ಹೇಳಿದರು. </p>.<p>ವಿದ್ಯಾರ್ಥಿಗಳು ತಮ್ಮನ್ನು ರೂಪಿಸಿದ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿ ಗೌರವಿಸುತ್ತಾರೆ. ಇದು ಶಿಕ್ಷಕರ ತ್ಯಾಗ ಮತ್ತು ಮಾರ್ಗದರ್ಶನ ಸ್ಮರಿಸುವ ಒಂದು ಪವಿತ್ರ ಕಾರ್ಯ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳು ಕೇವಲ ವಿದ್ಯಾರ್ಥಿ ಜೀವನಕ್ಕಷ್ಟೆ ಸೀಮಿತರಲ್ಲ. ನಾವು ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಿದ್ದರೂ ವಿದ್ಯಾರ್ಥಿಗಳು ನಮ್ಮನ್ನು ಶಿಕ್ಷಕರೆಂದೇ ಸಂಭೋದಿಸುತ್ತಾರೆ. ಇದಕ್ಕಿಂತ ಮಿಗಿಲು ನಮಗೆ ಮತ್ತೇನಿದೆ ಎಂದರು. </p>.<p>ಅಂದಿನ ಶಿಕ್ಷಕರಾಗಿದ್ದ ಮಂಜುನಾಥ್, ಮಲ್ಲೇಗೌಡ, ಶಿವಾರೆಡ್ಡಿ, ಕೃಷ್ಣಮೂರ್ತಿ, ರಮೇಶ್, ಗಂಗಾಧರ, ಲೀಲಾವತಿ, ಉಷಾರಾಣಿ, ಶ್ರೀಧರ್, ತ್ಯಾಗರಾಜ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>