<p><strong>ಚಿಂತಾಮಣಿ</strong>: ಕೊಳವೆಬಾವಿ ಕೇಬಲ್ ಕಳ್ಳತನ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸರ ತಂಡವು ಮೂವರು ಆರೋಪಿಗಳನ್ನು ಬಂಧಿಸಿದೆ. </p>.<p>ಬಂಧಿತರಿಂದ ಕೊಳವೆಬಾವಿಗೆ ಅಳವಡಿಸುವ ಕೇಬಲ್ ಅನ್ನು ವಶಕ್ಕೆ ಪಡೆದಿದ್ದಾರೆ. </p>.<p>ಚಿಂತಾಮಣಿಯ ಶಾಂತಿ ನಗರದ ಗುಜರಿ ವ್ಯಾಪಾರಿ ಬಾಬೂಖಾನ್, ಮಹಬೂಬ್ ನಗರದ ಆಟೊ ಚಾಲಕ ಇಮ್ತಿಯಾಜ್ ಬೇಗ್, ಚೇಳೂರು ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಕೂಲಿ ಕೆಲಸ ಮಾಡುವ ರಾಜಾ ಬಂಧಿತರು. ಬಂಧಿತರಿಂದ ₹23,400 ಮೊತ್ತದ 130 ಮೀಟರ್ ಕೇಬಲ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೆಂಚಾರ್ಲಹಳ್ಳಿ ಗ್ರಾಮದ 15 ರೈತರು ಕೊಳವೆಬಾವಿಗಳಿಗೆ ಅಳವಡಿಸಿದ್ದ ಕೇಬಲ್ ಕಳ್ಳತನವಾಗಿದೆ ಎಂದು ದೂರು ನೀಡಿದ್ದರು. ಆರೋಪಿಗಳು ಮತ್ತು ಮಾಲನ್ನು ಪತ್ತೆ ಮಾಡಲು ಕೆಂಚಾರ್ಲಹಳ್ಳಿ ಠಾಣೆ ಇನ್ಸ್ಪೆಕ್ಟರ್ ಜಿ.ಸಿ.ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.</p>.<p>ಅಪರಾಧ ಸಿಬ್ಬಂದಿ ನರಸಿಂಹಮೂರ್ತಿ, ವಿಜಯಕುಮಾರ್, ವಿಶ್ವನಾಥ್, ನಾರಾಯಣ್, ಸಿ.ಲೋಕೇಶ್ ರವರು ತಂಡದಲ್ಲಿದ್ದರು ಎಂದು ಕೆಂಚಾರ್ಲಹಳ್ಳಿ ಠಾಣೆ ನೀಡಿರುವ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಕೊಳವೆಬಾವಿ ಕೇಬಲ್ ಕಳ್ಳತನ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸರ ತಂಡವು ಮೂವರು ಆರೋಪಿಗಳನ್ನು ಬಂಧಿಸಿದೆ. </p>.<p>ಬಂಧಿತರಿಂದ ಕೊಳವೆಬಾವಿಗೆ ಅಳವಡಿಸುವ ಕೇಬಲ್ ಅನ್ನು ವಶಕ್ಕೆ ಪಡೆದಿದ್ದಾರೆ. </p>.<p>ಚಿಂತಾಮಣಿಯ ಶಾಂತಿ ನಗರದ ಗುಜರಿ ವ್ಯಾಪಾರಿ ಬಾಬೂಖಾನ್, ಮಹಬೂಬ್ ನಗರದ ಆಟೊ ಚಾಲಕ ಇಮ್ತಿಯಾಜ್ ಬೇಗ್, ಚೇಳೂರು ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಕೂಲಿ ಕೆಲಸ ಮಾಡುವ ರಾಜಾ ಬಂಧಿತರು. ಬಂಧಿತರಿಂದ ₹23,400 ಮೊತ್ತದ 130 ಮೀಟರ್ ಕೇಬಲ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೆಂಚಾರ್ಲಹಳ್ಳಿ ಗ್ರಾಮದ 15 ರೈತರು ಕೊಳವೆಬಾವಿಗಳಿಗೆ ಅಳವಡಿಸಿದ್ದ ಕೇಬಲ್ ಕಳ್ಳತನವಾಗಿದೆ ಎಂದು ದೂರು ನೀಡಿದ್ದರು. ಆರೋಪಿಗಳು ಮತ್ತು ಮಾಲನ್ನು ಪತ್ತೆ ಮಾಡಲು ಕೆಂಚಾರ್ಲಹಳ್ಳಿ ಠಾಣೆ ಇನ್ಸ್ಪೆಕ್ಟರ್ ಜಿ.ಸಿ.ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.</p>.<p>ಅಪರಾಧ ಸಿಬ್ಬಂದಿ ನರಸಿಂಹಮೂರ್ತಿ, ವಿಜಯಕುಮಾರ್, ವಿಶ್ವನಾಥ್, ನಾರಾಯಣ್, ಸಿ.ಲೋಕೇಶ್ ರವರು ತಂಡದಲ್ಲಿದ್ದರು ಎಂದು ಕೆಂಚಾರ್ಲಹಳ್ಳಿ ಠಾಣೆ ನೀಡಿರುವ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>