<p><strong>ಚಿಂತಾಮಣಿ</strong>: ಬಕ್ರೀದ್ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಹಬ್ಬ ಆಚರಣೆ ಅಂಗವಾಗಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಮಿತಿ ಸಭೆ ಕರೆಯಲಾಗಿತ್ತು.</p>.<p>ನಗರ ಠಾಣೆ ಇನ್ಸ್ಪೆಕ್ಟರ್ ವಿಜಿಕುಮಾರ್ ಮಾತನಾಡಿ, ‘ಇದೇ 28ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ಗೊಂದಲ, ಅಶಾಂತಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.</p>.<p>ಚಿಂತಾಮಣಿ ಜನರು ಶಾಂತಿ, ಸೌಹಾರ್ದತೆಗೆ ಹೆಸರಾದವರು. ನಗರದಲ್ಲಿ ಈವರೆಗೆ ಯಾವುದೇ ಗಲಟೆ ನಡೆದಿಲ್ಲ. ಎಲ್ಲ ಹಬ್ಬಗಳಲ್ಲಿ ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದಾರೆ. ಇದೇ ಸಹಕಾರ ಮುಂದುವರೆಸಬೇಕು ಎಂದು ಮನವಿ ಮಾಡಿದರು.</p>.<p>ಯುವಕರು, ಹುಡುಗರಿಗೆ ಹಿರಿಯರು ಬುದ್ಧಿ ಹೇಳಬೇಕು. ಮೆರವಣಿಗೆ ದಿನ ಯಾವುದೇ ಗೊಂದಲ ಉಂಟಾಗಬಾರದು. ಎಲ್ಲ ಸಮುದಾಯದವರ ಸಹಕಾರದಿಂದ ಹಬ್ಬ ಆಚರಿಸಬೇಕು ಎಂದರು.</p>.<p>ಮೆರವಣಿಗೆ ಹೋಗುವವರ ಬ್ಯಾನರ್ ಕಟ್ಟುವಾಗ ಇತರರಿಗೆ ಮುಜುಗುರ, ತೊಂದರೆ ಆಗದಂತೆ ನಡೆದುಕೊಳ್ಳಬೇಕು. ಯಾವುದೇ ಅಹಿತಕರ ಘಟನೆ ಕಂಡುಬಂದರೆ ಕಾನೂನು ಕೈಗೆ ತೆಗೆದುಕೊಳ್ಳದೆ ಪೊಲೀಸರ ಗಮನಕ್ಕೆ ತರಬೇಕು ಎಂದರು.</p>.<p>ಶಾಂತಿ ಸುವ್ಯವಸ್ಥೆಯಿಂದ ಹಬ್ಬ ಆಚರಿಸಲು ಪೊಲೀಸ್ ಇಲಾಖೆಯು ಎಲ್ಲ ರೀತಿಯ ವ್ಯವಸ್ಥೆ ಮಾಡಲಿದೆ. ನಗರದ ವೃತ್ತಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಕಾವಲು ಇರಲಿದೆ. ಹಬ್ಬದ ಮೆರವಣಿಗೆಗೂ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪೊಲೀಸ್ ಅಧಿಕಾರಿಗಳು ಹಾಗೂ ನಗರದ ಮುಸ್ಲಿಮರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-16-2101523128</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಬಕ್ರೀದ್ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಹಬ್ಬ ಆಚರಣೆ ಅಂಗವಾಗಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಮಿತಿ ಸಭೆ ಕರೆಯಲಾಗಿತ್ತು.</p>.<p>ನಗರ ಠಾಣೆ ಇನ್ಸ್ಪೆಕ್ಟರ್ ವಿಜಿಕುಮಾರ್ ಮಾತನಾಡಿ, ‘ಇದೇ 28ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ಗೊಂದಲ, ಅಶಾಂತಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.</p>.<p>ಚಿಂತಾಮಣಿ ಜನರು ಶಾಂತಿ, ಸೌಹಾರ್ದತೆಗೆ ಹೆಸರಾದವರು. ನಗರದಲ್ಲಿ ಈವರೆಗೆ ಯಾವುದೇ ಗಲಟೆ ನಡೆದಿಲ್ಲ. ಎಲ್ಲ ಹಬ್ಬಗಳಲ್ಲಿ ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದಾರೆ. ಇದೇ ಸಹಕಾರ ಮುಂದುವರೆಸಬೇಕು ಎಂದು ಮನವಿ ಮಾಡಿದರು.</p>.<p>ಯುವಕರು, ಹುಡುಗರಿಗೆ ಹಿರಿಯರು ಬುದ್ಧಿ ಹೇಳಬೇಕು. ಮೆರವಣಿಗೆ ದಿನ ಯಾವುದೇ ಗೊಂದಲ ಉಂಟಾಗಬಾರದು. ಎಲ್ಲ ಸಮುದಾಯದವರ ಸಹಕಾರದಿಂದ ಹಬ್ಬ ಆಚರಿಸಬೇಕು ಎಂದರು.</p>.<p>ಮೆರವಣಿಗೆ ಹೋಗುವವರ ಬ್ಯಾನರ್ ಕಟ್ಟುವಾಗ ಇತರರಿಗೆ ಮುಜುಗುರ, ತೊಂದರೆ ಆಗದಂತೆ ನಡೆದುಕೊಳ್ಳಬೇಕು. ಯಾವುದೇ ಅಹಿತಕರ ಘಟನೆ ಕಂಡುಬಂದರೆ ಕಾನೂನು ಕೈಗೆ ತೆಗೆದುಕೊಳ್ಳದೆ ಪೊಲೀಸರ ಗಮನಕ್ಕೆ ತರಬೇಕು ಎಂದರು.</p>.<p>ಶಾಂತಿ ಸುವ್ಯವಸ್ಥೆಯಿಂದ ಹಬ್ಬ ಆಚರಿಸಲು ಪೊಲೀಸ್ ಇಲಾಖೆಯು ಎಲ್ಲ ರೀತಿಯ ವ್ಯವಸ್ಥೆ ಮಾಡಲಿದೆ. ನಗರದ ವೃತ್ತಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಕಾವಲು ಇರಲಿದೆ. ಹಬ್ಬದ ಮೆರವಣಿಗೆಗೂ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪೊಲೀಸ್ ಅಧಿಕಾರಿಗಳು ಹಾಗೂ ನಗರದ ಮುಸ್ಲಿಮರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-16-2101523128</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>