<p><strong>ಚಿಂತಾಮಣಿ</strong>: ಚಿಂತಾಮಣಿ–ಬೆಂಗಳೂರು ರಾಜ್ಯ ಹೆದ್ದಾರಿ ಹಾದು ಹೋಗುವ ತಾಲ್ಲೂಕಿನ ತಳಗವಾರ ಗ್ರಾಮದ ಬಳಿ ಭಾನುವಾರ ರಾತ್ರಿ ಟ್ರ್ಯಾಕ್ಟರ್ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕೋಲಾರ ತಾಲ್ಲೂಕಿನ ಕ್ಯಾಲನೂರು ಬಳಿಯ ಚನ್ನಸಂದ್ರ ಗ್ರಾಮದ ಸಂಚುಲಪ್ಪ (50) ಮೃತಪಟ್ಟ ವ್ಯಕ್ತಿ. ತಾಲ್ಲೂಕಿನ ಜೋಡಿಹೊಸಹಳ್ಳಿಯಿಂದ ಕೈವಾರಕ್ಕೆ ಹೊರಟ್ಟಿದ್ದ ಟ್ರ್ಯಾಕ್ಟರ್ ತಳಗವಾರದ ಬಳಿ ರಸ್ತೆ ಹಂಪ್ ಬಳಿ ನಿಧಾನವಾಗಿ ಚಲಿಸುತ್ತಿತ್ತು. ಈ ವೇಳೆ ಚನ್ನಸಂದ್ರ ಗ್ರಾಮದಿಂದ ಕೈವಾರದತ್ತ ವೇಗವಾಗಿ ತೆರಳುತ್ತಿದ್ದ ಬೈಕ್ ಸವಾರ ಹಿಂದಿನಿಂದ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬೈಕ್ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ಚಾಲಕ ಟ್ರ್ಯಾಕ್ಟರ್ ನಿಲ್ಲಿಸದೆ ಪರಾರಿಯಾಗಿದ್ದಾನೆ. </p>.<p>ಸ್ಥಳಕ್ಕೆ ಭೇಟಿ ನೀಡಿದ ಕೈವಾರ ಹೊರಠಾಣೆ ಸಹಾಯಕ ಸಬ್ಇನ್ಸ್ಪೆಕ್ಟರ್ ಪ್ರಕಾಶ್, ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತನ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಮತ್ತು ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಚಿಂತಾಮಣಿ–ಬೆಂಗಳೂರು ರಾಜ್ಯ ಹೆದ್ದಾರಿ ಹಾದು ಹೋಗುವ ತಾಲ್ಲೂಕಿನ ತಳಗವಾರ ಗ್ರಾಮದ ಬಳಿ ಭಾನುವಾರ ರಾತ್ರಿ ಟ್ರ್ಯಾಕ್ಟರ್ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕೋಲಾರ ತಾಲ್ಲೂಕಿನ ಕ್ಯಾಲನೂರು ಬಳಿಯ ಚನ್ನಸಂದ್ರ ಗ್ರಾಮದ ಸಂಚುಲಪ್ಪ (50) ಮೃತಪಟ್ಟ ವ್ಯಕ್ತಿ. ತಾಲ್ಲೂಕಿನ ಜೋಡಿಹೊಸಹಳ್ಳಿಯಿಂದ ಕೈವಾರಕ್ಕೆ ಹೊರಟ್ಟಿದ್ದ ಟ್ರ್ಯಾಕ್ಟರ್ ತಳಗವಾರದ ಬಳಿ ರಸ್ತೆ ಹಂಪ್ ಬಳಿ ನಿಧಾನವಾಗಿ ಚಲಿಸುತ್ತಿತ್ತು. ಈ ವೇಳೆ ಚನ್ನಸಂದ್ರ ಗ್ರಾಮದಿಂದ ಕೈವಾರದತ್ತ ವೇಗವಾಗಿ ತೆರಳುತ್ತಿದ್ದ ಬೈಕ್ ಸವಾರ ಹಿಂದಿನಿಂದ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬೈಕ್ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ಚಾಲಕ ಟ್ರ್ಯಾಕ್ಟರ್ ನಿಲ್ಲಿಸದೆ ಪರಾರಿಯಾಗಿದ್ದಾನೆ. </p>.<p>ಸ್ಥಳಕ್ಕೆ ಭೇಟಿ ನೀಡಿದ ಕೈವಾರ ಹೊರಠಾಣೆ ಸಹಾಯಕ ಸಬ್ಇನ್ಸ್ಪೆಕ್ಟರ್ ಪ್ರಕಾಶ್, ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತನ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಮತ್ತು ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>