<p><strong>ಚಿಂತಾಮಣಿ</strong>: ತಾಲ್ಲೂಕಿನ ಮೈಲಾಪುರದಲ್ಲಿ ಸೋಮವಾರ ಹಾಡು ಹಗಲಲ್ಲೇ ಕೇಬಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಸಾರ್ವಜನಿಕರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ನಗರದ ನರಸಿಂಹ ಮತ್ತು ಸೈಫುಲ್ಲಾ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿ ಆರೋಪಿಗಳು.</p>.<p>ಗ್ರಾಮಸ್ಥರು ಸಹ ಕೇಬಲ್ ಕಳ್ಳರನ್ನು ಹಿಡಿಯಲು ಹೊಂಚು ಹಾಕಿ ಕಾಯುತ್ತಿದ್ದರು. ಸೋಮವಾರ ಗ್ರಾಮದ ಮಂಜುನಾಥಗೌಡರ 2 ಕೊಳವೆ ಬಾವಿ, ಆನಂದ, ವೆಂಕಟೇಶಗೌಡ, ಹಾಗೂ ಗ್ರಾಮದ ಸಾರ್ವಜನಿಕ ಕೊಳವೆ ಬಾವಿ ಸೇರಿ ಒಟ್ಟು ಐದು ಕೊಳವೆ ಬಾವಿಗಳ ಕೇಬಲ್ ಕದ್ದಿರುವ ಕಳ್ಳರು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ.</p>.<p>ಗ್ರಾಮಸ್ಥರು 112 ಪೊಲೀಸರ ಮೂಲಕ ಆರೋಪಿಗಳನ್ನು ಗ್ರಾಮಾಂತರ ಠಾಣೆ ಗೆ ಒಪ್ಪಿಸಿ ದೂರು ನೀಡಿದ್ದಾರೆ. ಪೊಲೀಸರು ದೂರನ್ನು ದಾಖಲಿಸಿಕೊಂಡು ಮುಂದಿಒನ ಕ್ರಮಕೈಗೊಂಡಿದ್ದಾರೆ.</p>.<p>ಮೈಲಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ಕೊಳವೆ ಬಾವಿಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳು ಸುಮಾರು ಒಂದು ವರ್ಷದಿಂದ ನಡೆಯುತ್ತಿದ್ದವು. ಅನೇಕ ಬಾರಿ ಪೊಲೀಸರಿಗೆ ದೂರು ನೀಡಲಾಗಿತ್ತು ಎಂದು ಸ್ಥಳೀಯ ಮಂಜುನಾಥಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಮೈಲಾಪುರದಲ್ಲಿ ಸೋಮವಾರ ಹಾಡು ಹಗಲಲ್ಲೇ ಕೇಬಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಸಾರ್ವಜನಿಕರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ನಗರದ ನರಸಿಂಹ ಮತ್ತು ಸೈಫುಲ್ಲಾ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿ ಆರೋಪಿಗಳು.</p>.<p>ಗ್ರಾಮಸ್ಥರು ಸಹ ಕೇಬಲ್ ಕಳ್ಳರನ್ನು ಹಿಡಿಯಲು ಹೊಂಚು ಹಾಕಿ ಕಾಯುತ್ತಿದ್ದರು. ಸೋಮವಾರ ಗ್ರಾಮದ ಮಂಜುನಾಥಗೌಡರ 2 ಕೊಳವೆ ಬಾವಿ, ಆನಂದ, ವೆಂಕಟೇಶಗೌಡ, ಹಾಗೂ ಗ್ರಾಮದ ಸಾರ್ವಜನಿಕ ಕೊಳವೆ ಬಾವಿ ಸೇರಿ ಒಟ್ಟು ಐದು ಕೊಳವೆ ಬಾವಿಗಳ ಕೇಬಲ್ ಕದ್ದಿರುವ ಕಳ್ಳರು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ.</p>.<p>ಗ್ರಾಮಸ್ಥರು 112 ಪೊಲೀಸರ ಮೂಲಕ ಆರೋಪಿಗಳನ್ನು ಗ್ರಾಮಾಂತರ ಠಾಣೆ ಗೆ ಒಪ್ಪಿಸಿ ದೂರು ನೀಡಿದ್ದಾರೆ. ಪೊಲೀಸರು ದೂರನ್ನು ದಾಖಲಿಸಿಕೊಂಡು ಮುಂದಿಒನ ಕ್ರಮಕೈಗೊಂಡಿದ್ದಾರೆ.</p>.<p>ಮೈಲಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ಕೊಳವೆ ಬಾವಿಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳು ಸುಮಾರು ಒಂದು ವರ್ಷದಿಂದ ನಡೆಯುತ್ತಿದ್ದವು. ಅನೇಕ ಬಾರಿ ಪೊಲೀಸರಿಗೆ ದೂರು ನೀಡಲಾಗಿತ್ತು ಎಂದು ಸ್ಥಳೀಯ ಮಂಜುನಾಥಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>