<p><strong>ಚಿಂತಾಮಣಿ</strong>: ನಗರದ ವಾರ್ಡ್ ನಂ 17 ರ ಚೌಡರೆಡ್ಡಿ ಪಾಳ್ಯದಲ್ಲಿ ಭಾನುವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ(ಎಸ್ಡಿಪಿಐ) ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ ನಡೆಯಿತು.</p>.<p>ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಶಿಬಿರ ನಡೆಯಿತು. ನಗರದ ವಿವಿಧ ಭಾಗಗಳಿಂದ ಸಾರ್ವಜನಿಕರು ನುರಿತ ತಜ್ಞರಿಂದ ಹೃದಯ ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲು ಮತ್ತಿತರ ಹಲವು ಕಾಯಿಲೆಗಳಿಗೆ ಸಂಬಂಧಿಸಿದ ತಪಾಸಣೆ ಮಾಡಿಸಿಕೊಂಡರು.</p>.<p>ಎಸ್ಡಿಪಿಐ ಅಧ್ಯಕ್ಷ ಅನ್ಸರ್ ಪಾಷಾ, ‘ನಾವು ಆರೋಗ್ಯ ಲೆಕ್ಕಿಸದೆ ದುಡಿಯುತ್ತೇವೆ. ಆರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಆಸ್ಪತ್ರೆಗೆ ಸುರಿಯುತ್ತೇವೆ. ಪ್ರತಿಯೊಬ್ಬರೂ ಆರೋಗ್ಯದ ಕಡೆ ಕಾಳಜಿ ವಹಿಸಬೇಕು. ನಿಯಮಿತವಾಗಿ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯದ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಇತ್ತೀಚೆಗೆ ಜನರ ಜೀವನಶೈಲಿಯಿಂದಲೇ ಹಲವಾರು ಕಾಯಿಲೆಗಳು ಬರುತ್ತಿವೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಜನರು ಹಿಂದಿನ ಜೀವನಶೈಲಿಗೆ ಮರುಳುವುದು ಉತ್ತಮ ಎಂದು ತಿಳಿಸಿದರು.</p>.<p>ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಮನ್ಸೂರ್ ಪಾಷಾ, ಅಬ್ದುಲ್ ರಬ್, ರಂಜಾನ್, ರಾಮಾಂಜಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ನಗರದ ವಾರ್ಡ್ ನಂ 17 ರ ಚೌಡರೆಡ್ಡಿ ಪಾಳ್ಯದಲ್ಲಿ ಭಾನುವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ(ಎಸ್ಡಿಪಿಐ) ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ ನಡೆಯಿತು.</p>.<p>ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಶಿಬಿರ ನಡೆಯಿತು. ನಗರದ ವಿವಿಧ ಭಾಗಗಳಿಂದ ಸಾರ್ವಜನಿಕರು ನುರಿತ ತಜ್ಞರಿಂದ ಹೃದಯ ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲು ಮತ್ತಿತರ ಹಲವು ಕಾಯಿಲೆಗಳಿಗೆ ಸಂಬಂಧಿಸಿದ ತಪಾಸಣೆ ಮಾಡಿಸಿಕೊಂಡರು.</p>.<p>ಎಸ್ಡಿಪಿಐ ಅಧ್ಯಕ್ಷ ಅನ್ಸರ್ ಪಾಷಾ, ‘ನಾವು ಆರೋಗ್ಯ ಲೆಕ್ಕಿಸದೆ ದುಡಿಯುತ್ತೇವೆ. ಆರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಆಸ್ಪತ್ರೆಗೆ ಸುರಿಯುತ್ತೇವೆ. ಪ್ರತಿಯೊಬ್ಬರೂ ಆರೋಗ್ಯದ ಕಡೆ ಕಾಳಜಿ ವಹಿಸಬೇಕು. ನಿಯಮಿತವಾಗಿ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯದ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಇತ್ತೀಚೆಗೆ ಜನರ ಜೀವನಶೈಲಿಯಿಂದಲೇ ಹಲವಾರು ಕಾಯಿಲೆಗಳು ಬರುತ್ತಿವೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಜನರು ಹಿಂದಿನ ಜೀವನಶೈಲಿಗೆ ಮರುಳುವುದು ಉತ್ತಮ ಎಂದು ತಿಳಿಸಿದರು.</p>.<p>ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಮನ್ಸೂರ್ ಪಾಷಾ, ಅಬ್ದುಲ್ ರಬ್, ರಂಜಾನ್, ರಾಮಾಂಜಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>