<p><strong>ಚಿಂತಾಮಣಿ</strong>: ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ಯುವಕನೊಬ್ಬ ಚಾಕು ಮತ್ತು ಕತ್ತರಿಯಿಂದ ಹೊಟ್ಟೆಗೆ ತಿವಿದುಕೊಂಡು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. </p>.<p>ಕತ್ತರಿಗುಪ್ಪೆ ಗ್ರಾಮದ ನವೀನ್ (27) ಆತ್ಮಹತ್ಯೆಗೆ ಶರಣಾದವರು. </p>.<p>ಅವರ ಪತ್ನಿ ತವರು ಮನೆಗೆ ಹೋಗಿದ್ದರು. ಮದ್ಯಸೇವನೆ ಮಾಡಿ ಮನೆಗೆ ಬಂದ ನವೀನ್ ಅವರು ಮನೆಯಲ್ಲಿದ್ದ ಚಾಕು ಮತ್ತು ಕತ್ತರಿಯಿಂದ ಹೊಟ್ಟೆಗೆ ಬಲವಾಗಿ ತಿವಿದುಕೊಂಡಿದ್ದಾರೆ. ತೀವ್ರವಾಗಿ ರಕ್ತಸ್ರಾವಗೊಂಡ ಅವರನ್ನು ಅಕ್ಕಪಕ್ಕದ ಮನೆಯವರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. </p>.<p>ವೈದ್ಯರು ಚಿಕಿತ್ಸೆ ನೀಡಿದರೂ ಹೆಚ್ಚಿನ ರಕ್ತಸ್ರಾವದಿಂದಾಗಿ ನವೀನ್ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.</p>.<p>ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. </p>
<p><strong>ಚಿಂತಾಮಣಿ</strong>: ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ಯುವಕನೊಬ್ಬ ಚಾಕು ಮತ್ತು ಕತ್ತರಿಯಿಂದ ಹೊಟ್ಟೆಗೆ ತಿವಿದುಕೊಂಡು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. </p>.<p>ಕತ್ತರಿಗುಪ್ಪೆ ಗ್ರಾಮದ ನವೀನ್ (27) ಆತ್ಮಹತ್ಯೆಗೆ ಶರಣಾದವರು. </p>.<p>ಅವರ ಪತ್ನಿ ತವರು ಮನೆಗೆ ಹೋಗಿದ್ದರು. ಮದ್ಯಸೇವನೆ ಮಾಡಿ ಮನೆಗೆ ಬಂದ ನವೀನ್ ಅವರು ಮನೆಯಲ್ಲಿದ್ದ ಚಾಕು ಮತ್ತು ಕತ್ತರಿಯಿಂದ ಹೊಟ್ಟೆಗೆ ಬಲವಾಗಿ ತಿವಿದುಕೊಂಡಿದ್ದಾರೆ. ತೀವ್ರವಾಗಿ ರಕ್ತಸ್ರಾವಗೊಂಡ ಅವರನ್ನು ಅಕ್ಕಪಕ್ಕದ ಮನೆಯವರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. </p>.<p>ವೈದ್ಯರು ಚಿಕಿತ್ಸೆ ನೀಡಿದರೂ ಹೆಚ್ಚಿನ ರಕ್ತಸ್ರಾವದಿಂದಾಗಿ ನವೀನ್ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.</p>.<p>ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. </p>