<p><strong>ಚಿಂತಾಮಣಿ</strong>: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್, ಐಕ್ಯುಎಸಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕಾಲೇಜಿನಲ್ಲಿ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಯಿತು.</p>.<p>ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಸಿಬ್ಬಂದಿ ರಕ್ತದಾನದಿಂದ 42 ಯುನಿಟ್ ರಕ್ತ ಸಂಗ್ರಹವಾಯಿತು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕದ ಕಾರ್ಯದರ್ಶಿ ನಾರಾಯಣರೆಡ್ಡಿ ಮಾತನಾಡಿ, ಎಲ್ಲ ದಾನಗಳಿಗಿಂತಲೂ ಮತ್ತೊಬ್ಬರ ಜೀವ ಉಳಿಸುವ ರಕ್ತದಾನವು ಶ್ರೇಷ್ಠವಾದುದು. ವಿದ್ಯಾರ್ಥಿಗಳು, ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.</p>.<p>ಆರೋಗ್ಯವೇ ಭಾಗ್ಯ, ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಮತ್ತು ಯುವಜನಾಂಗ ಆರೋಗ್ಯದ ಕಡೆ ಗಮನ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ರಕ್ತದಾನ ಮಾಡುವ ಮೂಲಕ ರೋಗಿಗಳಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.</p>.<p>ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಮತ್ತಿತರ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಜಿಲ್ಲೆಯಲ್ಲಿ ಬೇಡಿಕೆಯಷ್ಟು ರಕ್ತದ ಸಂಗ್ರಹಣೆ ಆಗುತ್ತಿಲ್ಲ. ರಕ್ತವನ್ನು ಕಾರ್ಖಾನೆಯಲ್ಲಿ ತಯಾರಿಸಲಾಗದು. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಬಹುದು ಎಂದು ಹೇಳಿದರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವರದರಾಜು ಮಾತನಾಡಿ, ಸಮಾಜದ ಆಧಾರಸ್ತಂಭಗಳಾದ ಮಹಿಳೆಯರು ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬೇಕು. ಪೌಷ್ಟಿಕಾಂಶವುಳ್ಳ ಆಹಾರ ಸೇವನೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.</p>.<p>ಕಾಲೇಜಿನ ವಿದ್ಯಾರ್ಥಿನಿಯರಿಗೆ ಆರೋಗ್ಯ ಹಾಗೂ ರಕ್ತದಾನದ ಮಹತ್ವದ ಅರಿವು ಮೂಡಿಸಲು ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪಿ.ರಮೇಶ್ ತಿಳಿಸಿದರು.</p>.<p>ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕಿ ಎಚ್.ಎಸ್.ಕವಿತ, ಸದಸ್ಯರಾದ ಕೆ.ವೈ. ಮಾಧವಿ, ಎಚ್.ಆರ್. ಶಿವಕುಮಾರ್, ಜಿ.ಸಂತೋಷ್, ಕೆ.ಸಿ. ಪೂರ್ಣಿಮ, ನಂಜುಂಡಮೂರ್ತಿ, ಪಿ.ಆರ್. ನರಸಪ್ಪ, ಐಕ್ಯೂಎಸಿ ಸಂಚಾಲಕ ಅರವಿಂದರೆಡ್ಡಿ, ಕಾಲೇಜಿನ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-16-2119929460</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್, ಐಕ್ಯುಎಸಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕಾಲೇಜಿನಲ್ಲಿ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಯಿತು.</p>.<p>ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಸಿಬ್ಬಂದಿ ರಕ್ತದಾನದಿಂದ 42 ಯುನಿಟ್ ರಕ್ತ ಸಂಗ್ರಹವಾಯಿತು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕದ ಕಾರ್ಯದರ್ಶಿ ನಾರಾಯಣರೆಡ್ಡಿ ಮಾತನಾಡಿ, ಎಲ್ಲ ದಾನಗಳಿಗಿಂತಲೂ ಮತ್ತೊಬ್ಬರ ಜೀವ ಉಳಿಸುವ ರಕ್ತದಾನವು ಶ್ರೇಷ್ಠವಾದುದು. ವಿದ್ಯಾರ್ಥಿಗಳು, ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.</p>.<p>ಆರೋಗ್ಯವೇ ಭಾಗ್ಯ, ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಮತ್ತು ಯುವಜನಾಂಗ ಆರೋಗ್ಯದ ಕಡೆ ಗಮನ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ರಕ್ತದಾನ ಮಾಡುವ ಮೂಲಕ ರೋಗಿಗಳಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.</p>.<p>ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಮತ್ತಿತರ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಜಿಲ್ಲೆಯಲ್ಲಿ ಬೇಡಿಕೆಯಷ್ಟು ರಕ್ತದ ಸಂಗ್ರಹಣೆ ಆಗುತ್ತಿಲ್ಲ. ರಕ್ತವನ್ನು ಕಾರ್ಖಾನೆಯಲ್ಲಿ ತಯಾರಿಸಲಾಗದು. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಬಹುದು ಎಂದು ಹೇಳಿದರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವರದರಾಜು ಮಾತನಾಡಿ, ಸಮಾಜದ ಆಧಾರಸ್ತಂಭಗಳಾದ ಮಹಿಳೆಯರು ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬೇಕು. ಪೌಷ್ಟಿಕಾಂಶವುಳ್ಳ ಆಹಾರ ಸೇವನೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.</p>.<p>ಕಾಲೇಜಿನ ವಿದ್ಯಾರ್ಥಿನಿಯರಿಗೆ ಆರೋಗ್ಯ ಹಾಗೂ ರಕ್ತದಾನದ ಮಹತ್ವದ ಅರಿವು ಮೂಡಿಸಲು ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪಿ.ರಮೇಶ್ ತಿಳಿಸಿದರು.</p>.<p>ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕಿ ಎಚ್.ಎಸ್.ಕವಿತ, ಸದಸ್ಯರಾದ ಕೆ.ವೈ. ಮಾಧವಿ, ಎಚ್.ಆರ್. ಶಿವಕುಮಾರ್, ಜಿ.ಸಂತೋಷ್, ಕೆ.ಸಿ. ಪೂರ್ಣಿಮ, ನಂಜುಂಡಮೂರ್ತಿ, ಪಿ.ಆರ್. ನರಸಪ್ಪ, ಐಕ್ಯೂಎಸಿ ಸಂಚಾಲಕ ಅರವಿಂದರೆಡ್ಡಿ, ಕಾಲೇಜಿನ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-16-2119929460</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>