<p><strong>ಚಿಂತಾಮಣಿ:</strong> ತಾಲ್ಲೂಕಿನ ಪೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗವಕೋಟೆ ಗ್ರಾಮದಲ್ಲಿ ವಿವಿಧ ಗ್ರಾಮಗಳ ಗ್ರಾಮಸ್ಥರ ಸಮ್ಮುಖದಲ್ಲಿ ಅಲಂಕೃತಗೊಂಡ ಲಕ್ಷ್ಮಿನರಸಿಂಹ ರಥೋತ್ಸವವು ಸೋಮವಾರ ಅದ್ದೂರಿಯಾಗಿ ಜರುಗಿತು. </p>.<p>ದಿಗವಕೋಟೆಯ ಲಕ್ಷ್ಮಿನರಸಿಂಹ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯವನ್ನು ವಿವಿಧ ಪುಷ್ಪ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ಯಾವುದೇ ರೀತಿಯ ದೋಷಗಳಿದ್ದರೂ ಅವುಗಳನ್ನು ನಿವಾರಣೆ ಮಾಡುವ ಶಕ್ತಿಯನ್ನು ಲಕ್ಷ್ಮಿನರಸಿಂಹ ದೇವರು ಹೊಂದಿದ್ದಾನೆ ಎಂಬುದು ಈ ಭಾಗದ ಜನರ ನಂಬಿಕೆ. ದಿಗವಕೋಟೆ ಸುತ್ತಮುತ್ತಲಿನ ಗ್ರಾಮಸ್ಥರು ರಥೋತ್ಸವದಲ್ಲಿ ಭಾಗವಹಿಸಿ ತೇರನ್ನು ಎಳೆದರು. </p>.<p>ವಿಜಯನಗರದ ಪಾಳೆಗಾರರಾದ ಪೋಲನಾಯಕ ಮತ್ತು ಕದಿರಿನಾಯಕ ಆಳ್ವಿಕೆ ವೇಳೆ ದೇವಾಲಯ ಪ್ರತಿಷ್ಠಾಪನೆಯಾಗಿದೆ. </p>.<p>ರಥೋತ್ಸವಕ್ಕೆ ಬಂದ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಗ್ರಾಮದವರು ಪಾನಕ, ಕೋಸಂಬರಿ ಇತ್ಯಾದಿಗಳನ್ನು ವಿತರಿಸಿದರು. ಬಟ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ್ ಮತ್ತು ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಮಾಡಿದ್ದರು. </p>.<p>ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ಮಲ್ಲಿಕಾರ್ಜುನಗೌಡ, ಖಜಾಂಚಿ ಗೋಪಾಲರೆಡ್ಡಿ, ಆಂತರಿಕ ಲೆಕ್ಕ ಪರಿಶೋಧಕ ರಾಜಣ್ಣ, ಮೇಲ್ವಿಚಾರಕ ನಾರಾಯಣಸ್ವಾಮಿ, ನಿರ್ದೇಶಕ ಎನ್.ರ್ರಪ್ಪರೆಡ್ಡಿ, ಎಸ್. ಮಹದೇವರೆಡ್ಡಿ, ನರಸಿಂಹಪ್ಪ ಬೇಲ್ದಾರ್, ನರಸಿಂಹಮೂರ್ತಿ, ನರೇಶ್, ಬೈಯಣ್ಣಗಾರಿ ನರಸಿಂಹಪ್ಪ, ನೆಲವಂಕಿ ರತ್ನಮ್ಮ, ಆರ್.ನರಸಿಂಹಮೂರ್ತಿ, ಶ್ರೀರಾಮಗೌಡ, ಕಣ್ಣಭಟ್ಟರ್, ಎಸ್. ಯಶ್ವಂತಾಚಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಪೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗವಕೋಟೆ ಗ್ರಾಮದಲ್ಲಿ ವಿವಿಧ ಗ್ರಾಮಗಳ ಗ್ರಾಮಸ್ಥರ ಸಮ್ಮುಖದಲ್ಲಿ ಅಲಂಕೃತಗೊಂಡ ಲಕ್ಷ್ಮಿನರಸಿಂಹ ರಥೋತ್ಸವವು ಸೋಮವಾರ ಅದ್ದೂರಿಯಾಗಿ ಜರುಗಿತು. </p>.<p>ದಿಗವಕೋಟೆಯ ಲಕ್ಷ್ಮಿನರಸಿಂಹ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯವನ್ನು ವಿವಿಧ ಪುಷ್ಪ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ಯಾವುದೇ ರೀತಿಯ ದೋಷಗಳಿದ್ದರೂ ಅವುಗಳನ್ನು ನಿವಾರಣೆ ಮಾಡುವ ಶಕ್ತಿಯನ್ನು ಲಕ್ಷ್ಮಿನರಸಿಂಹ ದೇವರು ಹೊಂದಿದ್ದಾನೆ ಎಂಬುದು ಈ ಭಾಗದ ಜನರ ನಂಬಿಕೆ. ದಿಗವಕೋಟೆ ಸುತ್ತಮುತ್ತಲಿನ ಗ್ರಾಮಸ್ಥರು ರಥೋತ್ಸವದಲ್ಲಿ ಭಾಗವಹಿಸಿ ತೇರನ್ನು ಎಳೆದರು. </p>.<p>ವಿಜಯನಗರದ ಪಾಳೆಗಾರರಾದ ಪೋಲನಾಯಕ ಮತ್ತು ಕದಿರಿನಾಯಕ ಆಳ್ವಿಕೆ ವೇಳೆ ದೇವಾಲಯ ಪ್ರತಿಷ್ಠಾಪನೆಯಾಗಿದೆ. </p>.<p>ರಥೋತ್ಸವಕ್ಕೆ ಬಂದ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಗ್ರಾಮದವರು ಪಾನಕ, ಕೋಸಂಬರಿ ಇತ್ಯಾದಿಗಳನ್ನು ವಿತರಿಸಿದರು. ಬಟ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ್ ಮತ್ತು ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಮಾಡಿದ್ದರು. </p>.<p>ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ಮಲ್ಲಿಕಾರ್ಜುನಗೌಡ, ಖಜಾಂಚಿ ಗೋಪಾಲರೆಡ್ಡಿ, ಆಂತರಿಕ ಲೆಕ್ಕ ಪರಿಶೋಧಕ ರಾಜಣ್ಣ, ಮೇಲ್ವಿಚಾರಕ ನಾರಾಯಣಸ್ವಾಮಿ, ನಿರ್ದೇಶಕ ಎನ್.ರ್ರಪ್ಪರೆಡ್ಡಿ, ಎಸ್. ಮಹದೇವರೆಡ್ಡಿ, ನರಸಿಂಹಪ್ಪ ಬೇಲ್ದಾರ್, ನರಸಿಂಹಮೂರ್ತಿ, ನರೇಶ್, ಬೈಯಣ್ಣಗಾರಿ ನರಸಿಂಹಪ್ಪ, ನೆಲವಂಕಿ ರತ್ನಮ್ಮ, ಆರ್.ನರಸಿಂಹಮೂರ್ತಿ, ಶ್ರೀರಾಮಗೌಡ, ಕಣ್ಣಭಟ್ಟರ್, ಎಸ್. ಯಶ್ವಂತಾಚಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>