<p><strong>ಚಿಂತಾಮಣಿ:</strong> ತಾಲ್ಲೂಕಿನ ಸೀಕಲ್ಲು ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ್ದ ಶೌಲಯ ತೆರವುಗೊಳಿಸಿ ಜನರ ಸಂಚಾರಕ್ಕೆ ಸಹಕಾರ ನೀಡಿದ ಅಧಿಕಾರಿಗಳ ಪರ ಹಾಗೂ ವಿರುದ್ಧ ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.</p>.<p>‘ಅಧಿಕಾರಿಗಳು ನಾವು ಕಟ್ಟಿಕೊಂಡ ಮನೆ ಹಾಗೂ ಶೌಚಾಲಯವನ್ನು ಏಕಾಏಕಿ ತೆರವುಗೊಳಿಸಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗಿದೆ. ನ್ಯಾಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ’ ಸೀಕಲ್ಲು ಗ್ರಾಮದ ನರಸಿಂಹಪ್ಪ ತಿಳಿಸಿದರು. </p>.<p>ಸೀಕಲ್ಲು ಗ್ರಾಮದ ನರಸಿಂಹಪ್ಪ ಒತ್ತುವರಿ ಮಾಡಿಕೊಂಡ ರಸ್ತೆಗೆ ಅಡ್ಡಲಾಗಿ ಶೌಚಾಲಯ ನಿರ್ಮಿಸಿದ್ದು, ಜನರ ಸಂಚಾರಕ್ಕೆ ತೊಂದರೆಯಾಗಿದೆ. ಶೌಚಾಲಯ ತೆರವುಗೊಳಿಸುವಂತೆ ಗ್ರಾಮಸ್ಥರು ದೂರು ನೀಡಿದ್ದರು. ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳು ನರಸಿಂಹಪ್ಪಗೆ ನಾಲ್ಕು ನೋಟಿಸ್ ನೀಡಿದ್ದರು. </p>.<p>ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ ಶೌಚಾಲಯ ತೆರವಿಗೆ ಅಧಿಕಾರಿಗಳು ಮತ್ತು ಪೊಲೀಸರ ಬಳಿ ನರಸಿಂಹಪ್ಪ ಒಪ್ಪಿಕೊಂಡಿದ್ದರು. ಆದರೆ, ಶೌಚಾಲಯವನ್ನು ಮಾತ್ರ ತೆರವುಗೊಳಿಸಿರಲಿಲ್ಲ. ಹೀಗಾಗಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಖುದ್ದಾಗಿ ತೆರವು ಕಾರ್ಯಾಚರಣೆ ಮಾಡಿದರು. </p>.<p>ಇದನ್ನು ವಿರೋಧಿಸಿ ನರಸಿಂಹಪ್ಪ ತಾಲ್ಲೂಕು ಪಂಚಾಯಿತಿ ಆವರಣದ ಬಳಿ ಅಂಬೇಡ್ಕರ್ ಭಾವಚಿತ್ರ ಇಟ್ಟು ಪ್ರತಿಭಟನೆಗೆ ನಡೆಸಿದರು.</p>.<p>ಗ್ರಾಮದ ಶಿವಣ್ಣ ಎಂಬುವರ ನೇತೃತ್ವದಲ್ಲಿ ಮತ್ತೊಂದು ಗುಂಪು ಅಧಿಕಾರಿಗಳ ಪರ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳು ಕಾನೂನುಬದ್ಧವಾಗಿ ಕ್ರಮ ಕೈಗೊಂಡಿದ್ದಾರೆ. ನರಸಿಂಹಪ್ಪ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ವಿನಾಕಾರಣ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಶಿವಣ್ಣ ಹೇಳಿದ್ದಾರೆ. </p>.<p>ಅಧಿಕಾರಿಗಳ ವಿರುದ್ಧದ ಪ್ರತಿಭಟನೆಯಲ್ಲಿ ನರಸಿಂಹಪ್ಪ ಕುಟುಂಬದವರು, ಅಧಿಕಾರಿಗಳ ಪರ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಮುನಿಸ್ವಾಮಿ, ಮಂಜುನಾಥ್, ಗೋವಿಂದಪ್ಪ, ದೇವರಾಜ್, ಆನಂದಮ್ಮ, ನಂದಿನಿ, ಶಿಲ್ಪ, ಪ್ರಭ, ಸೀತಮ್ಮ, ಮಾಲತಿ, ಕವಿತಮ್ಮ ಭಾಗವಹಿಸಿದ್ದರು.</p>.<div><blockquote>ನರಸಿಂಹಪ್ಪ ಕುಟುಂಬಸ್ಥರು ರಸ್ತೆಗೆ ಅಡ್ಡಲಾಗಿ ಶೌಚಾಲಯ ನಿರ್ಮಿಸಿದ್ದರು. ಈ ಸಂಬಂಧ ಅವರಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ನೋಟಿಸ್ ನೀಡಿದ್ದರು. ಆದರೆ ಅವರು ತೆರವುಗೊಳಿಸಿರಲಿಲ್ಲ </blockquote><span class="attribution">–ಆನಂದ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಸೀಕಲ್ಲು ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ್ದ ಶೌಲಯ ತೆರವುಗೊಳಿಸಿ ಜನರ ಸಂಚಾರಕ್ಕೆ ಸಹಕಾರ ನೀಡಿದ ಅಧಿಕಾರಿಗಳ ಪರ ಹಾಗೂ ವಿರುದ್ಧ ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.</p>.<p>‘ಅಧಿಕಾರಿಗಳು ನಾವು ಕಟ್ಟಿಕೊಂಡ ಮನೆ ಹಾಗೂ ಶೌಚಾಲಯವನ್ನು ಏಕಾಏಕಿ ತೆರವುಗೊಳಿಸಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗಿದೆ. ನ್ಯಾಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ’ ಸೀಕಲ್ಲು ಗ್ರಾಮದ ನರಸಿಂಹಪ್ಪ ತಿಳಿಸಿದರು. </p>.<p>ಸೀಕಲ್ಲು ಗ್ರಾಮದ ನರಸಿಂಹಪ್ಪ ಒತ್ತುವರಿ ಮಾಡಿಕೊಂಡ ರಸ್ತೆಗೆ ಅಡ್ಡಲಾಗಿ ಶೌಚಾಲಯ ನಿರ್ಮಿಸಿದ್ದು, ಜನರ ಸಂಚಾರಕ್ಕೆ ತೊಂದರೆಯಾಗಿದೆ. ಶೌಚಾಲಯ ತೆರವುಗೊಳಿಸುವಂತೆ ಗ್ರಾಮಸ್ಥರು ದೂರು ನೀಡಿದ್ದರು. ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳು ನರಸಿಂಹಪ್ಪಗೆ ನಾಲ್ಕು ನೋಟಿಸ್ ನೀಡಿದ್ದರು. </p>.<p>ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ ಶೌಚಾಲಯ ತೆರವಿಗೆ ಅಧಿಕಾರಿಗಳು ಮತ್ತು ಪೊಲೀಸರ ಬಳಿ ನರಸಿಂಹಪ್ಪ ಒಪ್ಪಿಕೊಂಡಿದ್ದರು. ಆದರೆ, ಶೌಚಾಲಯವನ್ನು ಮಾತ್ರ ತೆರವುಗೊಳಿಸಿರಲಿಲ್ಲ. ಹೀಗಾಗಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಖುದ್ದಾಗಿ ತೆರವು ಕಾರ್ಯಾಚರಣೆ ಮಾಡಿದರು. </p>.<p>ಇದನ್ನು ವಿರೋಧಿಸಿ ನರಸಿಂಹಪ್ಪ ತಾಲ್ಲೂಕು ಪಂಚಾಯಿತಿ ಆವರಣದ ಬಳಿ ಅಂಬೇಡ್ಕರ್ ಭಾವಚಿತ್ರ ಇಟ್ಟು ಪ್ರತಿಭಟನೆಗೆ ನಡೆಸಿದರು.</p>.<p>ಗ್ರಾಮದ ಶಿವಣ್ಣ ಎಂಬುವರ ನೇತೃತ್ವದಲ್ಲಿ ಮತ್ತೊಂದು ಗುಂಪು ಅಧಿಕಾರಿಗಳ ಪರ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳು ಕಾನೂನುಬದ್ಧವಾಗಿ ಕ್ರಮ ಕೈಗೊಂಡಿದ್ದಾರೆ. ನರಸಿಂಹಪ್ಪ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ವಿನಾಕಾರಣ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಶಿವಣ್ಣ ಹೇಳಿದ್ದಾರೆ. </p>.<p>ಅಧಿಕಾರಿಗಳ ವಿರುದ್ಧದ ಪ್ರತಿಭಟನೆಯಲ್ಲಿ ನರಸಿಂಹಪ್ಪ ಕುಟುಂಬದವರು, ಅಧಿಕಾರಿಗಳ ಪರ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಮುನಿಸ್ವಾಮಿ, ಮಂಜುನಾಥ್, ಗೋವಿಂದಪ್ಪ, ದೇವರಾಜ್, ಆನಂದಮ್ಮ, ನಂದಿನಿ, ಶಿಲ್ಪ, ಪ್ರಭ, ಸೀತಮ್ಮ, ಮಾಲತಿ, ಕವಿತಮ್ಮ ಭಾಗವಹಿಸಿದ್ದರು.</p>.<div><blockquote>ನರಸಿಂಹಪ್ಪ ಕುಟುಂಬಸ್ಥರು ರಸ್ತೆಗೆ ಅಡ್ಡಲಾಗಿ ಶೌಚಾಲಯ ನಿರ್ಮಿಸಿದ್ದರು. ಈ ಸಂಬಂಧ ಅವರಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ನೋಟಿಸ್ ನೀಡಿದ್ದರು. ಆದರೆ ಅವರು ತೆರವುಗೊಳಿಸಿರಲಿಲ್ಲ </blockquote><span class="attribution">–ಆನಂದ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>