<p>ಚಿಂತಾಮಣಿ: ಬೆಂಗಳೂರಿನ ರಾಷ್ಟ್ರೀಯ ಬೀಜ ನಿಗಮದ ವತಿಯಿಂದ 2025–26ನೇ ಸಾಲಿನ ಸಿ.ಎಸ್.ಆರ್ ಕಾರ್ಯಕ್ರಮದ ಅಂಗವಾಗಿ ರೈತರಿಗೆ ಜೇನು ಸಾಕಾಣಿಕೆ ತರಬೇತಿ ಹಾಗೂ ಜೇನುಗೂಡು ವಿತರಣೆ ಕಾರ್ಯಕ್ರಮವನ್ನು ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಯಿತು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಪಾಪಿರೆಡ್ಡಿ ಮಾತನಾಡಿ, ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕೃಷಿಯ ಜೊತೆಗೆ ಜೇನುಸಾಕಾಣಿಕೆ, ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆ ಮತ್ತಿತರ ಉಪ ಕಸುಬುಗಳಲ್ಲಿ ತೊಡಗಿಸಿಕೊಳ್ಳಬೇಕು. ಕೃಷಿಯಲ್ಲಿ ಮಳೆ ಕೊರತೆ, ರೋಗರುಜಿನುಗಳು, ಬೆಲೆ ಕುಸಿತ ಮುಂತಾದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಸಮಗ್ರ ಕೃಷಿಗೆ ಪೂರಕವಾಗಿ ಉಪಕಸುಬುಗಳನ್ನು ಅಳವಡಿಸಿಕೊಂಡರೆ ಕೃಷಿಯು ಲಾಭದಾಯಕವಾಗುತ್ತದೆ ಎಂದು ಸಲಹೆ ನೀಡಿದರು.</p>.<p>ತರಬೇತಿಯಲ್ಲಿ ವೈಜ್ಞಾನಿಕ ಜೇನು ಸಾಕಾಣಿಕೆ ವಿಧಾನಗಳು, ಗೂಡು ನಿರ್ವಹಣೆ ಹಾಗೂ ಪರಾಗ ಸ್ಪರ್ಶದ ಮಹತ್ವವನ್ನು ವಿವರಿಸಲಾಯಿತು. ರೈತರ ಆದಾಯ ಹೆಚ್ಚಿಸಲು ಜೇನುಪೆಟ್ಟಿಗೆ ಹಾಗೂ ಜೇನು ಗೂಡುಗಳನ್ನು ವಿತರಿಸಲಾಯಿತು.</p>.<p>ಬೆಂಗಳೂರಿನ ರಾಷ್ಟ್ರೀಯ ಬೀಜ ನಿಗಮದ ಪ್ರಾದೇಶಿಕ ವ್ಯವಸ್ಥಾಪಕ ಅಹಮದ್ ರೆಜಾ ನೇತೃತ್ವ ಮತ್ತು ಚಿಕ್ಕಬಳ್ಳಾಪುರ ಎನ್.ಎಸ್.ಸಿ ತಂಡದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.</p>.<p>ತುಮಕೂರಿನ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಲೋಗನಂದನ್, ಸಿ.ಇ.ಒ ನರಸಿಂಹರೆಡ್ಡಿ, ಶಿವರಾಮರೆಡ್ಡಿ, ತಜ್ಞರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-16-2066652788</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಬೆಂಗಳೂರಿನ ರಾಷ್ಟ್ರೀಯ ಬೀಜ ನಿಗಮದ ವತಿಯಿಂದ 2025–26ನೇ ಸಾಲಿನ ಸಿ.ಎಸ್.ಆರ್ ಕಾರ್ಯಕ್ರಮದ ಅಂಗವಾಗಿ ರೈತರಿಗೆ ಜೇನು ಸಾಕಾಣಿಕೆ ತರಬೇತಿ ಹಾಗೂ ಜೇನುಗೂಡು ವಿತರಣೆ ಕಾರ್ಯಕ್ರಮವನ್ನು ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಯಿತು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಪಾಪಿರೆಡ್ಡಿ ಮಾತನಾಡಿ, ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕೃಷಿಯ ಜೊತೆಗೆ ಜೇನುಸಾಕಾಣಿಕೆ, ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆ ಮತ್ತಿತರ ಉಪ ಕಸುಬುಗಳಲ್ಲಿ ತೊಡಗಿಸಿಕೊಳ್ಳಬೇಕು. ಕೃಷಿಯಲ್ಲಿ ಮಳೆ ಕೊರತೆ, ರೋಗರುಜಿನುಗಳು, ಬೆಲೆ ಕುಸಿತ ಮುಂತಾದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಸಮಗ್ರ ಕೃಷಿಗೆ ಪೂರಕವಾಗಿ ಉಪಕಸುಬುಗಳನ್ನು ಅಳವಡಿಸಿಕೊಂಡರೆ ಕೃಷಿಯು ಲಾಭದಾಯಕವಾಗುತ್ತದೆ ಎಂದು ಸಲಹೆ ನೀಡಿದರು.</p>.<p>ತರಬೇತಿಯಲ್ಲಿ ವೈಜ್ಞಾನಿಕ ಜೇನು ಸಾಕಾಣಿಕೆ ವಿಧಾನಗಳು, ಗೂಡು ನಿರ್ವಹಣೆ ಹಾಗೂ ಪರಾಗ ಸ್ಪರ್ಶದ ಮಹತ್ವವನ್ನು ವಿವರಿಸಲಾಯಿತು. ರೈತರ ಆದಾಯ ಹೆಚ್ಚಿಸಲು ಜೇನುಪೆಟ್ಟಿಗೆ ಹಾಗೂ ಜೇನು ಗೂಡುಗಳನ್ನು ವಿತರಿಸಲಾಯಿತು.</p>.<p>ಬೆಂಗಳೂರಿನ ರಾಷ್ಟ್ರೀಯ ಬೀಜ ನಿಗಮದ ಪ್ರಾದೇಶಿಕ ವ್ಯವಸ್ಥಾಪಕ ಅಹಮದ್ ರೆಜಾ ನೇತೃತ್ವ ಮತ್ತು ಚಿಕ್ಕಬಳ್ಳಾಪುರ ಎನ್.ಎಸ್.ಸಿ ತಂಡದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.</p>.<p>ತುಮಕೂರಿನ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಲೋಗನಂದನ್, ಸಿ.ಇ.ಒ ನರಸಿಂಹರೆಡ್ಡಿ, ಶಿವರಾಮರೆಡ್ಡಿ, ತಜ್ಞರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-16-2066652788</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>