<p><strong>ಚಿಂತಾಮಣಿ:</strong> ಮಾನವ ಹಕ್ಕುಗಳ ಸಮಿತಿ, ಸ್ವಾಭಿಮಾನಿ ಕಟ್ಟಡ ಕಾರ್ಮಿಕರ ಸಂಘ ಮತ್ತು ಇತರೆ ಕಾರ್ಮಿಕ ಸಂಘಗಳ ಟ್ರೇಡ್ ಯೂನಿಯನ್ ವತಿಯಿಂದ ತಾಲ್ಲೂಕಿನ ಫಲಾನುಭವಿಗಳಿಗೆ ಮನೆ ನಿರ್ಮಾಣದ ಸಾಮಗ್ರಿಗಳನ್ನು ಶನಿವಾರ ಉಚಿತವಾಗಿ ವಿತರಿಸಲಾಯಿತು.</p>.<p>ಸಂಘಟನೆಗಳ ರಾಜ್ಯಾಧ್ಯಕ್ಷ ಸಿಎಂ. ಬೈರೇಗೌಡ ಮಾತನಾಡಿ, ‘ಕಾರ್ಮಿಕರ ಕಲ್ಯಾಣ ಮತ್ತು ಅವರ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಗಳು ಶ್ರಮಿಸುತ್ತಿವೆ. ದಿನನಿತ್ಯದ ಬದುಕಿನಲ್ಲಿ ಕಷ್ಟಪಡುವ ಕಟ್ಟಡ ಕಾರ್ಮಿಕರು ಹಾಗೂ ಶ್ರಮಿಕ ವರ್ಗದವರಿಗೆ ನೆರವಾಗಲು ಉಚಿತವಾಗಿ ಗೃಹ ನಿರ್ಮಾಣ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಬಡವರಿಗೆ ಸೂರಿನ ಸೌಲಭ್ಯ ಕಲ್ಪಿಸುವುದು ನಮ್ಮ ಸಂಘಟನೆ ಧ್ಯೇಯ. ಚಿಕ್ಕಬಳ್ಳಾಪುರವನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸುಮಾರು 600 ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎಂದರು.</p>.<p>ಕಾರ್ಮಿಕ ಸಂಘಟನೆಗಳ ಮುಖಂಡ ದೇವರಾಜ್, ಶಿವರೆಡ್ಡಿ, ವೆಂಕಟೇಶ, ರಾಮಕೃಷ್ಣಪ್ಪ, ಈಶ್ವರ ರೆಡ್ಡಿ, ಶ್ರೀನಾಥ್, ನಾರಾಯಣಸ್ವಾಮಿ, ಮುನೆಂದ್ರ ಬಾಬು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-16-1468646270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಮಾನವ ಹಕ್ಕುಗಳ ಸಮಿತಿ, ಸ್ವಾಭಿಮಾನಿ ಕಟ್ಟಡ ಕಾರ್ಮಿಕರ ಸಂಘ ಮತ್ತು ಇತರೆ ಕಾರ್ಮಿಕ ಸಂಘಗಳ ಟ್ರೇಡ್ ಯೂನಿಯನ್ ವತಿಯಿಂದ ತಾಲ್ಲೂಕಿನ ಫಲಾನುಭವಿಗಳಿಗೆ ಮನೆ ನಿರ್ಮಾಣದ ಸಾಮಗ್ರಿಗಳನ್ನು ಶನಿವಾರ ಉಚಿತವಾಗಿ ವಿತರಿಸಲಾಯಿತು.</p>.<p>ಸಂಘಟನೆಗಳ ರಾಜ್ಯಾಧ್ಯಕ್ಷ ಸಿಎಂ. ಬೈರೇಗೌಡ ಮಾತನಾಡಿ, ‘ಕಾರ್ಮಿಕರ ಕಲ್ಯಾಣ ಮತ್ತು ಅವರ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಗಳು ಶ್ರಮಿಸುತ್ತಿವೆ. ದಿನನಿತ್ಯದ ಬದುಕಿನಲ್ಲಿ ಕಷ್ಟಪಡುವ ಕಟ್ಟಡ ಕಾರ್ಮಿಕರು ಹಾಗೂ ಶ್ರಮಿಕ ವರ್ಗದವರಿಗೆ ನೆರವಾಗಲು ಉಚಿತವಾಗಿ ಗೃಹ ನಿರ್ಮಾಣ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಬಡವರಿಗೆ ಸೂರಿನ ಸೌಲಭ್ಯ ಕಲ್ಪಿಸುವುದು ನಮ್ಮ ಸಂಘಟನೆ ಧ್ಯೇಯ. ಚಿಕ್ಕಬಳ್ಳಾಪುರವನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸುಮಾರು 600 ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎಂದರು.</p>.<p>ಕಾರ್ಮಿಕ ಸಂಘಟನೆಗಳ ಮುಖಂಡ ದೇವರಾಜ್, ಶಿವರೆಡ್ಡಿ, ವೆಂಕಟೇಶ, ರಾಮಕೃಷ್ಣಪ್ಪ, ಈಶ್ವರ ರೆಡ್ಡಿ, ಶ್ರೀನಾಥ್, ನಾರಾಯಣಸ್ವಾಮಿ, ಮುನೆಂದ್ರ ಬಾಬು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-16-1468646270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>