<p><strong>ಚಿಂತಾಮಣಿ</strong>: ನಗರದ ಕೀರ್ತಿ ನಗರ ಬಡಾವಣೆ ಮನೆಯೊಂದರಲ್ಲಿ ಸಕ್ರಿಯವಾಗಿದ್ದ ಅಕ್ರಮ ಗಾಂಜಾ ಮಾರಾಟ ಜಾಲವನ್ನು ಪೊಲೀಸರು ಶುಕ್ರವಾರ ರಾತ್ರಿ ಭೇದಿಸಿದ್ದಾರೆ. </p>.<p>ಗಾಂಜಾ ಮಾರಾಟ ಮಾಡಿದ ಆರೋಪದ ಮೇರೆಗೆ ಶಬಾನ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಅವರ ಬಳಿ ಇದ್ದ 2 ಕೆ.ಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಪ್ಲಾಸ್ಟಿಕ್ನಲ್ಲಿ ಪ್ಯಾಕ್ ಮಾಡಿದ್ದ ಗಾಂಜಾ ಪಾಕೆಟ್ಗಳನ್ನು ಚೀಲಗಳಲ್ಲಿ ಬಚ್ಚಿಡಲಾಗಿತ್ತು. ಒಟ್ಟಾರೆ 2.4 ಕೆ.ಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಅಕ್ರಮವಾಗಿ ಶ್ರೀಂಗಧ ಮತ್ತು ಗಾಂಜಾ ಮಾರಾಟ ಪ್ರಕರಣದಲ್ಲಿ ಶಬಾನ ಕುಟುಂಬಸ್ಥರು ಹಲವು ಬಾರಿ ಬಂಧಿತರಾಗಿದ್ದರು. ಜೊತೆಗೆ ಜಿಲ್ಲೆಯಿಂದಲೂ ಗಡೀಪಾರಾಗಿದ್ದರು. ಜೈಲಿನಿಂದ ವಾಪಸ್ ಬರುತ್ತಲೇ ಮತ್ತೆ ತಮ್ಮ ಚಾಳಿ ಮುಂದುವರೆಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. </p>.<p>ಈ ಕಾರ್ಯಾಚರಣೆಯಲ್ಲಿ ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಮುರುಳೀಧರ್, ನಗರ ಠಾಣೆ ಇನ್ಸ್ಪೆಕ್ಟರ್ ವಿಜಿಕುಮಾರ್, ಪಿಎಸ್ಐಗಳಾದ ರಮೇಶ್, ಪದ್ಮ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ನಗರದ ಕೀರ್ತಿ ನಗರ ಬಡಾವಣೆ ಮನೆಯೊಂದರಲ್ಲಿ ಸಕ್ರಿಯವಾಗಿದ್ದ ಅಕ್ರಮ ಗಾಂಜಾ ಮಾರಾಟ ಜಾಲವನ್ನು ಪೊಲೀಸರು ಶುಕ್ರವಾರ ರಾತ್ರಿ ಭೇದಿಸಿದ್ದಾರೆ. </p>.<p>ಗಾಂಜಾ ಮಾರಾಟ ಮಾಡಿದ ಆರೋಪದ ಮೇರೆಗೆ ಶಬಾನ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಅವರ ಬಳಿ ಇದ್ದ 2 ಕೆ.ಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಪ್ಲಾಸ್ಟಿಕ್ನಲ್ಲಿ ಪ್ಯಾಕ್ ಮಾಡಿದ್ದ ಗಾಂಜಾ ಪಾಕೆಟ್ಗಳನ್ನು ಚೀಲಗಳಲ್ಲಿ ಬಚ್ಚಿಡಲಾಗಿತ್ತು. ಒಟ್ಟಾರೆ 2.4 ಕೆ.ಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಅಕ್ರಮವಾಗಿ ಶ್ರೀಂಗಧ ಮತ್ತು ಗಾಂಜಾ ಮಾರಾಟ ಪ್ರಕರಣದಲ್ಲಿ ಶಬಾನ ಕುಟುಂಬಸ್ಥರು ಹಲವು ಬಾರಿ ಬಂಧಿತರಾಗಿದ್ದರು. ಜೊತೆಗೆ ಜಿಲ್ಲೆಯಿಂದಲೂ ಗಡೀಪಾರಾಗಿದ್ದರು. ಜೈಲಿನಿಂದ ವಾಪಸ್ ಬರುತ್ತಲೇ ಮತ್ತೆ ತಮ್ಮ ಚಾಳಿ ಮುಂದುವರೆಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. </p>.<p>ಈ ಕಾರ್ಯಾಚರಣೆಯಲ್ಲಿ ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಮುರುಳೀಧರ್, ನಗರ ಠಾಣೆ ಇನ್ಸ್ಪೆಕ್ಟರ್ ವಿಜಿಕುಮಾರ್, ಪಿಎಸ್ಐಗಳಾದ ರಮೇಶ್, ಪದ್ಮ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>