<p>ಚಿಂತಾಮಣಿ: ವಿದ್ಯುತ್ ಪ್ರವಹಿಸುತ್ತಿದ್ದ ಮನೆಯ ಶೌಚಾಲಯದ ಕಬ್ಬಿಣದ ಬಾಗಿಲು ತೆರೆಯಲು ಹೋದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.</p>.<p>ಗುಂಡ್ಲಹಳ್ಳಿ ಗ್ರಾಮದ ರತ್ನಮ್ಮ (43) ಮೃತಪಟ್ಟಿವರು. ಮಧ್ಯಾಹ್ನ ಮಳೆ ಮುನ್ಸೂಚನೆ ಜೊತೆಗೆ ಜೋರಾದ ಗಾಳಿ ಬೀಸಿದಾಗ ಶೌಚಾಲಯದ ಮೇಲಿಂದ ಮನೆಗೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಶೌಚಾಲಯದ ಮೇಲೆ ಅಳವಡಿಸಿದ ತಗಡಿನ ಶೀಟ್ಗಳ ಮೇಲೆ ಬಿದ್ದಿದೆ. ಈ ಮೂಲಕ ಕಬ್ಬಿಣದ ಬಾಗಿಲಿಗೂ ವಿದ್ಯುತ್ ಪ್ರವಹಿಸಿದ್ದರಿಂದಾಗಿ ಈ ಘಟನೆ ಸಂಭವಿಸಿದೆ.</p>.<p>ವಿದ್ಯುತ್ ತಗುಲಿ ಅಸ್ವಸ್ಥರಾಗಿ ಬಿದ್ದ ರತ್ನಮ್ಮ ಅವರನ್ನು ಅವರ ಗಂಡ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.</p>.<p>ಈ ಸಂಬಂಧ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-15-451746994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ವಿದ್ಯುತ್ ಪ್ರವಹಿಸುತ್ತಿದ್ದ ಮನೆಯ ಶೌಚಾಲಯದ ಕಬ್ಬಿಣದ ಬಾಗಿಲು ತೆರೆಯಲು ಹೋದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.</p>.<p>ಗುಂಡ್ಲಹಳ್ಳಿ ಗ್ರಾಮದ ರತ್ನಮ್ಮ (43) ಮೃತಪಟ್ಟಿವರು. ಮಧ್ಯಾಹ್ನ ಮಳೆ ಮುನ್ಸೂಚನೆ ಜೊತೆಗೆ ಜೋರಾದ ಗಾಳಿ ಬೀಸಿದಾಗ ಶೌಚಾಲಯದ ಮೇಲಿಂದ ಮನೆಗೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಶೌಚಾಲಯದ ಮೇಲೆ ಅಳವಡಿಸಿದ ತಗಡಿನ ಶೀಟ್ಗಳ ಮೇಲೆ ಬಿದ್ದಿದೆ. ಈ ಮೂಲಕ ಕಬ್ಬಿಣದ ಬಾಗಿಲಿಗೂ ವಿದ್ಯುತ್ ಪ್ರವಹಿಸಿದ್ದರಿಂದಾಗಿ ಈ ಘಟನೆ ಸಂಭವಿಸಿದೆ.</p>.<p>ವಿದ್ಯುತ್ ತಗುಲಿ ಅಸ್ವಸ್ಥರಾಗಿ ಬಿದ್ದ ರತ್ನಮ್ಮ ಅವರನ್ನು ಅವರ ಗಂಡ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.</p>.<p>ಈ ಸಂಬಂಧ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-15-451746994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>