<p><strong>ಚಿಂತಾಮಣಿ:</strong> ಅಂತರ್ಜಲ ವೃದ್ಧಿಗಾಗಿ ಮಾತ್ರವೇ ಎಚ್.ಎನ್. ವ್ಯಾಲಿ ಮತ್ತು ಕೆ.ಸಿ. ವ್ಯಾಲಿಯನ್ನು ಜಾರಿಗೊಳಿಸಲಾಗಿದೆ. ನೀರಾವರಿ ಅಥವಾ ಕೃಷಿ ಚಟುವಟಿಕೆಗಳಿಗಾಗಿ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. </p>.<p>ನಗರದ ಝಾನ್ಸಿರಾಣಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ, ಕ್ರಿಕೆಟ್ ಸ್ಟೇಡಿಯಂ ಕಾಮಗಾರಿ, ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದ ಕಾಮಗಾರಿಗಳನ್ನು ಶನಿವಾರ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>ಎಚ್.ಎನ್. ವ್ಯಾಲಿ ಹಾಗೂ ಕೆ.ಸಿ. ವ್ಯಾಲಿ ನೀರನ್ನು ದ್ವಿತೀಯ ಹಂತಕದಲ್ಲಿ ಶುದ್ಧೀಕರಣ ಮಾಡಲಾಗಿದೆ. ಈ ಯೋಜನೆಯ ಮೂಲ ಉದ್ದೇಶವೇ ಅಂತರ್ಜಲ ವೃದ್ಧಿಸುವುದು ಮತ್ತು ಕೆರೆಗಳನ್ನು ತುಂಬಿಸುವುದಾಗಿದೆ. ಅಂತರ್ಜಲ ವೃದ್ಧಿಯಾಗಲು ನೀರು ಶೇಖರಣೆ ಮಾಡುವುದು. ಆ ನೀರನ್ನು ನೇರವಾಗಿ ಕೃಷಿ ಚಟುವಟಿಕೆ ಮತ್ತು ಅನ್ಯ ಉದ್ದೇಶಗಳಿಗೆ ಉಪಯೋಗಿಸುವಂತಿಲ್ಲ ಎಂದರು. </p>.<p>ಅಂತರ್ಜಲ 1,800 ರಿಂದ 2,000 ಅಡಿವರೆಗೆ ಕುಸಿದಿದೆ. ನಮ್ಮ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಈ ನೀರು ಬಂದರೆ ಕೆರೆಗಳು ತುಂಬುತ್ತವೆ. ಭೂಮಿಯ ಪದರಗಳಲ್ಲಿ ಆ ನೀರು ಹಿಂಗಿ ಶುದ್ಧಗೊಂಡು, ಬೇರೆ ಕಡೆ ಹೋಗುತ್ತದೆ ಎಂದು ನುಡಿದರು.</p>.<p>ಯಾವ ಭಾಗಗಳಲ್ಲಿ ಎಚ್.ಎನ್ ಹಾಗೂ ಕೆ. ಸಿ ವ್ಯಾಲಿ ನೀರು ಬಂದಿದೆಯೊ ಅಂಥ ಕಡೆಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಈ ಕುರಿತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ವಿಜ್ಞಾನಿಗಳು ವರದಿಗಳನ್ನು ಕೊಡುತ್ತಿದ್ದಾರೆ ಎಂದರು. </p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂದವಾರ ಕೆರೆಗೆ ಎಚ್.ಎನ್ ವ್ಯಾಲಿ ನೀರು ಬರುತ್ತದೆ. ಅಲ್ಲಿ ಚಿಕ್ಕಬಳ್ಳಾಪುರ ನಗರದ ತ್ಯಾಜ್ಯ ನೀರು ಮಿಶ್ರಣವಾಗಿ ಗೋಪಾಲ ಕೃಷ್ಣ ಕೆರೆಗೆ ಬರುತ್ತಿದೆ. ಇದರ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಅಂತರ್ಜಲ ವೃದ್ಧಿಗಾಗಿ ಮಾತ್ರವೇ ಎಚ್.ಎನ್. ವ್ಯಾಲಿ ಮತ್ತು ಕೆ.ಸಿ. ವ್ಯಾಲಿಯನ್ನು ಜಾರಿಗೊಳಿಸಲಾಗಿದೆ. ನೀರಾವರಿ ಅಥವಾ ಕೃಷಿ ಚಟುವಟಿಕೆಗಳಿಗಾಗಿ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. </p>.<p>ನಗರದ ಝಾನ್ಸಿರಾಣಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ, ಕ್ರಿಕೆಟ್ ಸ್ಟೇಡಿಯಂ ಕಾಮಗಾರಿ, ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದ ಕಾಮಗಾರಿಗಳನ್ನು ಶನಿವಾರ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>ಎಚ್.ಎನ್. ವ್ಯಾಲಿ ಹಾಗೂ ಕೆ.ಸಿ. ವ್ಯಾಲಿ ನೀರನ್ನು ದ್ವಿತೀಯ ಹಂತಕದಲ್ಲಿ ಶುದ್ಧೀಕರಣ ಮಾಡಲಾಗಿದೆ. ಈ ಯೋಜನೆಯ ಮೂಲ ಉದ್ದೇಶವೇ ಅಂತರ್ಜಲ ವೃದ್ಧಿಸುವುದು ಮತ್ತು ಕೆರೆಗಳನ್ನು ತುಂಬಿಸುವುದಾಗಿದೆ. ಅಂತರ್ಜಲ ವೃದ್ಧಿಯಾಗಲು ನೀರು ಶೇಖರಣೆ ಮಾಡುವುದು. ಆ ನೀರನ್ನು ನೇರವಾಗಿ ಕೃಷಿ ಚಟುವಟಿಕೆ ಮತ್ತು ಅನ್ಯ ಉದ್ದೇಶಗಳಿಗೆ ಉಪಯೋಗಿಸುವಂತಿಲ್ಲ ಎಂದರು. </p>.<p>ಅಂತರ್ಜಲ 1,800 ರಿಂದ 2,000 ಅಡಿವರೆಗೆ ಕುಸಿದಿದೆ. ನಮ್ಮ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಈ ನೀರು ಬಂದರೆ ಕೆರೆಗಳು ತುಂಬುತ್ತವೆ. ಭೂಮಿಯ ಪದರಗಳಲ್ಲಿ ಆ ನೀರು ಹಿಂಗಿ ಶುದ್ಧಗೊಂಡು, ಬೇರೆ ಕಡೆ ಹೋಗುತ್ತದೆ ಎಂದು ನುಡಿದರು.</p>.<p>ಯಾವ ಭಾಗಗಳಲ್ಲಿ ಎಚ್.ಎನ್ ಹಾಗೂ ಕೆ. ಸಿ ವ್ಯಾಲಿ ನೀರು ಬಂದಿದೆಯೊ ಅಂಥ ಕಡೆಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಈ ಕುರಿತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ವಿಜ್ಞಾನಿಗಳು ವರದಿಗಳನ್ನು ಕೊಡುತ್ತಿದ್ದಾರೆ ಎಂದರು. </p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂದವಾರ ಕೆರೆಗೆ ಎಚ್.ಎನ್ ವ್ಯಾಲಿ ನೀರು ಬರುತ್ತದೆ. ಅಲ್ಲಿ ಚಿಕ್ಕಬಳ್ಳಾಪುರ ನಗರದ ತ್ಯಾಜ್ಯ ನೀರು ಮಿಶ್ರಣವಾಗಿ ಗೋಪಾಲ ಕೃಷ್ಣ ಕೆರೆಗೆ ಬರುತ್ತಿದೆ. ಇದರ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>