<p><strong>ಚಿಂತಾಮಣಿ</strong>: ಕಳೆದ ಭಾನುವಾರವಷ್ಟೇ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಬಾಣಂತಿ ನರ್ಮದಾ ಅವರ 2 ತಿಂಗಳ ಮಗು ಗುರುವಾರ ಮೃತಪಟ್ಟಿದೆ. ತಾಯಿ ಮತ್ತು ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ನರ್ಮದಾ ಅವರ ಸೋದರ ನರಸಿಂಹಮೂರ್ತಿ, ವೈದ್ಯರ ನಿರ್ಲಕ್ಷ್ಯದಿಂದ ಮೇ 10ರಂದು ನನ್ನ ಸಹೋದರಿ ಮೃತಪಟ್ಟಿದ್ದರು. ತಾಯಿಗೆ ಸರಿಯಾದ ಚಿಕಿತ್ಸೆ ಸಿಗದ ಕಾರಣ 2 ತಿಂಗಳ ಮಗುವಿಗೆ ಸರಿಯಾದ ಪೋಷಣೆ ಸಿಗದೆ, ಮಗು ಮೃತಪಟ್ಟಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕು. ಡಾ. ವಾಣಿರೆಡ್ಡಿ ಹಾಗೂ ಇತರ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ್, ಮೃತಳ ಸಂಬಂಧಿಕರೊಂದಿಗೆ ಮಾತುಕತೆ ನಡೆಸಿದರು. ಇದೊಂದು ದುರದೃಷ್ಟಕರ ಘಟನೆ. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಕರುಳಿಗೆ ಗಾಯವಾಗಿದ್ದು, ಹಿರಿಯ ಶಸ್ತ್ರಚಿಕಿತ್ಸಕರಿಂದ ಸರಿಪಡಿಸಲಾಗಿತ್ತು. ಈ ಕುರಿತು ಮೂರು ಹಂತದ ತನಿಖೆ ನಡೆಯುತ್ತಿದೆ ಎಂದರು.</p>.<p>ಮರಣೋತ್ತರ ವರದಿ, ಲೋಕಾಯುಕ್ತ ತನಿಖೆ, ಇಲಾಖಾ ಮಟ್ಟದ ತನಿಖೆ ಮತ್ತು ಪೊಲೀಸ್ ಇಲಾಖೆ ವರದಿಯ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ ಎಂದು ಡಾ.ಮಹೇಶ್ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-16-1060626520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಕಳೆದ ಭಾನುವಾರವಷ್ಟೇ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಬಾಣಂತಿ ನರ್ಮದಾ ಅವರ 2 ತಿಂಗಳ ಮಗು ಗುರುವಾರ ಮೃತಪಟ್ಟಿದೆ. ತಾಯಿ ಮತ್ತು ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ನರ್ಮದಾ ಅವರ ಸೋದರ ನರಸಿಂಹಮೂರ್ತಿ, ವೈದ್ಯರ ನಿರ್ಲಕ್ಷ್ಯದಿಂದ ಮೇ 10ರಂದು ನನ್ನ ಸಹೋದರಿ ಮೃತಪಟ್ಟಿದ್ದರು. ತಾಯಿಗೆ ಸರಿಯಾದ ಚಿಕಿತ್ಸೆ ಸಿಗದ ಕಾರಣ 2 ತಿಂಗಳ ಮಗುವಿಗೆ ಸರಿಯಾದ ಪೋಷಣೆ ಸಿಗದೆ, ಮಗು ಮೃತಪಟ್ಟಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕು. ಡಾ. ವಾಣಿರೆಡ್ಡಿ ಹಾಗೂ ಇತರ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ್, ಮೃತಳ ಸಂಬಂಧಿಕರೊಂದಿಗೆ ಮಾತುಕತೆ ನಡೆಸಿದರು. ಇದೊಂದು ದುರದೃಷ್ಟಕರ ಘಟನೆ. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಕರುಳಿಗೆ ಗಾಯವಾಗಿದ್ದು, ಹಿರಿಯ ಶಸ್ತ್ರಚಿಕಿತ್ಸಕರಿಂದ ಸರಿಪಡಿಸಲಾಗಿತ್ತು. ಈ ಕುರಿತು ಮೂರು ಹಂತದ ತನಿಖೆ ನಡೆಯುತ್ತಿದೆ ಎಂದರು.</p>.<p>ಮರಣೋತ್ತರ ವರದಿ, ಲೋಕಾಯುಕ್ತ ತನಿಖೆ, ಇಲಾಖಾ ಮಟ್ಟದ ತನಿಖೆ ಮತ್ತು ಪೊಲೀಸ್ ಇಲಾಖೆ ವರದಿಯ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ ಎಂದು ಡಾ.ಮಹೇಶ್ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-16-1060626520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>