<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ರಥೋತ್ಸವ ಕಾರ್ಯಕ್ರಮವು ಗುರುವಾರ ಬೆಳಗ್ಗೆ ತೆರೆಕಂಡಿತು.</p>.<p>ಸೋಮವಾರ ಯೋಗಿನಾರೇಯಣ ಜಯಂತಿ, ಮಂಗಳವಾರ ಅಮರನಾರೇಯಣ ರಥೋತ್ಸವ, ಬುಧವಾರ ಯೋಗಿನಾರೇಯಣ ತಾತಯ್ಯನವರ ರಥೋತ್ಸವಗಳು ವಿಜೃಂಭಣೆಯಿಂದ <br>ನಡೆದವು.</p>.<p>ಬುಧವಾರ ರಾತ್ರಿ ತಾತಯ್ಯನವರ ರಥೋತ್ಸವದ ಅಂಗವಾಗಿ ಸದ್ಗುರು ಯೋಗಿನಾರೇಯಣ ತಾತಯ್ಯನವರ ಉತ್ಸವ ಮೂರ್ತಿಯನ್ನು ಮುತ್ತಿನ ಪಲ್ಲಕ್ಕಿಯಲ್ಲಿ ಕೂರಿಸಿ ಶ್ರದ್ಧಾಭಕ್ತಿಯಿಂದ ಉತ್ಸವ ಆಚರಿಸಲಾಯಿತು. ಬುಧವಾರ ರಾತ್ರಿ ನಡೆದ ಉತ್ಸವಕ್ಕೆ ಭಕ್ತರ ಮಹಾಪೂರವೇ ಹರಿದುಬಂದಿತು.</p>.<p>ಚಂದ್ರನ ಬೆಳಕಿನಲ್ಲಿ ವರ್ಣರಂಜಿತ ಮುತ್ತಿನ ಪಲ್ಲಕ್ಕಿ ಕಂಗೊಳಿಸುತ್ತಿತ್ತು. ಮುತ್ತಿನ ಪಲ್ಲಕ್ಕಿಯಲ್ಲಿ ತಾತಯ್ಯನವರ ಉತ್ಸವ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು. ಕೈವಾರದ ನಾದಸ್ವರದ ತಂಡ ಅಮೋಘವಾದ ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿತು. </p>.<p>ಅಮರ ನಾರೇಯಣ ದೇವಾಲಯದಿಂದ ಹೊರಟ ಉತ್ಸವವು ಮುಖ್ಯ ಬೀದಿಗಳಲ್ಲಿ ಸಂಚರಿಸಿ ಯೋಗಿ ನಾರೇಯಣ ಮಠದ ಆವರಣದಲ್ಲಿ ಸಮಾಪ್ತಿಯಾಯಿತು.</p>.<p>ನಾದಸುಧಾರಸ ಸಂಕೀರ್ತನಾ ಯೋಜನೆಯಡಿ ರಾತ್ರಿಯಿಡೀ ನಡೆದ ನಾಟಕ, ಭರತನಾಟ್ಯ, ಜಾನಪದ ನೃತ್ಯ ಪ್ರದರ್ಶನವನ್ನು ಭಕ್ತರು ಕಣ್ತುಂಬಿಸಿಕೊಂಡರು. ಮೂರು ದಿನಗಳಿಂದ ಜನಜಂಗುಳಿಯಿಂದ ಕೂಡಿದ್ದ ಗ್ರಾಮ ಗುರುವಾರ ಬಿಕೊ ಎನ್ನುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ರಥೋತ್ಸವ ಕಾರ್ಯಕ್ರಮವು ಗುರುವಾರ ಬೆಳಗ್ಗೆ ತೆರೆಕಂಡಿತು.</p>.<p>ಸೋಮವಾರ ಯೋಗಿನಾರೇಯಣ ಜಯಂತಿ, ಮಂಗಳವಾರ ಅಮರನಾರೇಯಣ ರಥೋತ್ಸವ, ಬುಧವಾರ ಯೋಗಿನಾರೇಯಣ ತಾತಯ್ಯನವರ ರಥೋತ್ಸವಗಳು ವಿಜೃಂಭಣೆಯಿಂದ <br>ನಡೆದವು.</p>.<p>ಬುಧವಾರ ರಾತ್ರಿ ತಾತಯ್ಯನವರ ರಥೋತ್ಸವದ ಅಂಗವಾಗಿ ಸದ್ಗುರು ಯೋಗಿನಾರೇಯಣ ತಾತಯ್ಯನವರ ಉತ್ಸವ ಮೂರ್ತಿಯನ್ನು ಮುತ್ತಿನ ಪಲ್ಲಕ್ಕಿಯಲ್ಲಿ ಕೂರಿಸಿ ಶ್ರದ್ಧಾಭಕ್ತಿಯಿಂದ ಉತ್ಸವ ಆಚರಿಸಲಾಯಿತು. ಬುಧವಾರ ರಾತ್ರಿ ನಡೆದ ಉತ್ಸವಕ್ಕೆ ಭಕ್ತರ ಮಹಾಪೂರವೇ ಹರಿದುಬಂದಿತು.</p>.<p>ಚಂದ್ರನ ಬೆಳಕಿನಲ್ಲಿ ವರ್ಣರಂಜಿತ ಮುತ್ತಿನ ಪಲ್ಲಕ್ಕಿ ಕಂಗೊಳಿಸುತ್ತಿತ್ತು. ಮುತ್ತಿನ ಪಲ್ಲಕ್ಕಿಯಲ್ಲಿ ತಾತಯ್ಯನವರ ಉತ್ಸವ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು. ಕೈವಾರದ ನಾದಸ್ವರದ ತಂಡ ಅಮೋಘವಾದ ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿತು. </p>.<p>ಅಮರ ನಾರೇಯಣ ದೇವಾಲಯದಿಂದ ಹೊರಟ ಉತ್ಸವವು ಮುಖ್ಯ ಬೀದಿಗಳಲ್ಲಿ ಸಂಚರಿಸಿ ಯೋಗಿ ನಾರೇಯಣ ಮಠದ ಆವರಣದಲ್ಲಿ ಸಮಾಪ್ತಿಯಾಯಿತು.</p>.<p>ನಾದಸುಧಾರಸ ಸಂಕೀರ್ತನಾ ಯೋಜನೆಯಡಿ ರಾತ್ರಿಯಿಡೀ ನಡೆದ ನಾಟಕ, ಭರತನಾಟ್ಯ, ಜಾನಪದ ನೃತ್ಯ ಪ್ರದರ್ಶನವನ್ನು ಭಕ್ತರು ಕಣ್ತುಂಬಿಸಿಕೊಂಡರು. ಮೂರು ದಿನಗಳಿಂದ ಜನಜಂಗುಳಿಯಿಂದ ಕೂಡಿದ್ದ ಗ್ರಾಮ ಗುರುವಾರ ಬಿಕೊ ಎನ್ನುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>