<p><strong>ಚಿಂತಾಮಣಿ:</strong> ಹೊಸ ವರ್ಷದ ದಿನ ಗುರುವಾರ ದೇವಾಲಯಗಳ ನಗರಿ ಕೈವಾರದಲ್ಲಿ ಅಮರನಾರೇಯಣ ದೇವಾಲಯ, ಭೀಮಲಿಂಗೇಶ್ವರ ದೇವಾಲಯ, ಸದ್ಗುರು ಯೋಗಿನಾರೇಯಣ ಮಠದಲ್ಲಿ ವಿಶೇಷ ಅಲಂಕಾರ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ತಳಿರು ತೋರಣ ಹಾಗೂ ಹೂವುಗಳಿಂದ ದೇವಾಲಯಗಳನ್ನು ಶೃಂಗರಿಸಲಾಗಿತ್ತು.</p>.<p>ಸ್ಥಳೀಯ ಹಾಗೂ ರಾಜ್ಯದ ವಿವಿಧೆಡೆಗಳಿಂದ ಕೈವಾರಕ್ಕೆ ಜನಸಾಗರವೇ ಹರಿದು ಬಂದಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ಹೊಸವರ್ಷದ ಮೊದಲ ದಿನ ದೇವರ ದರ್ಶನ ಪಡೆದರು. </p>.<p>ಸದ್ಗುರು ಯೋಗಿನಾರೇಯಣ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಘಂಟನಾದ, ಸುಪ್ರಭಾತ, ಗೋಪೂಜೆ, ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ ಸಮರ್ಪಿಸಲಾಯಿತು. ತಾತಯ್ಯನವರ ಜೀವ ಸಮಾಧಿ ಮೂಲ ಬೃಂದಾವನವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.</p>.<p>ಯೋಗಿನಾರೇಯಣ ಉತ್ಸವ ಮೂರ್ತಿಯನ್ನು ನಗರದ ಮುಖ್ಯ ರಸ್ತೆಗಳಲ್ಲಿ ಭಜನೆ, ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮಠದ ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಜೆ ವಿಶೇಷ ಮಹಾಮಂಗಳಾರತಿ ನೆರವೇರಿಸಲಾಯಿತು. </p>.<p>ಕೈವಾರದ ಬೆಟ್ಟದ ಮೆಟ್ಟಲುಗಳಿಗೆ ಹೊಸ ವರ್ಷದ ಪ್ರಯುಕ್ತ ದೀಪಾರಾಧನೆ ಮಾಡಲಾಗಿತ್ತು. ಸಂಜೆ ವಿದ್ಯುತ್ ದೀಪಗಳಿಂದ ಬೆಟ್ಟವನ್ನು ಅಲಂಕರಿಸಲಾಗಿತ್ತು. ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಭಿಷೇಕ ಮತ್ತು ಪೂಜಾ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಹಾಕೈಲಾಸ ಗಿರಿಯಲ್ಲೂ ಹೊಸವರ್ಷದ ಅಂಗವಾಗಿ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.</p>.<p>ನಗರದ ಹೃದಯ ಭಾಗದಲ್ಲಿರುವ ವರದಾದ್ರಿ ಬೆಟ್ಟ, ನಾಗನಾಥೇಶ್ವರಸ್ವಾಮಿ ದೇವಾಲಯ, ಮುರುಗಮಲೆಯ ಮಕ್ತೀಶ್ವರಸ್ವಾಮಿ ದೇವಾಲಯ, ಬೂರಗಮಾಕಲಹಳ್ಳಿಯ ವೀರಾಂಜನೇಯಸ್ವಾಮಿ, ಕುರುಟಹಳ್ಳಿಯ ವೀರಾಂಜನೇಯಸ್ವಾಮಿ ದೇವಾಲಗಳಲ್ಲೂ ವಿಶೇಷ ಕಾರ್ಯಕ್ರಮಗಳು ನೆರವೇರಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಹೊಸ ವರ್ಷದ ದಿನ ಗುರುವಾರ ದೇವಾಲಯಗಳ ನಗರಿ ಕೈವಾರದಲ್ಲಿ ಅಮರನಾರೇಯಣ ದೇವಾಲಯ, ಭೀಮಲಿಂಗೇಶ್ವರ ದೇವಾಲಯ, ಸದ್ಗುರು ಯೋಗಿನಾರೇಯಣ ಮಠದಲ್ಲಿ ವಿಶೇಷ ಅಲಂಕಾರ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ತಳಿರು ತೋರಣ ಹಾಗೂ ಹೂವುಗಳಿಂದ ದೇವಾಲಯಗಳನ್ನು ಶೃಂಗರಿಸಲಾಗಿತ್ತು.</p>.<p>ಸ್ಥಳೀಯ ಹಾಗೂ ರಾಜ್ಯದ ವಿವಿಧೆಡೆಗಳಿಂದ ಕೈವಾರಕ್ಕೆ ಜನಸಾಗರವೇ ಹರಿದು ಬಂದಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ಹೊಸವರ್ಷದ ಮೊದಲ ದಿನ ದೇವರ ದರ್ಶನ ಪಡೆದರು. </p>.<p>ಸದ್ಗುರು ಯೋಗಿನಾರೇಯಣ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಘಂಟನಾದ, ಸುಪ್ರಭಾತ, ಗೋಪೂಜೆ, ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ ಸಮರ್ಪಿಸಲಾಯಿತು. ತಾತಯ್ಯನವರ ಜೀವ ಸಮಾಧಿ ಮೂಲ ಬೃಂದಾವನವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.</p>.<p>ಯೋಗಿನಾರೇಯಣ ಉತ್ಸವ ಮೂರ್ತಿಯನ್ನು ನಗರದ ಮುಖ್ಯ ರಸ್ತೆಗಳಲ್ಲಿ ಭಜನೆ, ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮಠದ ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಜೆ ವಿಶೇಷ ಮಹಾಮಂಗಳಾರತಿ ನೆರವೇರಿಸಲಾಯಿತು. </p>.<p>ಕೈವಾರದ ಬೆಟ್ಟದ ಮೆಟ್ಟಲುಗಳಿಗೆ ಹೊಸ ವರ್ಷದ ಪ್ರಯುಕ್ತ ದೀಪಾರಾಧನೆ ಮಾಡಲಾಗಿತ್ತು. ಸಂಜೆ ವಿದ್ಯುತ್ ದೀಪಗಳಿಂದ ಬೆಟ್ಟವನ್ನು ಅಲಂಕರಿಸಲಾಗಿತ್ತು. ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಭಿಷೇಕ ಮತ್ತು ಪೂಜಾ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಹಾಕೈಲಾಸ ಗಿರಿಯಲ್ಲೂ ಹೊಸವರ್ಷದ ಅಂಗವಾಗಿ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.</p>.<p>ನಗರದ ಹೃದಯ ಭಾಗದಲ್ಲಿರುವ ವರದಾದ್ರಿ ಬೆಟ್ಟ, ನಾಗನಾಥೇಶ್ವರಸ್ವಾಮಿ ದೇವಾಲಯ, ಮುರುಗಮಲೆಯ ಮಕ್ತೀಶ್ವರಸ್ವಾಮಿ ದೇವಾಲಯ, ಬೂರಗಮಾಕಲಹಳ್ಳಿಯ ವೀರಾಂಜನೇಯಸ್ವಾಮಿ, ಕುರುಟಹಳ್ಳಿಯ ವೀರಾಂಜನೇಯಸ್ವಾಮಿ ದೇವಾಲಗಳಲ್ಲೂ ವಿಶೇಷ ಕಾರ್ಯಕ್ರಮಗಳು ನೆರವೇರಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>