<p>ಚಿಂತಾಮಣಿ: ನಗರದ 8ನೇ ವಾರ್ಡ್ ಕನಂಪಲ್ಲಿಯಲ್ಲಿ ಬೀಗ ಹಾಕಿದ್ದ ಮನೆಯ ಬಾಗಿಲು ಮೀಟಿ ಒಳನುಗ್ಗಿರುವ ಕಳ್ಳರು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಸೇರಿ ಸುಮಾರು ₹11ಲಕ್ಷ ಬೆಲೆ ಬಾಳುವ ವಸ್ತು ದೋಚಿಕೊಂಡು ಪರಾರಿಯಾಗಿದ್ದಾರೆ.</p>.<p>ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತೆರ್ನಹಳ್ಳಿಯ ಪಶುವೈದ್ಯಾಧಿಕಾರಿ ಡಾ.ವಿ.ಮನೋಜ್ ಕನಂಪಲ್ಲಿಯಲ್ಲಿ ವಾಸವಿದ್ದರು. ಮನೆಯವರೆಲ್ಲ ಬೀಗ ಹಾಕಿಕೊಂಡು ಸ್ವಗ್ರಾಮ ತಾಲ್ಲೂಕಿನ ಬಿಲ್ಲಾಂಡ್ಲಹಳ್ಳಿಗೆ ತೆರಳಿದ್ದಾಗ ಕಳ್ಳತನ ನಡೆದಿದೆ.</p>.<p>ಬುಧವಾರ ರಾತ್ರಿ 11.30ಕ್ಕೆ ಬಿಲ್ಲಾಂಡ್ಲಹಳ್ಳಿಯಿಂದ ಮನೆಗೆ ವಾಪಸ್ ಬಂದಾಗ ಮನೆಯ ಬಾಗಿಲಿನ ಬೀಗ ಮುರಿದು, ಮೀಟಿರುವ ಕುರುಹು ಕಂಡು ಗಾಬರಿಯಾಗಿ ಒಳಗೆ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.</p>.<p>ಬೀರುವಿನಲ್ಲಿರುವ ಲಾಕರ್ ಮುರಿದು ಸುಮಾರು 35 ಗ್ರಾಂ ತೂಕದ ಬಂಗಾರದ ನೆಕ್ಲೇಸ್, 58 ಗ್ರಾಂ ಬಂಗಾರದ ಹಾರ, 42 ಗ್ರಾಂ ವಿಯೋಲೆಗಳು, ಉಂಗುರು ಸೇರಿ ಒಟ್ಟು ಸುಮಾರು 137 ಗ್ರಾಂ ಚಿನ್ನದ ಒಡವೆ, 750 ಗ್ರಾಂ ಬೆಳ್ಳಿಯ ಸಾಮಗ್ರಿ ಹಾಗೂ ₹20 ಸಾವಿರ ನಗದು ಹಣ ಕಳುವಾಗಿದೆ ಎಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.</p>.<p>ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶ್ವಾನದಳ ಮತ್ತು ಬೆರಳಚ್ಚು ತಂಡವು ಸಹ ಸ್ಥಳಕ್ಕೆ ಭೇಟಿ ನೀಡಿ ನೀಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-16-970879640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ನಗರದ 8ನೇ ವಾರ್ಡ್ ಕನಂಪಲ್ಲಿಯಲ್ಲಿ ಬೀಗ ಹಾಕಿದ್ದ ಮನೆಯ ಬಾಗಿಲು ಮೀಟಿ ಒಳನುಗ್ಗಿರುವ ಕಳ್ಳರು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಸೇರಿ ಸುಮಾರು ₹11ಲಕ್ಷ ಬೆಲೆ ಬಾಳುವ ವಸ್ತು ದೋಚಿಕೊಂಡು ಪರಾರಿಯಾಗಿದ್ದಾರೆ.</p>.<p>ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತೆರ್ನಹಳ್ಳಿಯ ಪಶುವೈದ್ಯಾಧಿಕಾರಿ ಡಾ.ವಿ.ಮನೋಜ್ ಕನಂಪಲ್ಲಿಯಲ್ಲಿ ವಾಸವಿದ್ದರು. ಮನೆಯವರೆಲ್ಲ ಬೀಗ ಹಾಕಿಕೊಂಡು ಸ್ವಗ್ರಾಮ ತಾಲ್ಲೂಕಿನ ಬಿಲ್ಲಾಂಡ್ಲಹಳ್ಳಿಗೆ ತೆರಳಿದ್ದಾಗ ಕಳ್ಳತನ ನಡೆದಿದೆ.</p>.<p>ಬುಧವಾರ ರಾತ್ರಿ 11.30ಕ್ಕೆ ಬಿಲ್ಲಾಂಡ್ಲಹಳ್ಳಿಯಿಂದ ಮನೆಗೆ ವಾಪಸ್ ಬಂದಾಗ ಮನೆಯ ಬಾಗಿಲಿನ ಬೀಗ ಮುರಿದು, ಮೀಟಿರುವ ಕುರುಹು ಕಂಡು ಗಾಬರಿಯಾಗಿ ಒಳಗೆ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.</p>.<p>ಬೀರುವಿನಲ್ಲಿರುವ ಲಾಕರ್ ಮುರಿದು ಸುಮಾರು 35 ಗ್ರಾಂ ತೂಕದ ಬಂಗಾರದ ನೆಕ್ಲೇಸ್, 58 ಗ್ರಾಂ ಬಂಗಾರದ ಹಾರ, 42 ಗ್ರಾಂ ವಿಯೋಲೆಗಳು, ಉಂಗುರು ಸೇರಿ ಒಟ್ಟು ಸುಮಾರು 137 ಗ್ರಾಂ ಚಿನ್ನದ ಒಡವೆ, 750 ಗ್ರಾಂ ಬೆಳ್ಳಿಯ ಸಾಮಗ್ರಿ ಹಾಗೂ ₹20 ಸಾವಿರ ನಗದು ಹಣ ಕಳುವಾಗಿದೆ ಎಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.</p>.<p>ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶ್ವಾನದಳ ಮತ್ತು ಬೆರಳಚ್ಚು ತಂಡವು ಸಹ ಸ್ಥಳಕ್ಕೆ ಭೇಟಿ ನೀಡಿ ನೀಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-16-970879640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>