<p>ಚಿಂತಾಮಣಿ: ನಗರದ ಹೊರವಲಯದ ಕನಂಪಲ್ಲಿಯ ಪಂಚಮುಖಿ ವೀರಾಂಜನೇಯ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.</p>.<p>ದೇವಾಲಯದಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆ ಏರ್ಪಡಿಸಲಾಗಿತ್ತು. ಬೆಳಿಗ್ಗೆ ಮಹಾನಿವೇದನೆ, ಕಲಶಾರಾಧನೆ, ಅಭಿಷೇಕ, ಹೋಮ, ಅಷ್ಟಾವಧಾನ ಸೇವೆ, ಪೂರ್ಣಾಹುತಿ, ಬಲಿಹರಣ ಕಾರ್ಯಕ್ರಮಗಳು ನೆರವೇರಿದವು.</p>.<p>ಮಧ್ಯಾಹ್ನ 2 ಗಂಟೆಗೆ ಶ್ರೀರಾಮಚಂದ್ರ ಸಮೇತ ಹನುಮಂತನ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಲಾಯಿತು. ಮಾಜಿ ಗೃಹ ಸಚಿವ ಎ.ಚೌಡರೆಡ್ಡಿ ಹಾಗೂ ಶಾಂತಮ್ಮ ಚೌಡರೆಡ್ಡಿ, ದೇವಾಲಯದ ಟ್ರಸ್ಟ್ ಸಮಿತಿಯವರು ರಥೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಭಕ್ತರು ರಥವನ್ನು ಎಳೆದರು.</p>.<p>ನಗರ, ಕನಂಪಲ್ಲಿ, ಮಾಳಪಲ್ಲಿ ಹಾಗೂ ಸುತ್ತಮುತ್ತಲ ಗ್ರಾಮಗಳ ನೂರಾರು ಮಂದಿ ರಥವನ್ನು ಕಣ್ಣುತುಂಬಿಸಿಕೊಂಡರು. ರಥಕ್ಕೆ ದವನ, ಬಾಳೆಹಣ್ಣನ್ನು ಭಕ್ತಿಯಿಂದ ಸಮರ್ಪಿಸಿದರು.</p>.<p>ತಮಟೆವಾದ್ಯ, ಭಕ್ತರ ಕುಣಿತ ರಥೋತ್ಸವಕ್ಕೆ ಮೆರುಗು ನೀಡಿದವು. ಗ್ರಾಮಸ್ಥರಿಂದ ವಿಶೇಷ ದೀಪೋತ್ಸವ ನಡೆಯಿತು.</p>.<p>ಮುಖಂಡ ಮೀಸೆ ವೆಂಕಟರೆಡ್ಡಿ, ಮುನಿಶಾಮರೆಡ್ಡಿ, ಡಾ.ಬಾಲಾಜಿ, ಅರುಣಾಮಂಜುನಾಥ್, ಗೋಪಾಲರೆಡ್ಡಿ, ಕೃಷ್ಣಾರೆಡ್ಡಿ, ಶ್ರೀನಿವಾಸ್, ಅರುಣಾರೆಡ್ಡಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ನಗರ ಹಾಗೂ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಆಗಮಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-16-933754933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ನಗರದ ಹೊರವಲಯದ ಕನಂಪಲ್ಲಿಯ ಪಂಚಮುಖಿ ವೀರಾಂಜನೇಯ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.</p>.<p>ದೇವಾಲಯದಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆ ಏರ್ಪಡಿಸಲಾಗಿತ್ತು. ಬೆಳಿಗ್ಗೆ ಮಹಾನಿವೇದನೆ, ಕಲಶಾರಾಧನೆ, ಅಭಿಷೇಕ, ಹೋಮ, ಅಷ್ಟಾವಧಾನ ಸೇವೆ, ಪೂರ್ಣಾಹುತಿ, ಬಲಿಹರಣ ಕಾರ್ಯಕ್ರಮಗಳು ನೆರವೇರಿದವು.</p>.<p>ಮಧ್ಯಾಹ್ನ 2 ಗಂಟೆಗೆ ಶ್ರೀರಾಮಚಂದ್ರ ಸಮೇತ ಹನುಮಂತನ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಲಾಯಿತು. ಮಾಜಿ ಗೃಹ ಸಚಿವ ಎ.ಚೌಡರೆಡ್ಡಿ ಹಾಗೂ ಶಾಂತಮ್ಮ ಚೌಡರೆಡ್ಡಿ, ದೇವಾಲಯದ ಟ್ರಸ್ಟ್ ಸಮಿತಿಯವರು ರಥೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಭಕ್ತರು ರಥವನ್ನು ಎಳೆದರು.</p>.<p>ನಗರ, ಕನಂಪಲ್ಲಿ, ಮಾಳಪಲ್ಲಿ ಹಾಗೂ ಸುತ್ತಮುತ್ತಲ ಗ್ರಾಮಗಳ ನೂರಾರು ಮಂದಿ ರಥವನ್ನು ಕಣ್ಣುತುಂಬಿಸಿಕೊಂಡರು. ರಥಕ್ಕೆ ದವನ, ಬಾಳೆಹಣ್ಣನ್ನು ಭಕ್ತಿಯಿಂದ ಸಮರ್ಪಿಸಿದರು.</p>.<p>ತಮಟೆವಾದ್ಯ, ಭಕ್ತರ ಕುಣಿತ ರಥೋತ್ಸವಕ್ಕೆ ಮೆರುಗು ನೀಡಿದವು. ಗ್ರಾಮಸ್ಥರಿಂದ ವಿಶೇಷ ದೀಪೋತ್ಸವ ನಡೆಯಿತು.</p>.<p>ಮುಖಂಡ ಮೀಸೆ ವೆಂಕಟರೆಡ್ಡಿ, ಮುನಿಶಾಮರೆಡ್ಡಿ, ಡಾ.ಬಾಲಾಜಿ, ಅರುಣಾಮಂಜುನಾಥ್, ಗೋಪಾಲರೆಡ್ಡಿ, ಕೃಷ್ಣಾರೆಡ್ಡಿ, ಶ್ರೀನಿವಾಸ್, ಅರುಣಾರೆಡ್ಡಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ನಗರ ಹಾಗೂ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಆಗಮಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-16-933754933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>