<p><strong>ಚಿಂತಾಮಣಿ:</strong> ಚಿಂತಾಮಣಿಯಿಂದ ಜೂಲಪಾಳ್ಯಕ್ಕೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಶುಕ್ರವಾರ ಪೂಲಕುಂಟ್ಲಹಳ್ಳಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಉರುಳಿಬಿದ್ದಿದೆ.</p>.<p>ಬಸ್ಸಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅವರು ಗಂಜಿಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡು ವಾಪಸ್ ಹೋಗಿದ್ದಾರೆ.</p>.<p>ಪುಲಕುಂಟೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಗೆ ಜಲ್ಲಿ ಹರಡಲಾಗಿತ್ತು. ಬಸ್ ಜಲ್ಲಿ ಪಕ್ಕದ ಮಣ್ಣಿನ ರಸ್ತೆಯಲ್ಲಿ ಚಲಿಸುತ್ತಿದ್ದಾಗ ರಸ್ತೆ ಬದಿಗೆ ಪಲ್ಟಿ ಹೊಡೆದಿದೆ. ಮಣ್ಣಿನ ರಸ್ತೆ ಗಟ್ಟಿ ಇಲ್ಲದೆ ಒಂದು ಕಡೆಯ ಚಕ್ರಗಳು ಮಣ್ಣಿನಲ್ಲಿ ಹೂತುಹೋಗಿ 30-40 ಪ್ರಯಾಣಿಕರಿದ್ದ ಬಸ್ ಪಲ್ಟಿ ಹೊಡೆದು ರಸ್ತೆ ಬದಿಗೆ ಉರುಳಿದೆ.</p>.<p>ಬಸ್ ಉರುಳಿದ ಕೆಲವು ಅಡಿಗಳ ಪಕ್ಕದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕದ ಕಂಬವಿದ್ದು, ಕಂಬದ ಮೇಲೆ ಬಸ್ ಬಿದ್ದಿದ್ದರೆ ಬಾರಿ ಅನಾಹುತವಾಗುತ್ತಿತ್ತು. ಸ್ಥಳೀಯರು ಧಾವಿಸಿ ಜನರು ಬಸ್ಸಿನಿಂದ ಹೊರಬರಲು ಸಹಾಯ ಮಾಡಿದರು. </p>.<p>ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಅಧಿಕಾರಿಗಳು ಹಾಗೂ ದಿಬ್ಬೂಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಚಿಂತಾಮಣಿಯಿಂದ ಜೂಲಪಾಳ್ಯಕ್ಕೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಶುಕ್ರವಾರ ಪೂಲಕುಂಟ್ಲಹಳ್ಳಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಉರುಳಿಬಿದ್ದಿದೆ.</p>.<p>ಬಸ್ಸಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅವರು ಗಂಜಿಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡು ವಾಪಸ್ ಹೋಗಿದ್ದಾರೆ.</p>.<p>ಪುಲಕುಂಟೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಗೆ ಜಲ್ಲಿ ಹರಡಲಾಗಿತ್ತು. ಬಸ್ ಜಲ್ಲಿ ಪಕ್ಕದ ಮಣ್ಣಿನ ರಸ್ತೆಯಲ್ಲಿ ಚಲಿಸುತ್ತಿದ್ದಾಗ ರಸ್ತೆ ಬದಿಗೆ ಪಲ್ಟಿ ಹೊಡೆದಿದೆ. ಮಣ್ಣಿನ ರಸ್ತೆ ಗಟ್ಟಿ ಇಲ್ಲದೆ ಒಂದು ಕಡೆಯ ಚಕ್ರಗಳು ಮಣ್ಣಿನಲ್ಲಿ ಹೂತುಹೋಗಿ 30-40 ಪ್ರಯಾಣಿಕರಿದ್ದ ಬಸ್ ಪಲ್ಟಿ ಹೊಡೆದು ರಸ್ತೆ ಬದಿಗೆ ಉರುಳಿದೆ.</p>.<p>ಬಸ್ ಉರುಳಿದ ಕೆಲವು ಅಡಿಗಳ ಪಕ್ಕದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕದ ಕಂಬವಿದ್ದು, ಕಂಬದ ಮೇಲೆ ಬಸ್ ಬಿದ್ದಿದ್ದರೆ ಬಾರಿ ಅನಾಹುತವಾಗುತ್ತಿತ್ತು. ಸ್ಥಳೀಯರು ಧಾವಿಸಿ ಜನರು ಬಸ್ಸಿನಿಂದ ಹೊರಬರಲು ಸಹಾಯ ಮಾಡಿದರು. </p>.<p>ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಅಧಿಕಾರಿಗಳು ಹಾಗೂ ದಿಬ್ಬೂಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>