ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ವಾಹನ ಡಿಕ್ಕಿ ಓರ್ವ ಕಾರ್ಮಿಕ ಸಾವು

Last Updated 26 ಫೆಬ್ರುವರಿ 2023, 5:25 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಚೇಳೂರು ರಸ್ತೆ ಕನಿಶೆಟ್ಟಹಳ್ಳಿ ಕ್ರಾಸ್ ಬಳಿ ಶನಿವಾರ ಬಟ್ಲಹಳ್ಳಿ ಠಾಣೆ ಪೊಲೀಸ್ ಜೀಪ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟಗಲ್ ನಿವಾಸಿ ಮುನಿಯಪ್ಪ(33) ಮೃತರು. ಸಬ್ ಇನ್‌ ಸ್ಪೆಕ್ಟರ್ ನಾರಾಯಣಸ್ವಾಮಿ ಮತ್ತು ಜೀಪ್ ಚಾಲಕ ವಿಜಯಕುಮಾರ್ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಮುನಿಯಪ್ಪ ಕೋಟಗಲ್‌ನಿಂದ ದ್ವಿಚಕ್ರ ವಾಹನದಲ್ಲಿ ಕೂಲಿ ಕೆಲಸಕ್ಕಾಗಿ ಚಿಂತಾಮಣಿಗೆ ಬರುತ್ತಿದ್ದರು. ಕನಿಶೆಟ್ಟಹಳ್ಳಿ ಕ್ರಾಸ್ ಬಳಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚೆಂಚಾರ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT