ಚುನಾವಣೆ ನಡೆಸಲು ಸರ್ಕಾರ ಮತ್ತು ಆಯೋಗ ತೀರ್ಮಾನ ಕೈಗೊಳ್ಳಬೇಕು. ನಮಗಿರುವ ಇತಿಮಿತಿಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ.
ಎಸ್.ಆನಂದ್ ಇಒ ತಾ.ಪಂಚಾಯಿತಿ
ಗ್ರಾ.ಪಂ ತಾ.ಪಂ ಜಿ.ಪಂ ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಿದ್ದರೆ ನಾಗರಿಕರ ಸಮಸ್ಯೆಗಳನ್ನು ಕೇಳಿ ಬಗೆಹರಿಸಿಕೊಳ್ಳಬಹುದು. ಅಧಿಕಾರಿಗಳು ಕೈಗೆ ಸಿಗುವುದಿಲ್ಲ.
ರಮೇಶ್ ನಾಗರಿಕ ಚಿಂತಾಮಣಿ
ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಷಯದಲ್ಲಿ ಎಲ್ಲ ಪಕ್ಷಗಳ ನೀತಿ ಒಂದೇ ಆಗಿದೆ. ಸ್ಥಳೀಯ ಸಂಸ್ಥೆಗಳಿಗೆ ಅವಧಿ ಮುಗಿದ ನಂತರ ನಿರ್ದಿಷ್ಟ ಅವಧಿಯಲ್ಲಿ ಚುನಾವಣೆ ನಡೆಸಬೇಕು ಎಂಬ ಕಾನೂನು ಜಾರಿಗೊಳಿಸಬೇಕು.