<p><strong>ಚಿಂತಾಮಣಿ</strong>: ಮಡಿವಾಳ ಮಾಚಿದೇವರ ಜಯಂತಿ ಸಂಬಂಧವಾಗಿ ತಾಲ್ಲೂಕು ಆಡಳಿತವು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗ್ರೇಡ್ 2 ತಹಶೀಲ್ದಾರ್ ರಾಜೇಂದ್ರನ್ ನೇತೃತ್ವದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು. ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಯಿತು. </p>.<p>ಮಡಿವಾಳ ವಿವಿಧೋದ್ದೇಶ ಸಹಕಾರ ಸಂಘದ ಕಾರ್ಯದರ್ಶಿ ಮು. ಪಾಪಣ್ಣ ಮಾತನಾಡಿ, ಈ ವರ್ಷವೂ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ಹಿರಿಯರನ್ನು ಸನ್ಮಾನಿಸಲಾಗುವುದು. ತಾಲೂಕಿನಾದ್ಯಂತ ಶಾಲೆಗಳಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ವ್ಯವಸ್ಥೆ ಮಾಡಬೇಕು ಎಂದು ಕೋರಿದರು. </p>.<p>ಗ್ರೇಡ್ 2 ತಹಶೀಲ್ದಾರ್ ರಾಜೇಂದ್ರ ಮಾತನಾಡಿ, ತಾಲ್ಲೂಕಿನ ಎಲ್ಲ ಶಾಲೆಗಳಲ್ಲಿ ಮಾಚಿದೇವರ ಭಾವಚಿತ್ರ ಇಟ್ಟು ಪೂಜಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.</p>.<p>ಮಡಿವಾಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ವಿ. ರಾಮಮೂರ್ತಿ, ಮಂಜುನಾಥ್, ಸಾರಿಗೆ ಇಲಾಖೆಯ ಅಶ್ವತಪ್ಪ. ಸಮಾಜ ಇಲಾಖೆಯ ಕೃಷ್ಣಪ್ಪ, ಆನೂರು ವೆಂಕಟೇಶಪ್ಪ, ಶ್ರೀನಿವಾಸಪ್ಪ, ಕೇಬಲ್ ಕೃಷ್ಣಪ್ಪ, ಪೋಲಪೇಟೆ ನಾರಾಯಣಸ್ವಾಮಿ, ಗಂಗಾಧರ್, ಚಲಪತಿ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಮಡಿವಾಳ ಮಾಚಿದೇವರ ಜಯಂತಿ ಸಂಬಂಧವಾಗಿ ತಾಲ್ಲೂಕು ಆಡಳಿತವು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗ್ರೇಡ್ 2 ತಹಶೀಲ್ದಾರ್ ರಾಜೇಂದ್ರನ್ ನೇತೃತ್ವದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು. ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಯಿತು. </p>.<p>ಮಡಿವಾಳ ವಿವಿಧೋದ್ದೇಶ ಸಹಕಾರ ಸಂಘದ ಕಾರ್ಯದರ್ಶಿ ಮು. ಪಾಪಣ್ಣ ಮಾತನಾಡಿ, ಈ ವರ್ಷವೂ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ಹಿರಿಯರನ್ನು ಸನ್ಮಾನಿಸಲಾಗುವುದು. ತಾಲೂಕಿನಾದ್ಯಂತ ಶಾಲೆಗಳಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ವ್ಯವಸ್ಥೆ ಮಾಡಬೇಕು ಎಂದು ಕೋರಿದರು. </p>.<p>ಗ್ರೇಡ್ 2 ತಹಶೀಲ್ದಾರ್ ರಾಜೇಂದ್ರ ಮಾತನಾಡಿ, ತಾಲ್ಲೂಕಿನ ಎಲ್ಲ ಶಾಲೆಗಳಲ್ಲಿ ಮಾಚಿದೇವರ ಭಾವಚಿತ್ರ ಇಟ್ಟು ಪೂಜಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.</p>.<p>ಮಡಿವಾಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ವಿ. ರಾಮಮೂರ್ತಿ, ಮಂಜುನಾಥ್, ಸಾರಿಗೆ ಇಲಾಖೆಯ ಅಶ್ವತಪ್ಪ. ಸಮಾಜ ಇಲಾಖೆಯ ಕೃಷ್ಣಪ್ಪ, ಆನೂರು ವೆಂಕಟೇಶಪ್ಪ, ಶ್ರೀನಿವಾಸಪ್ಪ, ಕೇಬಲ್ ಕೃಷ್ಣಪ್ಪ, ಪೋಲಪೇಟೆ ನಾರಾಯಣಸ್ವಾಮಿ, ಗಂಗಾಧರ್, ಚಲಪತಿ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>