<p>ಚಿಂತಾಮಣಿ: ತಾಲ್ಲೂಕಿನ ಮುಂಗಾನಹಳ್ಳಿ ಹೋಬಳಿ ಮಿಂಡಿಗಲ್ ಗ್ರಾಮದ ಸರ್ವೆ ನಂ 32ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದವರಿಗೆ ಕಾಯ್ದಿರಿಸಿದ ಸ್ಮಶಾನ ಜಾಗ ಮಂಜೂರು ಮಾಡಿಕೊಡಲು ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.</p>.<p>ಆದರೆ, ಗ್ರಾಮದ ಯರ್ರಪ್ಪ ರೆಡ್ಡಿ ಎಂಬುವರು ರಾತ್ರೋರಾತ್ರಿ ಆ ಸ್ಮಶಾನದ ಜಾಗದಲ್ಲಿ ಉಳಿಮೆ ಮಾಡಿ, ಜಮೀನು ತನ್ನದು ಎಂದು ಹೇಳಿ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಗ್ರಾಮದ ಜಯರಾಮರೆಡ್ಡಿ ದೂರು ನೀಡಿದ್ದರು. ಹಿಂದೆ ಸರ್ವೆ ಮಾಡಲು ಬಂದ ಅಧಿಕಾರಿಗಳಿಗೆ ಅಡ್ಡಿಪಡಿಸಲಾಗಿತ್ತು. ಇದರಿಂದಾಗಿ ಅಧಿಕಾರಿಗಳು ಸರ್ವೆ ಮಾಡದೆ, ವಾಪಸ್ ಹೋಗಿದ್ದರು.</p>.<p>ಮಂಗಳವಾರ ಸರ್ವೆ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಾಯದೊಂದಿಗೆ ಸರ್ವೆ ನಂ 32ರಲ್ಲಿ 3 ಎಕರೆ ಜಮೀನು ಸಂಪೂರ್ಣವಾಗಿ ಸರ್ವೆ ಮಾಡಿ ಜೆಸಿಬಿ ಮೂಲಕ ಗುರುತು ಮಾಡಿದರು. ಇದರೊಂದಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ಮಶಾನ ಜಾಗ ಸಮಸ್ಯೆ ಇತ್ಯರ್ಥವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳವರಿಗೆ ತುಂಬಾ ಅನುಕೂಲವಾಗಿದೆ ಎಂದು ಜಯರಾಮರೆಡ್ಡಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-16-246548609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ತಾಲ್ಲೂಕಿನ ಮುಂಗಾನಹಳ್ಳಿ ಹೋಬಳಿ ಮಿಂಡಿಗಲ್ ಗ್ರಾಮದ ಸರ್ವೆ ನಂ 32ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದವರಿಗೆ ಕಾಯ್ದಿರಿಸಿದ ಸ್ಮಶಾನ ಜಾಗ ಮಂಜೂರು ಮಾಡಿಕೊಡಲು ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.</p>.<p>ಆದರೆ, ಗ್ರಾಮದ ಯರ್ರಪ್ಪ ರೆಡ್ಡಿ ಎಂಬುವರು ರಾತ್ರೋರಾತ್ರಿ ಆ ಸ್ಮಶಾನದ ಜಾಗದಲ್ಲಿ ಉಳಿಮೆ ಮಾಡಿ, ಜಮೀನು ತನ್ನದು ಎಂದು ಹೇಳಿ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಗ್ರಾಮದ ಜಯರಾಮರೆಡ್ಡಿ ದೂರು ನೀಡಿದ್ದರು. ಹಿಂದೆ ಸರ್ವೆ ಮಾಡಲು ಬಂದ ಅಧಿಕಾರಿಗಳಿಗೆ ಅಡ್ಡಿಪಡಿಸಲಾಗಿತ್ತು. ಇದರಿಂದಾಗಿ ಅಧಿಕಾರಿಗಳು ಸರ್ವೆ ಮಾಡದೆ, ವಾಪಸ್ ಹೋಗಿದ್ದರು.</p>.<p>ಮಂಗಳವಾರ ಸರ್ವೆ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಾಯದೊಂದಿಗೆ ಸರ್ವೆ ನಂ 32ರಲ್ಲಿ 3 ಎಕರೆ ಜಮೀನು ಸಂಪೂರ್ಣವಾಗಿ ಸರ್ವೆ ಮಾಡಿ ಜೆಸಿಬಿ ಮೂಲಕ ಗುರುತು ಮಾಡಿದರು. ಇದರೊಂದಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ಮಶಾನ ಜಾಗ ಸಮಸ್ಯೆ ಇತ್ಯರ್ಥವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳವರಿಗೆ ತುಂಬಾ ಅನುಕೂಲವಾಗಿದೆ ಎಂದು ಜಯರಾಮರೆಡ್ಡಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-16-246548609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>