ಜಮೀನಿನಲ್ಲಿರುವ ಕೃಷಿ ಹೊಂಡ ಕೇವಲ ನೀರು ಶೇಖರಣೆಗೆ ಮಾತ್ರವಲ್ಲ. ಸುತ್ತಲೂ ಬಾಳೆ, ಕಬ್ಬು, ಹೂ ಗಿಡಗಳು ಬೆಳೆಸಲಾಗಿದೆ. ಒಳಗಡೆ ಮೀನು ಸಾಕಾಣಿಕೆ ಮಾಡುತ್ತೇವೆ. ಕೃಷಿ ಹೊಂಡಕ್ಕೆ ಸರ್ಕಾರದಿಂದ ಪ್ರೋತ್ಸಾಹ ಧನ ಸಿಗುತ್ತದೆ. ರೈತರು ಸಮಗ್ರ ಕೃಷಿ ಪದ್ಧತಿಯನ್ನು ಕೈಗೊಳ್ಳಬೇಕು. ಕೃಷಿ ತೋಟದಲ್ಲಿ ಮೀನು ಸಾಕಾಣಿಕೆ, ಜೇನು ಸಾಕಾಣಿಕೆ, ಕುರಿ, ಕೋಳಿ, ಮೇಕೆ, ಹಸುಗಳ ಸಾಕಾಣಿಕೆಯನ್ನು ಮಾಡುತ್ತೇವೆ. ಸಮಗ್ರ ಕೃಷಿ ಪದ್ಧತಿಯನ್ನು ಕೃಷಿ ವಿದ್ಯಾರ್ಥಿಗಳು ರೈತರಿಗೆ ಮನವರಿಕೆ ಮಾಡಬೇಕು ಎಂದರು.