<p><strong>ಚಿಂತಾಮಣಿ:</strong> ಕೈವಾರ ನಾಡ ಕಚೇರಿಯಲ್ಲಿನ ಅಧಿಕಾರಿಗಳು ಮತ್ತು ನೌಕರರು ಫಲಾನುಭವಿಗಳ ಮನೆಮನೆಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಲು ಪಣತೊಟ್ಟಿದ್ದಾರೆ. ಮೊದಲ ಹಂತದಲ್ಲಿ ವೃದ್ಧಾಪ್ಯ ವೇತನಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗಿದೆ.ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ಪ್ರತಿ ತಿಂಗಳ 4ನೇ ಶನಿವಾರ ಅಧಿಕಾರಿಗಳು ಒಂದು ಹಳ್ಳಿಗೆ ಹೋಗುತ್ತಾರೆ. ಈ ಬಗ್ಗೆ ಮೊದಲೇ ಆ ಗ್ರಾಮದಲ್ಲಿ ಸಾಕಷ್ಟು ಪ್ರಚಾರವನ್ನೂ ನಡೆಸಿರುತ್ತಾರೆ. ಸಾರ್ವಜನಿಕ ಸ್ಥಳದಲ್ಲಿ ಕುಳಿತು ಗ್ರಾಮದಲ್ಲಿ ಸರ್ಕಾರಿ ಯೋಜನೆಗಳಿಗೆ ಅರ್ಹರಿರುವ ಎಲ್ಲ ಫಲಾನುಭವಿಗಳಿಂದ ಅರ್ಜಿಗಳನ್ನು ಪಡೆಯುತ್ತಾರೆ. ಅಗತ್ಯ ದಾಖಲೆ ಹಾಗೂ ಮಾಹಿತಿಗಳನ್ನು ಕೇಳಿ ಪಡೆದುಕೊಳ್ಳುತ್ತಾರೆ.</p>.<p>ನಂತರ 10 ದಿನಗಳಲ್ಲಿ ಇಲಾಖೆಯ ಕಡತಗಳನ್ನು ತಯಾರಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಂಜೂರಾತಿ ಆದೇಶಗಳನ್ನು ಪಡೆದುಕೊಳ್ಳುತ್ತಾರೆ. 10ನೇ ದಿನ ಪುನಃ ಗ್ರಾಮಕ್ಕೆ ತೆರಳಿ ಅರ್ಹ ಫಲಾನುಭವಿಗಳಿಗೆ ಆದೇಶ ಪ್ರತಿಗಳನ್ನು ನೀಡುತ್ತಾರೆ.</p>.<p>ನಾಡಕಚೇರಿಯ ಉಪ ತಹಶೀಲ್ದಾರ್ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜೂನ್ 29ರಂದು ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯ ಗ್ರಾಮಕ್ಕೆ ತೆರಳಿದ್ದರು. ಗ್ರಾಮದಲ್ಲಿ ಸಾರ್ವಜನಿಕರಿಂದ 60 ಅರ್ಜಿಗಳನ್ನು ಸಂಗ್ರಹಿಸಿದ್ದರು. ವೃದ್ಧಾಪ್ಯವೇತನದ ಕುರಿತು ಜಾಗೃತಿ ಮೂಡಿಸಿದ್ದರು.</p>.<p>ಕಚೇರಿಯಲ್ಲಿ ಕುಳಿತು ಇಲಾಖೆಯ ನೀತಿ ನಿಯಮದಂತೆ ಕಡತಗಳನ್ನು ತಯಾರಿಸಿ ಮೇಲಧಿಕಾರಿಗಳ ಸಹಿ ಪಡೆದು ಆದೇಶಗಳನ್ನು ಸಿದ್ದಪಡಿಸಿದ್ದರು. ಬುಧವಾರ (ಜು. 10) ಗ್ರಾಮಕ್ಕೆ ತೆರಳಿ 60 ಫಲಾನುಭವಿಗಳಿಗೂ ಆದೇಶದ ಪ್ರತಿಗಳನ್ನು ವಿತರಿಸಿದರು.</p>.<p>ಗ್ರಾಮೀಣ ಭಾಗಗಳಲ್ಲಿ ವಯಸ್ಸಾದ ಹಲವಾರು ಜನರಿಗೆ ಪಿಂಚಣಿಯ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಕೆಲವರಿಗೆ ಮಾಹಿತಿ ಇದ್ದರೂ ಪದೇ ಪದೇ ಕಚೇರಿಗಳಿಗೆ ಅಲೆದಾಡಲು ಸಾಧ್ಯವಾಗುವುದಿಲ್ಲ. ಈ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡ ಕೆಲವು ಮದ್ಯವರ್ತಿಗಳು ಫಲಾನುಭವಿಗಳಿಂದ ಅಧಿಕಾರಿಗಳ ಹೆಸರಿನಲ್ಲಿ ಸಾವಿರಾರು ರೂಗಳನ್ನು ವಸೂಲಿ ಮಾಡುವ ಬಗ್ಗೆ ದೂರುಗಳು ವ್ಯಾಪಕವಾಗಿದ್ದವು. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮತ್ತು ತಹಶೀಲ್ದಾರ್ ಎಸ್.ಎಲ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ಮೋಹನ್ ತಿಳಿಸಿದರು.</p>.<p><strong>ಹೇಳಿಕೊಳ್ಳಲಾಗದ ಅನುಭವ</strong></p>.<p>ನಮ್ಮ ಗ್ರಾಮಕ್ಕೆ ಬಂದು ಅರ್ಜಿಗಳನ್ನು ಪಡೆದು ಪಿಂಚಣಿ ಮಂಜೂರು ಮಾಡಿರುವುದು ನಮ್ಮ ಪಾಲಿಗೆ ಹೇಳಿಕೊಳ್ಳಲಾರದ ಅನುಭವ. ಎಲ್ಲ ಸಮಸ್ಯೆಗಳಿಗೂ ಇದೇ ರೀತಿ ಸ್ಪಂದಿಸಿದರೆ ಗ್ರಾಮೀಣ ಜನರು ಅಧಿಕಾರಿಗಳನ್ನು ದೇವರಂತೆ ಕಾಣುತ್ತಾರೆ. ಕನಿಷ್ಠ 6 ತಿಂಗಳಿಗೆ ಒಮ್ಮೆಯಾದರೂ ಎಲ್ಲ ಇಲಾಖೆಗಳ ಅಧಿಕಾರಿಗಳು ಒಟ್ಟಿಗೆ ಬರಬೇಕು ಎಂದು ಫಲಾನುಭವಿಗಳಾದ ಮುನಿಯಪ್ಪ ಮತ್ತು ಶಾಂತಮ್ಮ</p>.<p>ಮನವಿ ಮಾಡಿದರು.</p>.<p>* ಕೈವಾರ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲೂ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇವೆ. ಮುಂದಿನ ಗ್ರಾಮ ವೈಜಕೂರು ಎಂದು ತೀರ್ಮಾನಿಸಲಾಗಿದೆ</p>.<p>-<strong>ಮೋಹನ್, </strong>ಉಪತಹಶೀಲ್ದಾರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಕೈವಾರ ನಾಡ ಕಚೇರಿಯಲ್ಲಿನ ಅಧಿಕಾರಿಗಳು ಮತ್ತು ನೌಕರರು ಫಲಾನುಭವಿಗಳ ಮನೆಮನೆಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಲು ಪಣತೊಟ್ಟಿದ್ದಾರೆ. ಮೊದಲ ಹಂತದಲ್ಲಿ ವೃದ್ಧಾಪ್ಯ ವೇತನಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗಿದೆ.ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ಪ್ರತಿ ತಿಂಗಳ 4ನೇ ಶನಿವಾರ ಅಧಿಕಾರಿಗಳು ಒಂದು ಹಳ್ಳಿಗೆ ಹೋಗುತ್ತಾರೆ. ಈ ಬಗ್ಗೆ ಮೊದಲೇ ಆ ಗ್ರಾಮದಲ್ಲಿ ಸಾಕಷ್ಟು ಪ್ರಚಾರವನ್ನೂ ನಡೆಸಿರುತ್ತಾರೆ. ಸಾರ್ವಜನಿಕ ಸ್ಥಳದಲ್ಲಿ ಕುಳಿತು ಗ್ರಾಮದಲ್ಲಿ ಸರ್ಕಾರಿ ಯೋಜನೆಗಳಿಗೆ ಅರ್ಹರಿರುವ ಎಲ್ಲ ಫಲಾನುಭವಿಗಳಿಂದ ಅರ್ಜಿಗಳನ್ನು ಪಡೆಯುತ್ತಾರೆ. ಅಗತ್ಯ ದಾಖಲೆ ಹಾಗೂ ಮಾಹಿತಿಗಳನ್ನು ಕೇಳಿ ಪಡೆದುಕೊಳ್ಳುತ್ತಾರೆ.</p>.<p>ನಂತರ 10 ದಿನಗಳಲ್ಲಿ ಇಲಾಖೆಯ ಕಡತಗಳನ್ನು ತಯಾರಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಂಜೂರಾತಿ ಆದೇಶಗಳನ್ನು ಪಡೆದುಕೊಳ್ಳುತ್ತಾರೆ. 10ನೇ ದಿನ ಪುನಃ ಗ್ರಾಮಕ್ಕೆ ತೆರಳಿ ಅರ್ಹ ಫಲಾನುಭವಿಗಳಿಗೆ ಆದೇಶ ಪ್ರತಿಗಳನ್ನು ನೀಡುತ್ತಾರೆ.</p>.<p>ನಾಡಕಚೇರಿಯ ಉಪ ತಹಶೀಲ್ದಾರ್ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜೂನ್ 29ರಂದು ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯ ಗ್ರಾಮಕ್ಕೆ ತೆರಳಿದ್ದರು. ಗ್ರಾಮದಲ್ಲಿ ಸಾರ್ವಜನಿಕರಿಂದ 60 ಅರ್ಜಿಗಳನ್ನು ಸಂಗ್ರಹಿಸಿದ್ದರು. ವೃದ್ಧಾಪ್ಯವೇತನದ ಕುರಿತು ಜಾಗೃತಿ ಮೂಡಿಸಿದ್ದರು.</p>.<p>ಕಚೇರಿಯಲ್ಲಿ ಕುಳಿತು ಇಲಾಖೆಯ ನೀತಿ ನಿಯಮದಂತೆ ಕಡತಗಳನ್ನು ತಯಾರಿಸಿ ಮೇಲಧಿಕಾರಿಗಳ ಸಹಿ ಪಡೆದು ಆದೇಶಗಳನ್ನು ಸಿದ್ದಪಡಿಸಿದ್ದರು. ಬುಧವಾರ (ಜು. 10) ಗ್ರಾಮಕ್ಕೆ ತೆರಳಿ 60 ಫಲಾನುಭವಿಗಳಿಗೂ ಆದೇಶದ ಪ್ರತಿಗಳನ್ನು ವಿತರಿಸಿದರು.</p>.<p>ಗ್ರಾಮೀಣ ಭಾಗಗಳಲ್ಲಿ ವಯಸ್ಸಾದ ಹಲವಾರು ಜನರಿಗೆ ಪಿಂಚಣಿಯ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಕೆಲವರಿಗೆ ಮಾಹಿತಿ ಇದ್ದರೂ ಪದೇ ಪದೇ ಕಚೇರಿಗಳಿಗೆ ಅಲೆದಾಡಲು ಸಾಧ್ಯವಾಗುವುದಿಲ್ಲ. ಈ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡ ಕೆಲವು ಮದ್ಯವರ್ತಿಗಳು ಫಲಾನುಭವಿಗಳಿಂದ ಅಧಿಕಾರಿಗಳ ಹೆಸರಿನಲ್ಲಿ ಸಾವಿರಾರು ರೂಗಳನ್ನು ವಸೂಲಿ ಮಾಡುವ ಬಗ್ಗೆ ದೂರುಗಳು ವ್ಯಾಪಕವಾಗಿದ್ದವು. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮತ್ತು ತಹಶೀಲ್ದಾರ್ ಎಸ್.ಎಲ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ಮೋಹನ್ ತಿಳಿಸಿದರು.</p>.<p><strong>ಹೇಳಿಕೊಳ್ಳಲಾಗದ ಅನುಭವ</strong></p>.<p>ನಮ್ಮ ಗ್ರಾಮಕ್ಕೆ ಬಂದು ಅರ್ಜಿಗಳನ್ನು ಪಡೆದು ಪಿಂಚಣಿ ಮಂಜೂರು ಮಾಡಿರುವುದು ನಮ್ಮ ಪಾಲಿಗೆ ಹೇಳಿಕೊಳ್ಳಲಾರದ ಅನುಭವ. ಎಲ್ಲ ಸಮಸ್ಯೆಗಳಿಗೂ ಇದೇ ರೀತಿ ಸ್ಪಂದಿಸಿದರೆ ಗ್ರಾಮೀಣ ಜನರು ಅಧಿಕಾರಿಗಳನ್ನು ದೇವರಂತೆ ಕಾಣುತ್ತಾರೆ. ಕನಿಷ್ಠ 6 ತಿಂಗಳಿಗೆ ಒಮ್ಮೆಯಾದರೂ ಎಲ್ಲ ಇಲಾಖೆಗಳ ಅಧಿಕಾರಿಗಳು ಒಟ್ಟಿಗೆ ಬರಬೇಕು ಎಂದು ಫಲಾನುಭವಿಗಳಾದ ಮುನಿಯಪ್ಪ ಮತ್ತು ಶಾಂತಮ್ಮ</p>.<p>ಮನವಿ ಮಾಡಿದರು.</p>.<p>* ಕೈವಾರ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲೂ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇವೆ. ಮುಂದಿನ ಗ್ರಾಮ ವೈಜಕೂರು ಎಂದು ತೀರ್ಮಾನಿಸಲಾಗಿದೆ</p>.<p>-<strong>ಮೋಹನ್, </strong>ಉಪತಹಶೀಲ್ದಾರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>