<p>ಚಿಂತಾಮಣಿ: ಸಾರ್ವಜನಿಕರು ಬಾಕಿ ಇರುವ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸುವ ಮೂಲಕ ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದು ಚಿಂತಾಮಣಿ ನಗರಸಭೆ ಪೌರಾಯುಕ್ತ ಜಿ.ಎನ್. ಚಲಪತಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಆಸ್ತಿ ತೆರಿಗೆ ಪಾವತಿದಾರರಿಗೆ ಶೇ 5ರಷ್ಟು ರಿಯಾಯಿತಿ ಸೌಲಭ್ಯವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಅವಕಾಶವನ್ನು ಬಳಸಿಕೊಂಡು ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದರು.</p>.<p>ನಗರದ ವಿವಿಧ ವಾರ್ಡ್ಗಳಲ್ಲಿರುವ ಖಾಲಿ ನಿವೇಶನಗಳಲ್ಲಿ ಕಸ ಸುರಿಯಲಾಗುತ್ತಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ನಿವೇಶನ ಮಾಲೀಕರು ಕೂಡಲೇ ತಮ್ಮ ಜಾಗವನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ನಗರಸಭೆ ಸ್ವಚ್ಛಗೊಳಿಸಿ ಅದರ ವೆಚ್ಚವನ್ನು ತೆರಿಗೆಯಲ್ಲಿ ಸೇರಿಸಲಿದೆ ಎಂದರು.</p>.<p>ನಗರದ ರಸ್ತೆ ಕಾಮಗಾರಿ, ಯುಜಿಡಿ ಕಾಮಗಾರಿ ನಡೆಯುತ್ತಿದೆ. ಸಾರ್ವಜನಿಕರು ಹೊಸದಾಗಿ ನಿರ್ಮಿಸಿದ ರಸ್ತೆ ಅಗೆಯಬಾರದು. ನಗರದ ಹೃದಯಭಾಗದಲ್ಲಿರುವ ಹಳೆಯ ಐಡಿಎಸ್ಎಂಟಿ ವಾಣಿಜ್ಯ ಸಂಕೀರ್ಣ ಶಿಥಿಲಗೊಂಡಿದೆ. ಅದನ್ನು ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-16-785891769</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಸಾರ್ವಜನಿಕರು ಬಾಕಿ ಇರುವ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸುವ ಮೂಲಕ ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದು ಚಿಂತಾಮಣಿ ನಗರಸಭೆ ಪೌರಾಯುಕ್ತ ಜಿ.ಎನ್. ಚಲಪತಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಆಸ್ತಿ ತೆರಿಗೆ ಪಾವತಿದಾರರಿಗೆ ಶೇ 5ರಷ್ಟು ರಿಯಾಯಿತಿ ಸೌಲಭ್ಯವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಅವಕಾಶವನ್ನು ಬಳಸಿಕೊಂಡು ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದರು.</p>.<p>ನಗರದ ವಿವಿಧ ವಾರ್ಡ್ಗಳಲ್ಲಿರುವ ಖಾಲಿ ನಿವೇಶನಗಳಲ್ಲಿ ಕಸ ಸುರಿಯಲಾಗುತ್ತಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ನಿವೇಶನ ಮಾಲೀಕರು ಕೂಡಲೇ ತಮ್ಮ ಜಾಗವನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ನಗರಸಭೆ ಸ್ವಚ್ಛಗೊಳಿಸಿ ಅದರ ವೆಚ್ಚವನ್ನು ತೆರಿಗೆಯಲ್ಲಿ ಸೇರಿಸಲಿದೆ ಎಂದರು.</p>.<p>ನಗರದ ರಸ್ತೆ ಕಾಮಗಾರಿ, ಯುಜಿಡಿ ಕಾಮಗಾರಿ ನಡೆಯುತ್ತಿದೆ. ಸಾರ್ವಜನಿಕರು ಹೊಸದಾಗಿ ನಿರ್ಮಿಸಿದ ರಸ್ತೆ ಅಗೆಯಬಾರದು. ನಗರದ ಹೃದಯಭಾಗದಲ್ಲಿರುವ ಹಳೆಯ ಐಡಿಎಸ್ಎಂಟಿ ವಾಣಿಜ್ಯ ಸಂಕೀರ್ಣ ಶಿಥಿಲಗೊಂಡಿದೆ. ಅದನ್ನು ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-16-785891769</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>