‘ತಾಲ್ಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಮಾರ್ಚ್ 6 ರಂದು ಉಪವಾಸ ಸತ್ಯಾಗ್ರಹ ನಡೆಸಿದ್ದೆ, ನಾಲ್ಕು ದಿನಗಳ ಕಾಲ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿದ್ದೆ, ಶಾಸಕ ಎಂ.ಕೃಷ್ಣಾರೆಡ್ಡಿ, ಅಂದಿನ ತಹಶೀಲ್ದಾರ್ ರಾಜೇಂದ್ರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಒಂದು ವಾರದೊಳಗೆ ಒಳಗೆ ಜಮೀನು ಗುರುತಿಸಿ ಮಂಜೂರಾತಿಗೆ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗೆ ರವಾನಿಸಲಾಗುವುದು ಎಂದು ಭರವಸೆ ನೀಡಿ, ಸತ್ಯಾಗ್ರಹವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದರು. ವಾರದೊಳಗೆ ಪ್ರಸ್ತಾವನೆ ಸಲ್ಲಿಸದಿದ್ದರೆ ಶಾಸಕರು ನನ್ನ ಜತೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಆಶ್ವಾಸನೆ ನೀಡಿದ್ದರು. ಶಾಸಕರ ಮಾತಿಗೆ ಗೌರವ ನೀಡಿ, ಷರತ್ತಿನೊಂದಿಗೆ ಪ್ರತಿಭಟನೆ ಹಿಂತೆಗೆದುಕೊಂಡಿದ್ದೆ’ ಎಂದು ತಿಳಿಸಿದರು.