<p><strong>ಚಿಂತಾಮಣಿ</strong>: ತಾಲ್ಲೂಕಿನ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಎಂಬ ಮಾಧ್ಯಮ ವರದಿ ಆಧರಿಸಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಶುಕ್ರವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜೊತೆಗೆ ಈ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ. </p>.<p>ವಿದ್ಯಾರ್ಥಿನಿಯ ದೈಹಿಕ ಬೆಳವಣಿಗೆ ಕಂಡು ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬಾಲಕಿಯು 5 ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿತ್ತು. ಬಾಲಕಿ ದಸರಾ ರಜೆಗೆಂದು ಊರಿಗೆ ಹೋಗಿದ್ದಾಗ ಆಕೆಯ ಸೋದರ ಮಾವನಿಂದಲೇ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಕುರಿತು ಶಾಲೆಗೆ ಸಂಬಂಧಿಸಿದ ಅಧಿಕಾರಿಗಳು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು. </p>.<p>ಈ ಕೃತ್ಯವೆಸಗಿದ ಆರೋಪಿ ಶೋಧಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. </p>.<p>ಸಂತ್ರಸ್ತ ಬಾಲಕಿಗೆ ಇಲಾಖೆಯಿಂದ ಒದಗಿಸಲಾದ ಸೌಲಭ್ಯ, ಸಂತ್ರಸ್ತ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆಯೇ ಹಾಗೂ ದೂರು ದಾಖಲಾದ ಪ್ರಕರಣದ ಕುರಿತು ಎಫ್ಐಆರ್ ಪ್ರತಿ ಕಳುಹಿಸಿಕೊಡುವಂತೆ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಎಂಬ ಮಾಧ್ಯಮ ವರದಿ ಆಧರಿಸಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಶುಕ್ರವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜೊತೆಗೆ ಈ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ. </p>.<p>ವಿದ್ಯಾರ್ಥಿನಿಯ ದೈಹಿಕ ಬೆಳವಣಿಗೆ ಕಂಡು ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬಾಲಕಿಯು 5 ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿತ್ತು. ಬಾಲಕಿ ದಸರಾ ರಜೆಗೆಂದು ಊರಿಗೆ ಹೋಗಿದ್ದಾಗ ಆಕೆಯ ಸೋದರ ಮಾವನಿಂದಲೇ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಕುರಿತು ಶಾಲೆಗೆ ಸಂಬಂಧಿಸಿದ ಅಧಿಕಾರಿಗಳು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು. </p>.<p>ಈ ಕೃತ್ಯವೆಸಗಿದ ಆರೋಪಿ ಶೋಧಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. </p>.<p>ಸಂತ್ರಸ್ತ ಬಾಲಕಿಗೆ ಇಲಾಖೆಯಿಂದ ಒದಗಿಸಲಾದ ಸೌಲಭ್ಯ, ಸಂತ್ರಸ್ತ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆಯೇ ಹಾಗೂ ದೂರು ದಾಖಲಾದ ಪ್ರಕರಣದ ಕುರಿತು ಎಫ್ಐಆರ್ ಪ್ರತಿ ಕಳುಹಿಸಿಕೊಡುವಂತೆ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>