<p><strong>ಚಿಂತಾಮಣಿ:</strong> ತಾಲ್ಲೂಕಿನ ಚಿನ್ನಸಂದ್ರ-ನಿಡುಗುರ್ಕಿ ರಸ್ತೆ ಸೂಲದೇನಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಚಾಕು ತೋರಿಸಿ ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. </p>.<p>ನಿಡಗುರ್ಕಿಯಲ್ಲಿ ವಾಸವಾಗಿರುವ ಆರ್ಗಾನಿಕ್ ಸಂಸ್ಥೆ ವ್ಯಾಪಾರಿ ರಂಗಸ್ವಾಮಿ ಬೈಕ್ ಕಳೆದುಕೊಂಡವರು. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಹೋಬಳಿ ಅರಬಿಳಚ್ಚಿ ಗ್ರಾಮದವರು. ಅರ್ಗಾಮಿಕ್ ಸಂಸ್ಥೆ ಉದ್ಯೋಗಿಯಾಗಿದ್ದು ಕಳೆದ 5 ತಿಂಗಳಿನಿಂದ ನಿಡಗುರ್ಕಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.</p>.<p>ಅರ್ಗಾನಿಕ್ ಕಂಪನಿ ಗೊಬ್ಬರ ಮತ್ತು ಔಷಧಿಯನ್ನು ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಮಾಲೂರು ತಾಲ್ಲೂಕು ರೈತರಿಗೆ ಮಾರಾಟ ಮಾಡುವುದು ಅವರ ಉದ್ಯೋಗ. ಸೋಮವಾರ ಶ್ರೀನಿವಾಸಪುರದಲ್ಲಿ ವ್ಯಾಪಾರ ಮುಗಿಸಿಕೊಂಡು ಬೈಕ್ನಲ್ಲಿ ಗ್ರಾಮಕ್ಕೆ ಹೋಗುತ್ತಿದ್ದರು. ರಾತ್ರಿ ಸುಮಾರು 7-30 ಸುಮಾರಿನಲ್ಲಿ ಅಡ್ಡಗಟ್ಟಿ ಬೈಕ್ ಕಿತ್ತುಕೊಂಡು ಹೋಗಿದ್ದು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಚಿನ್ನಸಂದ್ರ-ನಿಡುಗುರ್ಕಿ ರಸ್ತೆ ಸೂಲದೇನಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಚಾಕು ತೋರಿಸಿ ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. </p>.<p>ನಿಡಗುರ್ಕಿಯಲ್ಲಿ ವಾಸವಾಗಿರುವ ಆರ್ಗಾನಿಕ್ ಸಂಸ್ಥೆ ವ್ಯಾಪಾರಿ ರಂಗಸ್ವಾಮಿ ಬೈಕ್ ಕಳೆದುಕೊಂಡವರು. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಹೋಬಳಿ ಅರಬಿಳಚ್ಚಿ ಗ್ರಾಮದವರು. ಅರ್ಗಾಮಿಕ್ ಸಂಸ್ಥೆ ಉದ್ಯೋಗಿಯಾಗಿದ್ದು ಕಳೆದ 5 ತಿಂಗಳಿನಿಂದ ನಿಡಗುರ್ಕಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.</p>.<p>ಅರ್ಗಾನಿಕ್ ಕಂಪನಿ ಗೊಬ್ಬರ ಮತ್ತು ಔಷಧಿಯನ್ನು ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಮಾಲೂರು ತಾಲ್ಲೂಕು ರೈತರಿಗೆ ಮಾರಾಟ ಮಾಡುವುದು ಅವರ ಉದ್ಯೋಗ. ಸೋಮವಾರ ಶ್ರೀನಿವಾಸಪುರದಲ್ಲಿ ವ್ಯಾಪಾರ ಮುಗಿಸಿಕೊಂಡು ಬೈಕ್ನಲ್ಲಿ ಗ್ರಾಮಕ್ಕೆ ಹೋಗುತ್ತಿದ್ದರು. ರಾತ್ರಿ ಸುಮಾರು 7-30 ಸುಮಾರಿನಲ್ಲಿ ಅಡ್ಡಗಟ್ಟಿ ಬೈಕ್ ಕಿತ್ತುಕೊಂಡು ಹೋಗಿದ್ದು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>