<p><strong>ಚಿಂತಾಮಣಿ:</strong> ಶ್ರಾವಣಮಾಸದ ಕೊನೆಯ ಶನಿವಾರದ ನಗರ ಹಾಗೂ ತಾಲ್ಲೂಕಿನ ದೇವಾಲಯಗಳಿಗೆ ಭಕ್ತರ ಸಾಗರವೇ ಹರಿದುಬಂದಿತ್ತು.</p>.<p>ದೇವಾಲಯಗಳಲ್ಲಿ ಅಲಂಕಾರ, ಪೂಜೆ, ವಿದ್ಯುತ್ ದೀಪಾಲಂಕಾರ ಮತ್ತಿತರ ಧಾರ್ಮಿಕ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿದವು.</p>.<p>ವರದಾದ್ರಿ ಬೆಟ್ಟದಲ್ಲಿರುವ ವರದಾಂಜನೇಯ ದೇವಾಲಯದಲ್ಲಿ ಅಲಂಕಾರ, ಪೂಜೆ ಹಮ್ಮಿಕೊಳ್ಳಲಾಗಿತ್ತು. 108 ಕೆ.ಜಿ ಪುಳಿಯೋಗರೆ ತಿರುಪ್ಪಾವಾಡ ಸೇವೆಯನ್ನು ನೆರವೇರಿಸಲಾಯಿತು.</p>.<p>ಕೈವಾರದಲ್ಲೂ ದೇವಾಲಯಗಳಿಗೆ ಭಕ್ತರು ಎಡತಾಕುತ್ತಿದ್ದರು. ಯೋಗಿನಾರೇಯಣ ಮಠ, ಅಮರನಾರೇಯಣ ದೇವಸ್ಥಾನ, ಭೀಮಲಿಂಗೇಶ್ವರ ದೇವಸ್ಥಾನಗಳಲ್ಲಿ ಅಭಿಷೇಕ, ಅಲಂಕಾರ, ಪೂಜೆ, ಮಂಗಳಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆದವು.</p>.<p>ಬೂರಗಮಾಕಲಹಳ್ಳಿಯ ವೀರಾಂಜನೇಯ ದೇವಾಲಯದಲ್ಲೂ ಪೂಜೆ, ಅಲಂಕಾರ ಮಾಡಲಾಗಿತ್ತು. ವೀರಾಂಜನೇಯಗೆ ಮಾಡಿದ್ದ ಅಲಂಕಾರ ಭಕ್ತರ ಆಕರ್ಷಣೆಯಾಗಿತ್ತು. ನಗರ ಮತ್ತು ಸುತ್ತಮುತ್ತಲ ಗ್ರಾಮಗಳ ಜನರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಆಲಂಬಗಿರಿಯ ಲಕ್ಷ್ಮಿವೆಂಕಟರಮಣ ದೇವಾಲಯದಲ್ಲೂ ಪೂಜೆ, ಅಲಂಕಾರ ಕಣ್ಣಕೋರೈಸುವಂತಿತ್ತು. ದೇವಾಲಯದ ಒಳಗಡೆ ವಿದ್ಯುತ್ ದೀಪಾಲಂಕಾರ ಜಗಮಗಿಸುತ್ತಿತ್ತು. ಭಕ್ತರು ಬೆಳಗ್ಗೆಯಿಂದ ಸಂಜೆವರೆಗೂ ಸಂಕೀರ್ತನಾ ಸೇವೆ ಸಮರ್ಪಿಸಿದರು.</p>.<p>ಮಹಾಕೈಲಾಸಗಿರಿ, ಮುರುಗಮಲ್ಲದ ಮುಕ್ತೀಶ್ವರ ದೇವಾಲಯ, ಕುರುಟಹಳ್ಳಿಯ ವೀರಾಂಜನೇಯ ದೇವಾಲಯ, ನಗರದ ಕನಂಪಲ್ಲಿಯ ಪಂಚಮುಖಿ ಆಂಜನೇಯ, ನಾಗನಾಥೇಶ್ವರ, ಅಜಾದ್ಚೌಕದ ಹರಿಹರೇಶ್ವರ, ಬೆಂಗಳೂರು ರಸ್ತೆಯ ಶನಿಮಹಾತ್ಮ ದೇವಾಲಯಗಳಲ್ಲೂ ಅಲಂಕಾರ, ಪೂಜೆ ಮತ್ತಿತರ ಕಾರ್ಯಕ್ರಗಳು ನೆರವೇರಿದವು.</p>.<p>ಚಿಲಕಲನೇರ್ಪು ಹೋಬಳಿಯ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಕುಂಠಪುರದ ವೆಂಕಟರಮಣ ದೇವಾಲಯದಲ್ಲೂ ಅಲಂಕಾರ, ಪೂಜೆ ನೆರವೇರಿದವು. ಗ್ರಾಮೀಣ ಭಾಗದ ನೂರಾರು ಜನರು ಆಗಮಿಸಿ ಹಣ್ಣುಕಾಯಿ ನೀಡಿ ಪೂಜೆ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಶ್ರಾವಣಮಾಸದ ಕೊನೆಯ ಶನಿವಾರದ ನಗರ ಹಾಗೂ ತಾಲ್ಲೂಕಿನ ದೇವಾಲಯಗಳಿಗೆ ಭಕ್ತರ ಸಾಗರವೇ ಹರಿದುಬಂದಿತ್ತು.</p>.<p>ದೇವಾಲಯಗಳಲ್ಲಿ ಅಲಂಕಾರ, ಪೂಜೆ, ವಿದ್ಯುತ್ ದೀಪಾಲಂಕಾರ ಮತ್ತಿತರ ಧಾರ್ಮಿಕ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿದವು.</p>.<p>ವರದಾದ್ರಿ ಬೆಟ್ಟದಲ್ಲಿರುವ ವರದಾಂಜನೇಯ ದೇವಾಲಯದಲ್ಲಿ ಅಲಂಕಾರ, ಪೂಜೆ ಹಮ್ಮಿಕೊಳ್ಳಲಾಗಿತ್ತು. 108 ಕೆ.ಜಿ ಪುಳಿಯೋಗರೆ ತಿರುಪ್ಪಾವಾಡ ಸೇವೆಯನ್ನು ನೆರವೇರಿಸಲಾಯಿತು.</p>.<p>ಕೈವಾರದಲ್ಲೂ ದೇವಾಲಯಗಳಿಗೆ ಭಕ್ತರು ಎಡತಾಕುತ್ತಿದ್ದರು. ಯೋಗಿನಾರೇಯಣ ಮಠ, ಅಮರನಾರೇಯಣ ದೇವಸ್ಥಾನ, ಭೀಮಲಿಂಗೇಶ್ವರ ದೇವಸ್ಥಾನಗಳಲ್ಲಿ ಅಭಿಷೇಕ, ಅಲಂಕಾರ, ಪೂಜೆ, ಮಂಗಳಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆದವು.</p>.<p>ಬೂರಗಮಾಕಲಹಳ್ಳಿಯ ವೀರಾಂಜನೇಯ ದೇವಾಲಯದಲ್ಲೂ ಪೂಜೆ, ಅಲಂಕಾರ ಮಾಡಲಾಗಿತ್ತು. ವೀರಾಂಜನೇಯಗೆ ಮಾಡಿದ್ದ ಅಲಂಕಾರ ಭಕ್ತರ ಆಕರ್ಷಣೆಯಾಗಿತ್ತು. ನಗರ ಮತ್ತು ಸುತ್ತಮುತ್ತಲ ಗ್ರಾಮಗಳ ಜನರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಆಲಂಬಗಿರಿಯ ಲಕ್ಷ್ಮಿವೆಂಕಟರಮಣ ದೇವಾಲಯದಲ್ಲೂ ಪೂಜೆ, ಅಲಂಕಾರ ಕಣ್ಣಕೋರೈಸುವಂತಿತ್ತು. ದೇವಾಲಯದ ಒಳಗಡೆ ವಿದ್ಯುತ್ ದೀಪಾಲಂಕಾರ ಜಗಮಗಿಸುತ್ತಿತ್ತು. ಭಕ್ತರು ಬೆಳಗ್ಗೆಯಿಂದ ಸಂಜೆವರೆಗೂ ಸಂಕೀರ್ತನಾ ಸೇವೆ ಸಮರ್ಪಿಸಿದರು.</p>.<p>ಮಹಾಕೈಲಾಸಗಿರಿ, ಮುರುಗಮಲ್ಲದ ಮುಕ್ತೀಶ್ವರ ದೇವಾಲಯ, ಕುರುಟಹಳ್ಳಿಯ ವೀರಾಂಜನೇಯ ದೇವಾಲಯ, ನಗರದ ಕನಂಪಲ್ಲಿಯ ಪಂಚಮುಖಿ ಆಂಜನೇಯ, ನಾಗನಾಥೇಶ್ವರ, ಅಜಾದ್ಚೌಕದ ಹರಿಹರೇಶ್ವರ, ಬೆಂಗಳೂರು ರಸ್ತೆಯ ಶನಿಮಹಾತ್ಮ ದೇವಾಲಯಗಳಲ್ಲೂ ಅಲಂಕಾರ, ಪೂಜೆ ಮತ್ತಿತರ ಕಾರ್ಯಕ್ರಗಳು ನೆರವೇರಿದವು.</p>.<p>ಚಿಲಕಲನೇರ್ಪು ಹೋಬಳಿಯ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಕುಂಠಪುರದ ವೆಂಕಟರಮಣ ದೇವಾಲಯದಲ್ಲೂ ಅಲಂಕಾರ, ಪೂಜೆ ನೆರವೇರಿದವು. ಗ್ರಾಮೀಣ ಭಾಗದ ನೂರಾರು ಜನರು ಆಗಮಿಸಿ ಹಣ್ಣುಕಾಯಿ ನೀಡಿ ಪೂಜೆ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>