<p><strong>ಚಿಂತಾಮಣಿ:</strong> ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ನಗದು ಮತ್ತು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. </p>.<p>ತಮಿಳುನಾಡು ಮೂಲದ ಜಗನ್, ಇಲ್ಲಿನ ಶಾಂತಿನಗರದ ಸಾದಿಕ್ ಪಾಷಾ ಹಾಗೂ ಅಗ್ರಹಾರದ ಟಿಪ್ಪು ಬೇಗ್ ಬಂಧಿತರು. </p>.<p>ಬಂಧಿತರಿಂದ ₹2.55 ಲಕ್ಷ ಮೌಲ್ಯದ 41 ಗ್ರಾಂ ಚಿನ್ನಾಭರಣಗಳು, ₹1.74 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಜೂನ್ 26ರಂದು ನಗರದ ಶಾಂತಿನಗರದಲ್ಲಿ ಕಳ್ಳತನ ನಡೆದಿತ್ತು. ಡಿವೈಎಸ್ಪಿ ಪಿ. ಮುರಳೀಧರ್ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.</p>.<p>ಸಿ.ಸಿ.ಟಿ.ವಿ ಕ್ಯಾಮೆರಾಗಳ ಪರಿಶೀಲನೆಯಿಂದ ಆರೋಪಿಗಳ ಸುಳಿವು ಪತ್ತೆಯಾಗಿತ್ತು. </p>.<p>ಪಿಎಸ್ಐ ಪ್ರಕಾಶ್, ಸಿಬ್ಬಂದಿ ಜಗದೀಶ್, ಮಂಜುನಾಥ್, ಶ್ರೀನಿವಾಸಮೂರ್ತಿ, ಲೋಕೇಶ್, ಸಿದ್ದರೂಡ, ಅನಿಲ್, ಸುರೇಶ್ ವಿಶೇಷ ಪತ್ತೆದಾರಿ ತಂಡದಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ನಗದು ಮತ್ತು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. </p>.<p>ತಮಿಳುನಾಡು ಮೂಲದ ಜಗನ್, ಇಲ್ಲಿನ ಶಾಂತಿನಗರದ ಸಾದಿಕ್ ಪಾಷಾ ಹಾಗೂ ಅಗ್ರಹಾರದ ಟಿಪ್ಪು ಬೇಗ್ ಬಂಧಿತರು. </p>.<p>ಬಂಧಿತರಿಂದ ₹2.55 ಲಕ್ಷ ಮೌಲ್ಯದ 41 ಗ್ರಾಂ ಚಿನ್ನಾಭರಣಗಳು, ₹1.74 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಜೂನ್ 26ರಂದು ನಗರದ ಶಾಂತಿನಗರದಲ್ಲಿ ಕಳ್ಳತನ ನಡೆದಿತ್ತು. ಡಿವೈಎಸ್ಪಿ ಪಿ. ಮುರಳೀಧರ್ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.</p>.<p>ಸಿ.ಸಿ.ಟಿ.ವಿ ಕ್ಯಾಮೆರಾಗಳ ಪರಿಶೀಲನೆಯಿಂದ ಆರೋಪಿಗಳ ಸುಳಿವು ಪತ್ತೆಯಾಗಿತ್ತು. </p>.<p>ಪಿಎಸ್ಐ ಪ್ರಕಾಶ್, ಸಿಬ್ಬಂದಿ ಜಗದೀಶ್, ಮಂಜುನಾಥ್, ಶ್ರೀನಿವಾಸಮೂರ್ತಿ, ಲೋಕೇಶ್, ಸಿದ್ದರೂಡ, ಅನಿಲ್, ಸುರೇಶ್ ವಿಶೇಷ ಪತ್ತೆದಾರಿ ತಂಡದಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>